ಗಬ್ಬೆದ್ದು ನಾರುತ್ತಿದೆ ಆದಿ ಉಡುಪಿ ಮಾರುಕಟ್ಟೆ ಶೌಚಾಲಯ


Team Udayavani, Jun 18, 2024, 4:06 PM IST

ಗಬ್ಬೆದ್ದು ನಾರುತ್ತಿದೆ ಆದಿ ಉಡುಪಿ ಮಾರುಕಟ್ಟೆ ಶೌಚಾಲಯ

ಉಡುಪಿ: ದಿನಕ್ಕೆ ನೂರಾರು ಮಂದಿ ಭೇಟಿ ನೀಡುವ ಆದಿಉಡುಪಿಯ ಮೀನು ಮಾರುಕಟ್ಟೆಯ ಒಳಭಾಗದಲ್ಲಿರುವ ಸಾರ್ವಜನಿಕ ಶೌಚಾಲಯವು ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ಶೌಚಾಲಯ ಕೊಠಡಿಗಳನ್ನು ಸ್ವತ್ಛಗೊಳಿಸದೆ ಹಲವಾರು ವರ್ಷಗಳೇ ಕಳೆದಂತಿದೆ. ಇದರ ಒಳಭಾಗದಲ್ಲಿ ಮದ್ಯದ ಬಾಟಲಿಗಳು ಹಾಗೂ ಪ್ಲಾಸ್ಟಿಕ್‌ ಬಾಟಲಿಗಳು ತುಂಬಿಕೊಂಡಿವೆ.ಗೋಡೆಗಳ ಬಣ್ಣವೂ ಮಾಸಿ ಹೋಗಿದ್ದು, ಜೇಡರ ಬಲೆಗಳು ಆವರಿಸಿಕೊಂಡಿವೆ.

ಸೊಳ್ಳೆಗಳ ಉತ್ಪತ್ತಿ ತಾಣ
ಈ ಶೌಚಾಲಯವು ಮಾರಕ ರೋಗವಾಹಕ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿದೆ. ಶೌಚಾಲಯವು ಸುಸ್ಥಿತಿಯಲ್ಲಿಲ್ಲದ ಕಾರಣ ಮೀನು ಮಾರುಕಟ್ಟೆಗೆ ಬರುವ ಗ್ರಾಹಕರು, ವ್ಯಾಪಾರಸ್ಥರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ. ಇದರ ಒಳಪ್ರವೇಶಿಸುವುದೇ ಅಸಾಧ್ಯವಾಗಿದೆ. ಮುಖ್ಯವಾಗಿ ಶೌಚಾಲಯದ ಒಳಭಾಗದಲ್ಲಿ ನೀರು ನಿಂತಿದೆ.

ಎಲ್ಲರೂ ಅದರ ಮೇಲೆ ಶೌಚ ಮಾಡಿ ಹೋಗುತ್ತಿರುವುದರಿಂದ ಇದು ಸೊಳ್ಳೆ ಉತ್ಪಾದನ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿ 15ಕ್ಕೂ ಅಧಿಕ ಅಂಗಡಿಗಳಿದ್ದು, ಎಲ್ಲರೂ ಇದನ್ನೇ ಆಶ್ರಯಿಸಿಕೊಂಡಿದ್ದಾರೆ. ನಿರ್ವಹಣೆ ಬಗ್ಗೆ ಸ್ಥಳಿಯಾಡಳಿತಕ್ಕೆ ತಿಳಿಸಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನುತ್ತಾರೆ ಸಾರ್ವಜನಿಕರೊಬ್ಬರು.

ನಗರಸಭೆಯಿಂದ ನೀರು ಪೂರೈಕೆ
ಈ ಮಾರುಕಟ್ಟೆಗೆ ನೀರು ಪೂರೈಕೆ ನಗರಸಭೆಯ ಮೂಲಕವೇ ನಡೆಯುತ್ತಿದೆ. ಬುಧವಾರ ಇಲ್ಲಿ ವಾರದ ಸಂತೆ ನಡೆಯುವ ವೇಳೆ ಹಾಗೂ ರವಿವಾರದಂದು ಅಧಿಕ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸೇರುತ್ತಾರೆ. ಆದರೂ ಇಲ್ಲಿನ ಶೌಚಾಲಯದ ಬಗ್ಗೆ ಸೂಕ್ತ ನಿರ್ವಹಣೆ ಮಾಡದಿರುವ ಕಾರಣ ಗಬ್ಬು ನಾತ ಮಾರುಕಟ್ಟೆಯ ಹೊರಭಾಗದವರೆಗೂ ವಿಸ್ತರಿಸಿ ಜನರೇ ಅಸಹ್ಯ ಪಟ್ಟುಕೊಳ್ಳುವಂತಾಗಿದೆ.

ಕೆಲವು ವರ್ಷಗಳ ಹಿಂದೆ ಶವ ಪತ್ತೆ
5 ವರ್ಷಗಳ ಹಿಂದೆ ಈ ಮಾರುಕಟ್ಟೆಯಲ್ಲಿದ್ದ ಶೌಚಗುಂಡಿಗೆ ವ್ಯಕ್ತಿಯೊಬ್ಬರು ಬಿದ್ದು ಸಾವನ್ನಪ್ಪಿದ್ದರು. ಆದರೆ ಹಲವು ದಿನಗಳವರೆಗೂ ಯಾರಿಗೂ ತಿಳಿದಿರಲಿಲ್ಲ. ಅನಂತರ ಕೊಳೆತ ವಾಸನೆ ಬಂದು ಪರಿಶೀಲನೆ ನಡೆಸಿದಾಗ ಶೌಚಗುಂಡಿಯಲ್ಲಿ
ಶವ ಪತ್ತೆಯಾಗಿತ್ತು. ಅನಂತರ ಕೆಲವು ಬಾರಿ ಸ್ಥಳೀಯಾಡಳಿತ ಇದರ ನಿರ್ವಹಣೆ ನೋಡಿಕೊಂಡಿತ್ತಾದರೂ ಈಗ ಮತ್ತೆ ಅದೇ ಸ್ಥಿತಿ ಎದುರಾಗಿದೆ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು.

ಶುಚಿತ್ವಕ್ಕೆ ಕ್ರಮ
ಈ ಹಿಂದೆ ನಡೆದ ಮಾತುಕತೆಯಂತೆ ಮಾರುಕಟ್ಟೆಯವರೇ ಅದರ ನಿರ್ವಹಣೆ ಮಾಡುವುದಾಗಿ ತಿಳಿಸಿದ್ದರು. ಈ ಬಗ್ಗೆ ಮತ್ತೂಮ್ಮೆ ಅವರ ಬಳಿ ಚರ್ಚಿಸಲಾಗುವುದು. ಇಲ್ಲದಿದ್ದರೆ ನಗರಸಭೆಯ ಮೂಲಕವೇ ತ್ವರಿತವಾಗಿ ಇದರ ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು.
-ರಾಯಪ್ಪ, ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.