ಇಂದಿನಿಂದ ಅಗ್ನಿಪಥ್‌ ಸೇನಾ ನೇಮಕಾತಿ: ಮೊದಲ ಬಾರಿ ಉಡುಪಿ ಆತಿಥ್ಯ


Team Udayavani, Jul 17, 2023, 5:58 AM IST

ಇಂದಿನಿಂದ ಅಗ್ನಿಪಥ್‌ ಸೇನಾ ನೇಮಕಾತಿ: ಮೊದಲ ಬಾರಿ ಉಡುಪಿ ಆತಿಥ್ಯ

ಉಡುಪಿ: ಕೃಷ್ಣನಗರಿಯಲ್ಲಿ ಇಂದಿನಿಂದ ಜು. 25ರ ವರೆಗೆ ನಡೆಯಲಿರುವ ಅಗ್ನಿಪಥ್‌ ರ‍್ಯಾಲಿಗೆ ಜಿಲ್ಲಾಡಳಿತ ಮೊದಲ ಬಾರಿಗೆ ಆತಿಥ್ಯ ವಹಿಸುತ್ತಿದೆ.

ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ಇದಕ್ಕಾಗಿ ಸಜ್ಜುಗೊಂಡಿದ್ದು, ಉಡುಪಿಯ ಯುವಕರು ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಉಡುಪಿಯಲ್ಲಿ ಇದು ಮೂರನೇ ಬಾರಿಗೆ ನಡೆಯುತ್ತಿರುವ ಸೇನಾ ನೇಮಕಾತಿ ರ್ಯಾಲಿಯಾಗಿದ್ದು, 2013, 2020 ಇದೀಗ ಅಗ್ನಿಪಥ್‌ ರ‍್ಯಾಲಿ ಸೇರಿ ಮೂರನೇ ಸೇನೆ ನೇಮಕ ರ‍್ಯಾಲಿ ಉಡುಪಿಯಲ್ಲಿ ನಡೆಯುತ್ತಿದೆ. ಅಗ್ನಿಪಥ್‌ ರ‍್ಯಾಲಿ ಮೊದಲ ಬಾರಿಗೆ ನಡೆಯುತ್ತಿದ್ದು, ಉಡುಪಿ, ದ.ಕ. ಸಹಿತ 11 ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ದಿನಕ್ಕೆ 600ರಿಂದ ಸಾವಿರ ಮಂದಿಗೆ ಪರೀಕ್ಷೆ ನಡೆಯಲಿದೆ. ಈ ವರ್ಷ ಲಿಖಿತ ಪರೀಕ್ಷೆಯಲ್ಲಿ 6,800 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರು. 6,800 ಅಭ್ಯರ್ಥಿಗಳ ಪೈಕಿ ಜಿಲ್ಲೆಯಿಂದ ಭಾಗವಹಿಸುತ್ತಿರುವುದು 59 ಮಂದಿ ಮಾತ್ರ. ಈ ಭಾಗದ ಯುವಕರನ್ನು ರಕ್ಷಣ ಪಡೆಗಳಿಗೆ ಸೇರುವಂತೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಾವಳಿಯ ಯುವಕರು ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸುವಂತಾಗಬೇಕು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಅಜ್ಜರಕಾಡು ಕ್ರೀಡಾಂಗಣ ಸೇನೆ, ಪೊಲೀಸ್‌ ನೇಮಕಾತಿ ರ‍್ಯಾಲಿಗೆ ಪೂರಕವಾಗುವಂತ ಮೂಲಸೌಕರ್ಯ ಉತ್ತಮ ವ್ಯವಸ್ಥೆ ಹೊಂದಿದೆ. ಈಗಾಗಲೇ ಸೇನೆಯ ಅಧಿಕಾರಿಗಳ ತಂಡ ಅಜ್ಜರಕಾಡು ಕ್ರೀಡಾಂಗಣಕ್ಕೆ ಆಗಮಿಸಿ ಸಿದ್ಧತೆ ಕೆಲಸ ಪೂರ್ಣಗೊಳಿಸಿದ್ದಾರೆ. ನಗರಸಭೆ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಲಾಗಿದೆ.

ಟೀಮ್‌ ನೇಷನ್‌ ಫ‌ಸ್ಟ್‌ ಜಾಗೃತಿ
ಜಿಲ್ಲೆಯಲ್ಲಿ ರಕ್ಷಣ ಪಡೆಗಳಿಗೆ ಯುವಕರ ನಿರುತ್ಸಾಹ ಗಮನಿಸಿದ ಟೀಮ್‌ ನೇಶನ್‌ ಫ‌ಸ್ಟ್‌ ಸಂಘಟನೆ ಜಾಗೃತಿ, ಮಾರ್ಗದರ್ಶನ ತರಬೇತಿ ಮೂಲಕ ಯುವಕರನ್ನು ಸೇನೆ ಸೇರಲು ಪ್ರೋತಾಹಿಸುತ್ತಿದೆ. 11 ವರ್ಷಗಳಿಂದ ತರಬೇತಿ, ಮಾರ್ಗದರ್ಶನ ನೀಡುತ್ತಿರುವ ಟೀಮ್‌ ನೇಶನ್‌ ಫ‌ಸ್ಟ್‌ ಸೇನೆ ನೇಮಕಾತಿ ಸಂದರ್ಭ ಯುವಕರನ್ನು ಸಜ್ಜುಗೊಳಿಸುತ್ತಿದೆ. ನೇಶನ್‌ ಫ‌ಸ್ಟ್‌ ನಿಂದ ತರಬೇತಿ ಪಡೆದ 8 ಯುವಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಸೂರಜ್‌ ಕಿದಿಯೂರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯುವಕರು ಜಾಗೃತಿ, ಸರಿಯಾದ ಮಾರ್ಗದರ್ಶನ ಇಲ್ಲದೆ ಸೇನೆ ಸೇರ್ಪಡೆ ತರಬೇತಿ ಪಡೆಯಲು ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ. ಕೆಲವು ವರ್ಷಗಳಿಂದ ನಿರಂತರ ಜಾಗೃತಿ ಮೂಡಿಸುತ್ತಿರುವ ಪರಿಣಾಮ ಯುವಕರು ಹೆಚ್ಚಿನ ಆಸಕ್ತಿ ತೋರಿ ಮುಂದೆ ಬರುತ್ತಿದ್ದಾರೆ. ಸೇನೆ ಸೇರುವ ಯುವಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯ ತರಬೇತಿ ನೀಡುತ್ತೇವೆ ಎಂದು ಸೂರಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.