![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 16, 2020, 4:56 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಕೋವಿಡ್ 19 ಸೋಂಕು ಭೀತಿ ಹಿನ್ನೆಲೆಯಲ್ಲಿ ಎಪಿಎಂಸಿ ವತಿಯಿಂದ ನಡೆಯುತ್ತಿದ್ದ ಜಿಲ್ಲೆಯ ಎಲ್ಲ ಸಂತೆಗಳನ್ನು ರದ್ದುಗೊಳಿಸಲಾಗಿದೆಯಾದರೂ ಬುಧವಾರ ಆದಿ ಉಡುಪಿಯಲ್ಲಿ ಸಂತೆ ನಡೆಸಲು ಪ್ರಯತ್ನಿಸಿದ ವರ್ತಕರನ್ನು ನಗರಸಭೆ ಅಧಿಕಾರಿಗಳು ಚದುರಿಸಿದ್ದಾರೆ.
ಸಂತೆಗೆ ರಾಜ್ಯದಲ್ಲಿ ನಿಷೇಧವಿದೆ. ಕೆಲವು ವರ್ತಕರು ಮಾತ್ರ ಸರಕಾರದ ಆದೇಶ ಉಲ್ಲಂಘಿಸಿ ಬುಧವಾರ ಆದಿ ಉಡುಪಿಯಲ್ಲಿ ಸಂತೆ ನಡೆಸುವ ಪ್ರಯತ್ನ ಮಾಡಿದ್ದಾರೆ. ಜನರು ಸಾಮಾಜಿಕ ಅಂತರವನ್ನು ಮರೆತು ತರಕಾರಿ ಹಣ್ಣು ಹಂಪಲು ಖರೀದಿಸಲು ಮುಗಿಬಿದ್ದರು. ಈ ಬಗ್ಗೆ ಮಾಹಿತಿ ದೊರಕುತ್ತಿದಂತೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಬಂದ ವರ್ತಕರನ್ನು ಓಡಿಸಿದ್ದಾರೆ. ಎಪಿಎಂಸಿ ಪ್ರಾಂಗಣದೊಳಗೆ ಸಂತೆ ನಡೆದಿಲ್ಲ. ಹೊರಗೆ ಕೆಲವು ವರ್ತಕರು ಬಂದು ವ್ಯವಹಾರ ನಡೆಸಲು ಯತ್ನಿಸಿದರು ಎಂದು ತಿಳಿದುಬಂದಿದೆ.
ಹಿಂದೆ ಕಳುಹಿಸಲಾಗಿದೆ
ಕೋವಿಡ್ 19 ಭೀತಿಯಿಂದ ಸಂತೆಯನ್ನು ರದ್ದುಗೊಳಿಸಲಾಗಿದೆ. ಕೆಲವು ವರ್ತಕರು ಬಂದು ವ್ಯಾಪಾರ ಮಾಡಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದ್ದು, ತತ್ಕ್ಷಣ ಅವರನ್ನು ವ್ಯಾಪಾರ ನಡೆಸದಂತೆ ಎಚ್ಚರಿಕೆ ನೀಡಿ ವರ್ತಕರನ್ನು ಹಿಂದೆ ಕಳುಹಿಸಲಾಗಿದೆ ಎಂದು ನಗರಸಭೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.