Udupi: ಇಂಗ್ಲಿಷ್‌ ಕಲಿಕೆ ಗುಣಮಟ್ಟ ಅರಿಯಲು ಶಾಲೆಗೆ ತಜ್ಞರ ಭೇಟಿ

ಸುಧಾರಣೆಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ.

Team Udayavani, Jul 29, 2024, 1:33 PM IST

Udupi: ಇಂಗ್ಲಿಷ್‌ ಕಲಿಕೆ ಗುಣಮಟ್ಟ ಅರಿಯಲು ಶಾಲೆಗೆ ತಜ್ಞರ ಭೇಟಿ

ಉಡುಪಿ: ಸರಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಕಲಿಕೆಗೆ ಪೂರಕವಾಗಿ ಆಂಗ್ಲ ಮಾಧ್ಯಮ ತೆರೆಯಲು ಅನುಮತಿಸಿರುವ
ಬೆನ್ನಲ್ಲೇ ಆಂಗ್ಲ ಮಾಧ್ಯಮ ಭೋಧನೆಯ ಪರಿಶೀಲನೆ, ಕಲಿಕೆಯ ಗುಣಮಟ್ಟ ಅರಿಯಲು ವಿಷಯ ತಜ್ಞರ ತಂಡ ಶಾಲೆಗಳಿಗೆ ಭೇಟಿ ನೀಡಲಿವೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಆಂಗ್ಲ ಭಾಷೆಗೆ ಸಂಬಂಧಿಸಿ ಅನುಪಾಲನೆ, ಮಾರ್ಗದರ್ಶನ ಹಾಗೂ ಸಹಕಾರದ (ಅಕಾಡೆಮಿಕ್‌ ಸಪೋರ್ಟ್‌) ಪರಿಕಲ್ಪನೆಯಡಿ ಜಿಲ್ಲಾಮಟ್ಟದ ವಿಷಯ ತಜ್ಞರನ್ನು ಒಳಗೊಂಡ ಸಂಪನ್ಮೂಲ ತಂಡ(ಡಿಆರ್‌ಟಿ)ರಚನೆ ಮಾಡಿದೆ.ಅದರ ಅಡಿಯಲ್ಲಿ ಬ್ಲಾಕ್‌ ಸಂಪನ್ಮೂಲ ತಂಡ ತಮ್ಮ ವ್ಯಾಪ್ತಿಯ ಶಾಲೆಗೆ ಭೇಟಿ ನೀಡಿ, ಅಲ್ಲಿನ
ಆಂಗ್ಲ ಭಾಷೆಯ ಬೋಧನೆ, ವಿದ್ಯಾರ್ಥಿಗಳ ಕಲಿಕೆ ಇತ್ಯಾದಿಗಳನ್ನು ಪರಿಶೀಲಿಸಿ ರಾಜ್ಯಕ್ಕೆ ವರದಿ ಸಲ್ಲಿಸಲಿದೆ.

ತಂಡ ರಚನೆ
ಡಿಆರ್‌ಟಿ ಮೇಲುಸ್ತುವಾರಿಯಲ್ಲಿ ಪ್ರತಿ ತಾಲೂಕಿನಲ್ಲೂ 5 ಸದಸ್ಯರನ್ನು ಒಳಗೊಂಡಿರುವ ಬ್ಲಾಕ್‌ ಸಂಪನ್ಮೂಲ ತಂಡ(ಬಿಆರ್‌ಟಿ) ರಚಿಸಲಾಗುತ್ತದೆ. ಬ್ಲಾಕ್‌ ಮಟ್ಟದ ಇಂಗ್ಲಿಷ್‌ ನೋಡಲ್‌ ಅಧಿಕಾರಿ, ಪ್ರೌಢಶಾಲಾ ಶಿಕ್ಷಕ, ಬಿಆರ್‌ಪಿ(ಬ್ಲಾಕ್‌ ರಿಸೋರ್ಸ್‌ ಪರ್ಸನ್‌), ಸಿಆರ್‌ಪಿ(ಕ್ಲಸ್ಟರ್‌ ರಿಸೋರ್ಸ್‌ ಪರ್ಸನ್‌) ಹಾಗೂ ಆಂಗ್ಲ ಮಾಧ್ಯಮ ವಿಷಯದಲ್ಲಿ ತರಬೇತಿ ಪಡೆದ ಶಿಕ್ಷಕ ಸಹಿತ 5 ಮಂದಿಯನ್ನು ಈ ತಂಡ ಒಳಗೊಂಡಿರುತ್ತದೆ. ತಂಡವು ಶಾಲೆಗೆ ಭೇಟಿ ನೀಡಲು ಡಯಟ್‌ ಪ್ರಾಂಶುಪಾಲರು ಹಾಗೂ ಜಿಲ್ಲಾ ಉಪನಿರ್ದೇಶಕರು ವೇಳಾಪಟ್ಟಿ ಸಿದ್ಧಪಡಿಸಲಿದ್ದಾರೆ.

