ಸುಜ್ಲಾನ್‌ ಕಂಪೆನಿ: ಗುತ್ತಿಗೆ ಕಾರ್ಮಿಕ ಸಮಸ್ಯೆ ತಾತ್ಕಾಲಿಕ ಪರಿಹಾರ


Team Udayavani, Apr 12, 2017, 2:49 PM IST

odambadike-parihara.jpg

ಪಡುಬಿದ್ರಿ: ಉಡುಪಿ ತಹಶೀಲ್ದಾರ್‌ ಮಹೇಶ್ಚಂದ್ರ, ಕಾರ್ಮಿಕ ಇಲಾಖಾಧಿಕಾರಿ ಎಂ.ಪಿ. ವಿಶ್ವನಾಥ್‌, ಕ್ಷೇತ್ರದ ಶಾಸಕ ವಿನಯಕುಮಾರ್‌ ಸೊರಕೆ, ಕಾರ್ಮಿಕ ರಕ್ಷಣಾ ವೇದಿಕೆಯ ರವಿ ಶೆಟ್ಟಿ ಮತ್ತಿತರ ಸಮ್ಮುಖದಲ್ಲಿ ಸುಜ್ಲಾನ್‌ ಗುತ್ತಿಗೆದಾರರು, ಕಾರ್ಮಿಕ ನಾಯಕರು, ಸುಜ್ಲಾನ್‌ ಎಸ್‌ ಇ ಬ್ಲೇಡ್ಸ್‌ ಅಧಿಕಾರಿಗಳ ನಡುವೆ ಒಡಂಬಡಿಕೆಯೇರ್ಪಟ್ಟು ಒಮ್ಮತದ ಅಭಿಪ್ರಾಯ ವಿನಿಮಯ ಪತ್ರಕ್ಕೆ ಸಹಿ ಮಾಡಿಕೊಳ್ಳುವ ಮೂಲಕ ಸುಜ್ಲಾನ್‌ ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಯಿತು.

ಕಂಪೆನಿಯು ಕೆಲಸದಿಂದ ತೆಗೆದಿದ್ದ 750 ಮಂದಿ ಗುತ್ತಿಗೆ ಕಾರ್ಮಿಕರಿಗೆ ಒಂದು ತಿಂಗಳ ಪೂರ್ಣ ಸಂಬಳ ನೀಡಿಕೆ, ಯುನಿಟೆಕ್‌ ಕಂಪೆನಿ ಬಾಕಿ ಉಳಿಸಿಕೊಂಡಿದ್ದ ಬೋನಸ್‌ ವಿತರಣೆ ಹಾಗೂ ಇದೇ ಗುತ್ತಿಗೆ ಕಾರ್ಮಿಕರನ್ನು ಕೆಲಸಕ್ಕೆ ಮರು ನೇಮಿಸಿಕೊಳ್ಳುವ ಮತ್ತು ವರ್ಗಾವಣೆ ಮಾಡಬೇಕಾದಲ್ಲಿ ಕಾರ್ಮಿಕರೊಂದಿಗೆ ಚರ್ಚಿಸಿ ವರ್ಗಾವಣೆಗೊಳಿಸುವ ನಿರ್ಣಯಗಳೊಂದಿಗೆ ಕಾರ್ಮಿಕ ಸಮಸ್ಯೆಗೆ ತತ್ಕಾಲದ ಪರಿಹಾರ ಕಂಡುಕೊಳ್ಳಲಾಯಿತು.

