ಮಾಸಾಂತ್ಯಕ್ಕೆ ಸಿಗದ ಅನ್ನಭಾಗ್ಯ ಯೋಜನೆ ಸಾಮಗ್ರಿ

ಗ್ರಾಮೀಣ ಭಾಗದ ಜನರು ಬರಿಗೈಯಲ್ಲಿ ವಾಪಸ್‌

Team Udayavani, Sep 7, 2019, 5:20 AM IST

ration-card

ಸಾಂದರ್ಭಿಕ ಚಿತ್ರ.

ಉಡುಪಿ: ಜಿಲ್ಲೆಯ ಗ್ರಾಮೀಣ ಭಾಗದ ಕೆಲವು ನ್ಯಾಯಬೆಲೆ ಅಂಗಡಿಯಲ್ಲಿ ತಿಂಗಳ ಅಂತ್ಯದವರೆಗೆ ಅನ್ನಭಾಗ್ಯ ಯೋಜನೆ ಸಾಮಗ್ರಿಗಳು ವಿತರಣೆಯಾಗದ ಹಿನ್ನೆಲೆಯಲ್ಲಿ ಜನರು ಪಡಿತರ ಸಾಮಗ್ರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲೆಯಿಂದ ಜಿಲ್ಲೆಗಳಿಗೆ ವಲಸೆ ಹೋಗುವ ಕುಟುಂಬಗಳು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಸರಕಾರ ನಿಯಮದ ಅನ್ವಯ ರಾಜ್ಯದ ಪಡಿತರ ಕಾರ್ಡ್‌ ಹೊಂದಿರುವವರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಬೇಕಾದರೂ ಸಾಮಗ್ರಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಿದೆ.

ನಿಯಮವೇ ಕುತ್ತು
ಸರಕಾರ ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಬರುವ ಕಾರ್ಡ್‌ದಾರರಿಗೆ ಅಗತ್ಯವಿರುವಷ್ಟು ಸಾಮಗ್ರಿಗಳು ಮಾತ್ರ ಹಂಚಿಕೆಯಾಗುತ್ತಿವೆ. ಸಿಮೀತ ದಾಸ್ತಾನಿನಲ್ಲಿಯೇ ಇತರೆ ಜಿಲ್ಲೆ ಹಾಗೂ ಪ್ರದೇಶದ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆ ಸಾಮಗ್ರಿ ವಿತರಿಸಬೇಕಾಗಿದೆ. ಇದರಿಂದಾಗಿ ಉಡುಪಿ ಜಿಲ್ಲೆಯ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಅವಧಿಗೂ ಮುನ್ನವೇ ಸಾಮಗ್ರಿಗಳು ಖಾಲಿಯಾಗುತ್ತಿದೆ. ನ್ಯಾಯಬೆಲೆ ಅಂಗಡಿ ವ್ಯಾಪ್ತಿ ಕಾರ್ಡ್‌ದಾರರು ಖಾಲಿ ಕೈಯಲ್ಲಿ ಹಿಂದಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇತರೆ ಪ್ರದೇಶದ 3,558 ಪಡಿತರ
ಜಿಲ್ಲೆಯಲ್ಲಿ ಪ್ರಸ್ತುತ 291 ಪಡಿತರ ಅಂಗಡಿಗಳಿವೆ. ಕುಂದಾಪುರ 116, ಕಾರ್ಕಳ 56, ಉಡುಪಿ 119 ಪಡಿತರ ಅಂಗಡಿಗಳಿವೆ. ಆಗಸ್ಟ್‌ ತಿಂಗಳಲ್ಲಿ ಕಾರ್ಕಳದಲ್ಲಿ 949, ಉಡುಪಿಯಲ್ಲಿ 1690, ಕುಂದಾಪುರದಲ್ಲಿ 919 ಕಾರ್ಡ್‌ ಸೇರಿದಂತೆ ಇತರೆ ಪ್ರದೇಶದ 3,558 ಕಾರ್ಡ್‌ದಾರರು ಜಿಲ್ಲೆಯಲ್ಲಿ ಪಡಿತರ ಪಡೆದುಕೊಳ್ಳುತ್ತಿದ್ದಾರೆ.

ನಿಗದಿತ ಸಮಯಕ್ಕೆ ವಿತರಣೆಯಾಗುತ್ತಿಲ್ಲ
ಪ್ರತಿ ತಿಂಗಳು 1ನೇ ತಾರೀಕಿನಿಂದ 25ರ ವರೆಗೆ ರೇಶನ್‌ ಕಡ್ಡಾಯವಾಗಿ ವಿತರಣೆಯಾಗಬೇಕು. ಆದರೆ ಕೆಲ ಗ್ರಾಮೀಣ ಭಾಗದಲ್ಲಿ 10ಕ್ಕೆ ವಿತರಣೆ ಪ್ರಾರಂಭಿಸಿ 25ರ ಒಳಗೆ ಮುಕ್ತಾಯ ಮಾಡುತ್ತಿದ್ದಾರೆ.