ನಿರಂತರ ಭೇಟಿ
ಈ ತಂಡವು ಮೊದಲ ಹಂತದಲ್ಲಿ ತಮ್ಮ ವ್ಯಾಪ್ತಿಯ 5 ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಇಂಗ್ಲಿಷ್‌ ಕಲಿಕೆ ಮತ್ತು ಗುಣಮಟ್ಟವನ್ನು ಪರಿಶೀಲಿಸಲಿದೆ. ಅನಂತರ ಅದರಲ್ಲಿಯೇ 3 ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಪುನಃ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯನ್ನು ದಾಖಲಿಸಲಿದೆ. ಇಂಗ್ಲಿಷ್‌ ಭಾಷೆ ಕಲಿಕೆಯಲ್ಲಿ ಹಿಂದುಳಿದ ಶಾಲೆಗಳನ್ನು ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಂಡು, ಸುಧಾರಣೆಗೆ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಏನೇನು ಮಾಡಲಿದ್ದಾರೆ?
ವಿಷಯ ತಜ್ಞರು ತಮ್ಮ ಅಧ್ಯಯನಗಳ ಆವಿಷ್ಕಾರದ ಆಧಾರದಲ್ಲಿ ಶಾಲೆಗಳಲ್ಲಿ ಇಂಗ್ಲಿಷ್‌ಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲಿದ್ದಾರೆ. ಡಯಟ್‌ ಮೂಲಕ ಆಂಗ್ಲ ಭಾಷ ಬೋಧನೆಗೆ ತರಬೇತಿ ಪಡೆದವರೇ ಬೋಧಿಸುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ ಭಾಷೆ ಹಾಗೂ ಬರವಣಿಗೆ ಕೌಶಲ್ಯ ವೃದ್ಧಿಗೆ ಶಿಕ್ಷಕರ ಮೂಲಕ ವಿನೂನತ ಪ್ರಯೋಗ ಸಹಿತ ವಿವಿಧ ಸಲಹೆ ನೀಡಲಿದ್ದಾರೆ.

ತಂಡದ ಜವಾಬ್ದಾರಿಗಳೇನು?
ಶಾಲಾ ಹಂತದ ತರಗತಿ ಬೋಧನೆಯಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಸಣ್ಣಸಣ್ಣ ಕ್ರಿಯಾ ಸಂಶೋಧನೆ(ಆ್ಯಕ್ಷನ್‌ ರಿಸರ್ಚ್‌)ಕೈಗೊಳ್ಳುವಂತೆ ಪ್ರೇರೇಪಿಸುವುದು, ಆಂಗ್ಲ ಭಾಷಾ ಬೋಧನೆ ಸುಧಾರಣೆಗೆ ವರ್ಷಕ್ಕೆ 40ರಿಂದ 50 ಶಿಕ್ಷಕರ ಸಣ್ಣ ಗುಂಪು ರಚಿಸಿ ಆನ್‌ಲೈನ್‌ ಮೂಲಕ ವೃತ್ತಿಪರ ಅಭಿವೃದ್ಧಿ ಚಟುವಟಿಕೆ ನಡೆಸುವುದು. ಶಾಲೆಯ ಇತರ ಶಿಕ್ಷಕರು ಹಾಗೂ ಮಕ್ಕಳ ಪೋಷಕರನ್ನು ಇದರಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನ ನಡೆಸುವುದಾಗಿದೆ.

ಆಂಗ್ಲ ಭಾಷಾ ತರಬೇತಿ ಪಡೆದ ಶಿಕ್ಷಕರು ವಿದ್ಯಾರ್ಥಿಗಳಿಗೆ ಎಷ್ಟು ಪರಿಣಾಮಕಾರಿಯಾಗಿ ಬೋಧಿಸುತ್ತಿದ್ದಾರೆ ಮತ್ತು ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಪ್ರಯೋಜನ ಪಡೆಯುತ್ತಿದ್ದಾರೆ ಎಂಬುದನ್ನು ತಿಳಿಯಲು ಹಾಗೂ ಇನ್ನಷ್ಟು ಕೌಶಲಾಧಾರಿತ ಚಟುವಟಿಕೆಗಳನ್ನು ಒದಗಿಸಲು ಈ ರೀತಿಯ ತಂಡ ರಚನೆ ಮಾಡಲಾಗಿದೆ. ಶಾಲೆಗಳಿಗೆ ನಿರಂತರ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ.
*ವಿ.ಸುಮಂಗಳಾ,
ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ

*ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.