ಮಂಗಳವಾರ ಬೆಳಗ್ಗೆ ಮತ್ತೆ ಒಗ್ಗೂಡಿದ ಸುಜ್ಲಾನ್‌ ಗುತ್ತಿಗೆ ಕಾರ್ಮಿಕರು ಮುಂಜಾನೆ ಪಾಳಿಗೆ ಕಾರ್ಮಿಕರನ್ನು ಕರೆತಂದಿದ್ದ ಬಸ್‌ಗಳನ್ನು ಗೇಟಲ್ಲೇ ತಡೆದು ನಿಲ್ಲಿಸಿದರು. ಬಸ್‌ಗಳನ್ನು ಕಂಪೆನಿಯೊಳಕ್ಕೆ ತೆರಳಲು ಈ ಮುಷ್ಕರ ನಿರತ ಕಾರ್ಮಿಕರು ಅನುವು ಮಾಡಿಕೊಡಲಿಲ್ಲ. ಬಿಜೆಪಿ, ಜೆಡಿಎಸ್‌ ನಾಯಕರು ಕಾರ್ಮಿಕರಿಗೆ ಸಾಥ್‌ ನೀಡಿದ್ದರು. ಒಂದೊಮ್ಮೆ ಕಾರ್ಮಿಕ
ಇಲಾಖಾ ಅಧಿಕಾರಿಗಳು, ಉಡುಪಿ ತಹಶೀಲ್ದಾರರು ಕಂಪೆನಿಯ ಅಧಿಕಾರಿಗಳೊಂದಿಗೆ ಕಂಪೆನಿಯ ಒಳಗೆ ಮಾತುಕತೆಗೆ ತೊಡಗಿದ್ದಾಗ ಮತ್ತೆ ಸಿಟ್ಟಿಗೆದ್ದ ಕಾರ್ಮಿಕ ನಾಯಕರು ತಮ್ಮನ್ನು ಬಿಟ್ಟು ಮಾತುಕತೆ ನಡೆಸಬಾರದೆಂಬಂತೆ ಪಟ್ಟು ಹಿಡಿದಿದ್ದರು. ಆಗ ಅವರನ್ನು ಸಮಾಧಾನಿಸಿ ಹೊರಕ್ಕೆ ಕಳುಹಿಸಲಾಗಿತ್ತು. ತಹಶೀಲ್ದಾರ್‌ ಮಹೇಶ್ಚಂದ್ರ ಹೊರಗೆ ಬಂದು ಕಾರ್ಮಿಕರ ಬಳಿ ಮಾತುಕತೆಗಳ ಬಗ್ಗೆ ವಿವರಿಸಿದರು.

ಬೇಡಿಕೆ ಕುಸಿದಿರುವುದರಿಂದ ಗುತ್ತಿಗೆ ಆಧಾರದಲ್ಲಿದ್ದ ಕಾರ್ಮಿಕರನ್ನು ಕೈಬಿಡಲಾಗಿದೆ ಎಂದು ಸುಜ್ಞಾನ್‌ ಕಂಪೆನಿಯ ಅಧಿಕಾರಿಗಳು ಸೋಮವಾರ ತಿಳಿಸಿದ್ದರು.  

ಬಾಗಿಲ ಗಾಜು ತಾಗಿ ಗಾಯ
ಸಂಜೆ ವೇಳೆಗೆ ಕಾರ್ಮಿಕ ಅಧಿಕಾರಿಯೋರ್ವರ ತಪ್ಪು ನಡೆಯಿಂದಾಗಿ ಕಾರ್ಮಿಕರ ಆಕ್ರೋಶ ಭುಗಿಲೆದ್ದು ಅಧಿಕಾರಿಗಳ ಮಟ್ಟದ ಸಭೆ ನಡೆಯುತ್ತಿದ್ದ ಆಸ್ಪೆನ್‌ ಇನ್‌ಫ್ರಾಸ್ಟ್ರಕ್ಚರ್‌ ಆಡಳಿತ ಕಚೇರಿಯೊಳಗೆ ಪ್ರವೇಶಿಸಲು ಹವಣಿಸಿದಾಗ ಬಾಗಿಲಿನ ಗಾಜು ಬಿದ್ದು, ಅದು ಜೆಡಿಎಸ್‌ ನಾಯಕ ಇಸ್ಮಾಯಿಲ್‌ ಪಲಿಮಾರ್‌ ಕೈಗೆ ತಗುಲಿ ಗಾಯವಾಯಿತು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.

ಸಂಜೆ ಶಾಸಕ ಸೊರಕೆ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಒಡಂಬಡಿಕೆಯ ಪ್ರಸ್ತಾವ ಅವರ ಮುಂದಿಟ್ಟ ಬಳಿಕ ಕಾರ್ಮಿಕರು ಅಲ್ಲಿಂದ ನಿರ್ಗಮಿಸಿದರು.  ಕಾರ್ಮಿಕ ಇಲಾಖಾ ನಿರೀಕ್ಷಕರಾದ ರಾಮಮೂರ್ತಿ, ಜೀವನ್‌ ಕುಮಾರ್‌ ಒಡಂಬಡಿಕೆಯನ್ನು ಕಾರ್ಯರೂಪಕ್ಕಿಳಿಸಲು ಸಹಕರಿಸಿದ್ದರು. ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ, ಕಾಪು ಸರ್ಕಲ್‌ ಹಾಲಮೂರ್ತಿ ರಾವ್‌ ಮತ್ತಿತರ ಕಡೆಗಳ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ಏರ್ಪಡಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.