Agumbe: ಮಳೆಗಾಲ ಆರಂಭವಾದರೂ ಘನ ವಾಹನ ಸಂಚಾರ ನಿಷೇಧವಾಗಿಲ್ಲ; ಜಿಲ್ಲಾಡಳಿತಕ್ಕೆ ಮರೆವು!
Team Udayavani, Jun 6, 2024, 7:35 AM IST
ಹೆಬ್ರಿ: ಕರಾವಳಿ – ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತೀ ಮಳೆಗಾಲ ಆರಂಭವಾಗುತ್ತಿದ್ದಂತೆ ಘನವಾಹನ ಸಂಚಾರಕ್ಕೆ ನಿಷೇಧ ಹೇರಲಾಗುತ್ತದೆ. ಆದರೆ ಈ ವರ್ಷ ಮಳೆಗಾಲ ಆರಂಭವಾದರೂ ಜಿಲ್ಲಾಡಳಿತ ಘನವಾಹನ ಸಂಚಾರ ನಿಷೇಧಿಸಿಲ್ಲ. ಇದರಿಂದಾಗಿ ನಿತ್ಯ ಪ್ರಯಾಣಿಕರಲ್ಲಿ ಆತಂಕ ಮೂಡಿದೆ.
ಘಾಟಿಯ ಇಕ್ಕೆಲಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ. ಇದೇ ರಸ್ತೆಯಲ್ಲಿ ಘನ ವಾಹನಗಳು ಸಂಚರಿಸುವುದರಿಂದ ತಿರುವುಗಳಲ್ಲಿ, ತಡೆಗೋಡೆ ಬಳಿ ಕುಸಿತ ಆಗುವ ಭೀತಿ ಇದೆ. ಘಾಟಿಯ ಅರ್ಧ ಭಾಗ ಶಿವಮೊಗ್ಗ ಜಿಲ್ಲೆ ಹಾಗೂ ಇನ್ನರ್ಧ ಭಾಗ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಹಲವಾರು ಬಾರಿ ಭಾರೀ ಮಳೆಯ ನಡುವೆ ಘನ ವಾಹನ ಸಂಚಾರದಿಂದ ಘಾಟಿ ಕುಸಿತಗೊಂಡು ತಿಂಗಳುಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು. ಆದರೂ ಘನವಾಹನ ಸಂಚಾರ ನಿಷೇಧ ಮಾಡದಿರುವುದು ಉಭಯ ಜಿಲ್ಲಾಡಳಿತಗಳ ನಿರ್ಲಕ್ಷ್ಯ ಎಂದು ಸಾಮಾಜಿಕ ಕಾರ್ಯಕರ್ತ ಹರೀಶ್ ಶೆಟ್ಟಿ ನಾಡಪಾಲ್ ತಿಳಿಸಿದ್ದಾರೆ.
ತಡೆಗೋಡೆ ಬಳಿ ದುರಸ್ತಿ
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವಿನ ಸೂರ್ಯಾಸ್ತ ವೀಕ್ಷಣೆ ಸ್ಥಳದ ಬಳಿ ಹಾಗೂ ಘಾಟಿ ಆರಂಭದ ಮಧ್ಯೆ ತಡೆಗೋಡೆಯಲ್ಲಿ ಬಿರುಕು ಬಂದಿದ್ದು ಘನ ವಾಹನ ಸಂಚರಿಸಿದರೆ ಸಂಪೂರ್ಣ ಕುಸಿಯುವ ಅಪಾಯ ಇರುವುದಾಗಿ ಉದಯವಾಣಿ ಸಚಿತ್ರ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಇಲಾಖೆಯು ತಡೆಗೋಡೆಯ ಬಳಿ ಕಾಂಕ್ರೀಟ್ ಬಳಸಿ ತಾತ್ಕಾಲಿಕ ದುರಸ್ತಿ ಹಾಗೂ ವಾಹನಗಳು ಢಿಕ್ಕಿ ಹೊಡೆದು ಹಾನಿಗೀಡಾದ ಸ್ಥಳಗಳಲ್ಲಿ ದುರಸ್ತಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.