PM ಸ್ವನಿಧಿ ಸಮರ್ಪಕ ಅನುಷ್ಠಾನ: ಮಾಜಿ ಸಚಿವ ರಾಮದಾಸ್‌


Team Udayavani, Nov 9, 2023, 1:17 AM IST

PM ಸ್ವನಿಧಿ ಸಮರ್ಪಕ ಅನುಷ್ಠಾನ: ಮಾಜಿ ಸಚಿವ ರಾಮದಾಸ್‌

ಉಡುಪಿ: ಕೇಂದ್ರ ಸರಕಾರದ ಪಿಎಂ ಸ್ವನಿಧಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಉಡುಪಿ ಜಿಲ್ಲೆ ದೇಶದಲ್ಲೇ ಮುಂದೆ ಇದ್ದು ಈಗ ಆ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದೆ.

ಹೀಗಾಗಿ ಯೋಜನೆಯಡಿ ಇನ್ನಷ್ಟು ಫ‌ಲಾನುಭವಿಗಳ ಆಯ್ಕೆಯ ಜತೆಗೆ ಹೆಚ್ಚೆಚ್ಚು ಪ್ರಚಾರ ನಡೆಸುವ ಬಗ್ಗೆ ಅಧಿಕಾರಿಗಳ ಜತೆಗೂ ಚರ್ಚೆ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಯೋಜನೆಯ ರಾಜ್ಯ ಸಂಚಾಲಕ ಎ. ರಾಮದಾಸ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜ್ಯದ ನಗರ ಪ್ರದೇಶದ 3.8 ಲಕ್ಷ, ಜಿಲ್ಲೆಯಲ್ಲಿ 7,656 ಬೀದಿಬದಿ ವ್ಯಾಪಾರಿಗಳು ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 500 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ನೀಡಿದೆ. ಯೋಜನೆಯಡಿ ಆರಂಭದಲ್ಲಿ 10 ಸಾವಿರ, ಅನಂತರ 20 ಸಾವಿರ, ಮೂರನೇ ಕಂತಿನಲ್ಲಿ 50 ಸಾವಿರ ರೂ. ನೀಡಲಾಗುತ್ತದೆ. 50 ಸಾವಿರ ಪಾವತಿಸಿದವರಿಗೆ ಮುದ್ರಾ ಯೋಜನೆಯ ಮೂಲಕ 10 ಲಕ್ಷ ರೂ. ವರೆಗೂ ಸಾಲ ಸೌಲಭ್ಯ ನೀಡಲಾಗುತ್ತದೆ. ಪ್ರಧಾನಮಂತ್ರಿ ಕಚೇರಿಯಿಂದ ದಾಖಲೆ ನೀಡುವ ಜತೆಗೆ ಪ್ರಧಾನ ಮಂತ್ರಿಯವರಿಂದ ಫ‌ಲಾನುಭವಿಗಳಿಗೆ ಖುದ್ದು ಪತ್ರ ಬರಲಿದೆ ಎಂದು ಹೇಳಿದರು.

ಪಿಎಂ ಸ್ವನಿಧಿ ಹಾಗೂ ಪಿಎಂ ವಿಶ್ವಕರ್ಮ ಯೋಜನೆಯ ಸಮರ್ಪಕ ಜಾರಿಯ ಬಗ್ಗೆಯೂ ಈಗಾಗಲೇ 26 ಜಿಲ್ಲೆಗಳಲ್ಲಿ ಸಭೆ ನಡೆಸಿದ್ದೇವೆ. ವಿಶ್ವಕರ್ಮ ಯೋಜನೆಗೆ ರಾಜ್ಯದ 18 ಜಿಲ್ಲೆಗಳನ್ನು ಪರಿಗಣಿಸಲಾಗಿದೆ. ಉಳಿದ ಜಿಲ್ಲೆಗಳನ್ನು 2 ಹಂತದಲ್ಲಿ ಪರಿಗಣಿಸಲಿದೆ. ಈ ಯೋಜನೆಯಡಿ 13 ಸಾವಿರ ಕೋ.ರೂ.ಗಳನ್ನು ಕೇಂದ್ರ ಸರಕಾರ ಮೀಸಲಿಟ್ಟಿದೆ ಎಂದರು.

