ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕನ ಕಾಲ್ನಡಿಗೆ


Team Udayavani, Dec 3, 2022, 10:37 AM IST

ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕನ ಕಾಲ್ನಡಿಗೆ

ಉಡುಪಿ: ಮಕ್ಕಳಿಗಾಗಿ ಉತ್ತಮ ಸಮಾಜ ಮತ್ತು ಪರಿಸರ ನಿರ್ಮಿಸುವ ಕುರಿತು ಜನ ಜಾಗೃತಿ, ಅರಿವು ಮೂಡಿಸಲು ವೃತ್ತಿ ಶಿಕ್ಷಣ ಮಾರ್ಗದರ್ಶಕರೊಬ್ಬರು ಬರೋಬ್ಬರಿ 40 ಸಾವಿರ ಕಿ.ಮೀ. ಕಾಲ್ನಡಿಗೆಯಲ್ಲಿ ಸಂಚರಿಸುವ ಸಂಕಲ್ಪ ಮಾಡಿದ್ದಾರೆ.

ಗುಜರಾತ್‌ ಮೂಲದ ಯೋಗೇನ್‌ ಶಾ ಈ ಸಂಕಲ್ಪ ಮಾಡಿರುವ ಶಿಕ್ಷಕ. ಅವರು ಈಗಾಗಲೇ 14 ಸಾವಿರ ಕಿ.ಮೀ. ನಡಿಗೆಯನ್ನು ಪೂರೈಸಿದ್ದು ಉಡುಪಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹೆಜ್ಜೆಯಿಟ್ಟಿದ್ದಾರೆ.

2002ರಲ್ಲಿ ಆಕ್ಸ್‌ಫ‌ರ್ಡ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಬೆನ್ನುಮೂಳೆ ಸವಕಲು ಕಾಯಿಲೆಯಿಂದ 2007ರಲ್ಲಿ ಭಾರತಕ್ಕೆ ವಾಪಸ್‌ ಆಗಿ ಯೋಗ, ದೈಹಿಕ ಶ್ರಮ ಹಾಗೂ ಕಾಲ್ನಡಿಗೆಯ ಮೂಲಕ ಕಾಯಿಲೆಗೆ ಪರಿಹಾರ ಕಂಡುಕೊಂಡರು. ಕೊರೊನಾಸಂದರ್ಭ ಮನುಷ್ಯ ಪ್ರಕೃತಿಗೆ ಹತ್ತಿರವಾಗುತ್ತಿರುವುದನ್ನು ಗಮನಿಸಿ, ದೇಶದ ಮಕ್ಕಳ ಭವಿಷ್ಯ ಇನ್ನಷ್ಟು ಉತ್ತಮವಾಗಬೇಕು ಎಂಬ ಪರಿಕಲ್ಪನೆಯಡಿ ಜನಜಾಗೃತಿ ಮೂಡಿಸಲು 2020ರ ಜೂನ್‌ 15ರಂದು ಗುಜರಾತ್‌ನ ವಡೋದರದಿಂದ ಪಾದಯಾತ್ರೆ ಆರಂಭಿಸಿದರು. ಚಂಡೀಗಢ ಮೂಲಕ ದಿಲ್ಲಿ ತಲುಪಿದ್ದರು. ಅನಂತರ ದಕ್ಷಿಣ ದಿಕ್ಕಿಗೆ ಸಾಗಿ, ಗೋವಾದ ಮೂಲಕ ಕರ್ನಾಟಕ ಪ್ರವೇಶ ಮಾಡಿದ್ದರು.

“ಉದಯವಾಣಿ’ ಜತೆ ಮಾತನಾಡಿದ ಯೋಗೇನ್‌ ಶಾ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕು. ಪರಸರದ ಜತೆ ಜತೆ ಸರಳ ಜೀವನ ನಡೆಸುವುದು ಪ್ರಸ್ತುತ ಹೆಚ್ಚು ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು, ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿಕೊಂಡು ಬರುತ್ತಿದ್ದೇನೆ. ದಕ್ಷಿಣದಲ್ಲಿ ಕನ್ಯಾಕುಮಾರಿಯವರೆಗೂ ಕ್ರಮಿಸಿ ಅನಂತರ ಶ್ರೀಲಂಕಾ, ಬಾಂಗ್ಲಾ, ಭೂತಾನ್‌, ಯುಎಸ್‌ಎ ಸಹಿತ ಹಲವು ದೇಶಗಳಲ್ಲೂ ಪಾದಯಾತ್ರೆ ನಡೆಸಲಿದ್ದೇನೆ ಎಂದರು.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.