![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 5, 2024, 6:45 AM IST
ಕಾರ್ಕಳ: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ್ದು, ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ಕಾರ್ಕಳದ ದಿಲೀಪ್ ಹೆಗ್ಡೆ ಸೇರಿಕೊಂಡು ಹತ್ಯೆಗೈರುವುದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದ್ದು, ಅವರಿಬ್ಬರ ಬಂಧನವಾಗಿದೆ. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ದೂರು ನೀಡಿದ್ದರು. ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.
ಉಸಿರುಗಟ್ಟಿ ಸಾವು ಸಂಭವಿಸಿರುವುದು, ಮುಖದಲ್ಲಿ ಗಾಯದ ಗುರುತು ಮೂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್ ತನಿಖೆ ಮತ್ತಷ್ಟು ಚುರುಕುಕೊಂಡಿದೆ. ಮೊಬೈಲ್ ಸಂಭಾಷಣೆ, ಕರೆ ಮಾಡಿದ ವಿವರ, ನೆಟ್ವರ್ಕ್ ಮಾಹಿತಿ, ಸಿಸಿಟಿವಿ ಬಗ್ಗೆ ಪೊಲೀಸರಿಂದ ತಾಂತ್ರಿಕ ತನಿಖೆ ವೇಗ ಪಡೆದುಕೊಂಡಿದೆ.
You seem to have an Ad Blocker on.
To continue reading, please turn it off or whitelist Udayavani.