ಸಾಮಾಜಿಕ ಸ್ಥಿತಿ ಅಧ್ಯಯನ
ರಾಜ್ಯದ ನಗರ ಸ್ಥಳೀಯ ಸಂಸ್ಥೆಯಲ್ಲಿನ ಬೀದಿ ವ್ಯಾಪಾರಿಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನಕ್ಕೆ ಕೇಂದ್ರ ಸರಕಾರ ಆದೇಶಿಸಿದೆ. ಸ್ವನಿಧಿ ಯೋಜನೆಯಡಿ ಪತ್ರಿಕೆ ವಿತರಕರನ್ನು ತರಲಾಗಿದೆ. ಹಾಗೆಯೇ ಮನೆ ಮನೆಗೆ ಹಾಲು ಹಾಕುವವರು, ಕೇಟರಿಂಗ್‌ನವರು, ಫುಡ್‌ ಡೆಲಿವರಿ ಬಾಯ್ಸ, ಮನೆಯಲ್ಲಿ ಆಹಾರೋತ್ಪನ್ನ ಸಿದ್ಧಪಡಿಸುವವರನ್ನು ಕೇಂದ್ರ ಸರಕಾರದ ವಿವಿಧ ಯೋಜನೆ ಗಳ ಒಳಗೆ ತರುವ ಪ್ರಯತ್ನವೂ ನಡೆಯುತ್ತಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‌ ಶೆಟ್ಟಿ ಕುತ್ಯಾರ್‌, ಪಿಎಂ ಸ್ವನಿಧಿ ಯೋಜನೆ ಜಿಲ್ಲಾ ಸಂಚಾಲಕರಾದ ಪ್ರಕಾಶ್‌ ಶೆಟ್ಟಿ ಪಾದೇಬೆಟ್ಟು, ಕಿಶೋರ್‌ ಕುಂದಾಪುರ, ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರ ಶಿವಕುಮಾರ್‌ ಅಂಬಲಪಾಡಿ, ಪ್ರಮುಖರಾದ ವೀಣಾ ಶೆಟ್ಟಿ, ನಳಿನಿ ಪ್ರದೀಪ್‌ ರಾವ್‌, ಅನಿತಾ ಶ್ರೀಧರ್‌, ಶ್ರೀನಿಧಿ ಹೆಗ್ಡೆ, ದಾವುದ್‌ ಅಬೂಬಕ್ಕರ್‌ ಇದ್ದರು.

ಬರ: ರಾಜಕೀಯ ಬೇಡ
ಚುನಾವಣೆ ಉದ್ದೇಶದಿಂದ ಯಾವುದೇ ಕೆಲಸ ಮಾಡುತ್ತಿಲ್ಲ. ಕೇಂದ್ರ ಸರಕಾರದ ಯೋಜನೆಯನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ಬರ ಅಧ್ಯಯನಕ್ಕೆ ಬಿಜೆಪಿ ತಂಡ ಹೋಗುತ್ತಿದ್ದಂತೆ ರಾಜ್ಯ ಸರಕಾರಕ್ಕೆ ಎಚ್ಚರವಾಗಿದೆ. ಈ ವಿಷಯದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ರಾಜಕೀಯ ಮಾಡುವುದನ್ನು ನಿಲ್ಲಿಸಿ ತತ್‌ಕ್ಷಣ ಪರಿಹಾರ ಅನುದಾನ ಘೋಷಣೆ ಮಾಡಬೇಕು ಎಂದು ರಾಮದಾಸ್‌ ಆಗ್ರಹಿ ಸಿದರು. ಪಕ್ಷದ ಸೂಚನೆಯಂತೆ ಕೆಲಸ ಮಾಡುತ್ತಿದ್ದೇವೆ. ಶಾಸಕ, ಸಂಸದರಿಗಿಂತ ಹೆಚ್ಚಿನ ಕೆಲಸವನ್ನು ಪಕ್ಷವೀಗ ಕೊಟ್ಟಿದೆ ಎಂದರು.

 

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.