2.2 ಲಕ್ಷ ಕಾರ್ಡ್‌ಗಳಿವೆ
ಜಿಲ್ಲೆಯಲ್ಲಿ ಒಟ್ಟು 2,29,508 ಕಾರ್ಡ್‌ಗಳಿವೆ. ಉಡುಪಿ ತಾಲೂಕಿನಲ್ಲಿ ಅಂತ್ಯೋದಯ 11,149, ಬಿಪಿಎಲ್‌ 64,448, ಎಪಿಎಲ್‌ 66,451, ಕಾರ್ಕಳದಲ್ಲಿ ಅಂತ್ಯೋದಯ 4,164, ಬಿಪಿಎಲ್‌ 33,064, ಎಪಿಎಲ್‌ 19,559,ಕುಂದಾಪುರದಲ್ಲಿ ಅಂತ್ಯೋದಯ 13,596, ಬಿಪಿಎಲ್‌ 59,945, ಎಪಿಎಲ್‌ 23,575 ಕಾರ್ಡ್‌ಗಳಿವೆ.

ಪಡಿತರ ಅಂಗಡಿಗಳಲ್ಲಿ 1ನೇ ತಾರೀಕಿನಿಂದ 25ರ ವರೆಗೆ ಅಕ್ಕಿ ವಿತರಣೆ ಮಾಡಲಾಗುತ್ತದೆ. ಫ‌ಲಾನುಭವಿಗಳು ನಿಗದಿ ಸಮಯ ದೊಳಗೆ ಸಾಮಗ್ರಿ ಪಡೆದುಕೊಳ್ಳಬೇಕು.

ಆಯಾ ವ್ಯಾಪ್ತಿಗೆ ಅಗತ್ಯವಿದ್ದಷ್ಟು ಪಡಿತರ ಸಾಮಗ್ರಿ ವಿತರಣೆ
ಪಡಿತರ ಅಂಗಡಿಗಳಿಗೆ ಆಯಾ ವ್ಯಾಪ್ತಿಗೆ ಬರುವ ಕಾರ್ಡ್‌ಗಳಿಗೆ ಅಗತ್ಯವಿರುವಷ್ಟು ಪ್ರಮಾಣದ ಪಡಿತರ ಸಾಮಗ್ರಿ ವಿತರಿಸಲಾಗುತ್ತದೆ. ಒಂದು ವೇಳೆ ಬೇರೆ ಪ್ರದೇಶದಿಂದ ಕಾರ್ಡ್‌ದಾರರು ಸಾಮಗ್ರಿ ಪಡೆದುಕೊಂಡಾಗ ಕೊರತೆ ಬೀಳುತ್ತದೆ. ಅವರವರ ಪಡಿತರ ಅಂಗಡಿ ಹೊರತುಪಡಿಸಿ ಇತರ ಅಂಗಡಿಗಳಲ್ಲೂ ಪಡಿತರವನ್ನು ಪಡೆದುಕೊಳ್ಳಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಗಳು ತಿಳಿಸಿವೆ.

ಸಾಮಗ್ರಿ ಸಾಗಾಟಕ್ಕೆ
ಹೆಚ್ಚು ಹಣ ವ್ಯಯ
ತಿಂಗಳ ಅಂತ್ಯದಲ್ಲಿ ಪಡಿತರ ಅಂಗಡಿಯಲ್ಲಿ ರೇಶನ್‌ ದೊರಕುತ್ತಿಲ್ಲ. ಬೇರೆ ಪಡಿತರ ಅಂಗಡಿಗಳಿಗೆ ತೆರಳಬೇಕಾದರೆ ಸುಮಾರು 4 ಕಿ.ಮೀ. ಹೋಗಬೇಕಾಗುತ್ತದೆ. ಸಾಮಗ್ರಿ ಸಾಗಾಟಕ್ಕೆ ಹೆಚ್ಚು ಹಣ ವ್ಯಯಿಸಬೇಕಾದ ಪರಿಸ್ಥಿತಿ ಬಂದಿದೆ.
-ಸುಕನ್ಯಾ, ಉಡುಪಿ

ನಿಗದಿತ ಪ್ರಮಾಣ
ಅಕ್ಕಿ ವಿತರಣೆ
ನ್ಯಾಯಬೆಲೆ ಅಂಗಡಿಗಳಿಗೆ ನಿಗದಿತ ಪಡಿಸಿದಷ್ಟು ಪ್ರಮಾಣದ ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಆದರೆ ಕೆಲವು ಅಂಗಡಿಗಳಲ್ಲಿ ಹೊರ ಜಿಲ್ಲೆ ಹಾಗೂ ಪ್ರದೇಶದವರು ಪಡೆದುಕೊಳ್ಳುತ್ತಿರುವುದರಿಂದ ಪಡಿತರ ಸಾಮಗ್ರಿ ಕೊರತೆ ಎದುರಾಗುತ್ತಿದೆ.
-ಬಿ.ಕೆ.ಕುಸುಮಾಧರ್‌, ಆಹಾರ, ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ(ಪ್ರಭಾರ)

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.