ಮಣೂರು-ಪಡುಕರೆಯಲ್ಲಿ ಮತ್ತದೇ ಕಡಲ್ಕೊರೆತದ ಭೀತಿ


Team Udayavani, Jun 9, 2018, 6:35 AM IST

0706kota1e.jpg

ಕೋಟ:  ಮಣೂರು- ಪಡುಕರೆ, ಕೋಡಿಕನ್ಯಾಣ, ಕೋಡಿಬೆಂಗ್ರೆ  ಮುಂತಾದ ಕಡೆ ಪ್ರತಿ ವರ್ಷ ಕಡಲ್ಕೊರೆತ ಸಮಸ್ಯೆ ಎದುರಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ದೊರೆತಿಲ್ಲ. ಈ ಬಾರಿಯೂ ಸಮಸ್ಯೆ ಮರುಕಳಿಸುವ ಸಾಧ್ಯತೆ ಇದೆ.

ಹಲವು ವರ್ಷಗಳಿಂದ ಮನವಿ  
ಮಣೂರು  ಪಡುಕರೆಯ ಬಿ.ಬಿ. ಕಾಂಚನ್‌ ರಸ್ತೆಯಿಂದ ಬೈನಾಯ್ಕರ ಮನೆ ತನಕ  200 ಮೀಟರ್‌ ಹಾಗೂ ಮಣೂರು ಜಟ್ಟಿಗೇಶ್ವರ  ದೇವಸ್ಥಾನದ ಹಿಂಬದಿಯಿಂದ ತೆಕ್ಕಟ್ಟೆ ಕೊಮೆಯ ಗಡಿಭಾಗದ ವರೆಗೆ 300 ಮೀಟರ್‌ ತಡೆಗೋಡೆ ನಿರ್ಮಿಸಲು ಬಾಕಿ ಇದೆ. ಇಲ್ಲಿನ  10ಕ್ಕೂ  ಹೆಚ್ಚು ಮನೆಗಳು, ರಸ್ತೆ, ವಿಶಾಲ ತೆಂಗಿನ ತೋಟ   ಪ್ರತಿ ವರ್ಷ ಅಪಾಯಕ್ಕೆ ಸಿಲುಕುತ್ತವೆ.  ಸಮಸ್ಯೆ ಬಗೆಹರಿಸುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಶಾಶ್ವತ ಪರಿಹಾರ ಮರೀಚಿಕೆಯಾಗಿದೆ. 

ಅದೇ ರೀತಿ ಕೋಡಿ ಕನ್ಯಾಣ ದಲ್ಲೂ  500 ಮೀ.ನಷ್ಟು  ತಡೆಗೋಡೆ ಅಗತ್ಯವಿದೆ ಹಾಗೂ ಕೋಡಿಬೆಂಗ್ರೆಯಲ್ಲೂ ಸಮಸ್ಯೆ ಇದೆ.

ತಡೆಗೋಡೆ ಕಲ್ಲು ಸಮುದ್ರಕ್ಕೆ
ಹಲವು ಕಡೆಗಳಲ್ಲಿ  ಸ್ವಲ್ಪ-ಸ್ವಲ್ಪವೇ ಕಾಮಗಾರಿ ಮತ್ತು ತಾತ್ಕಾಲಿಕ ಕಾಮಗಾರಿ ನಡೆಸಿರುವುದರಿಂದ   ಕಡಲ 
ಅಲೆಗಳ ರಭಸಕ್ಕೆ  ತಾತ್ಕಾಲಿಕ ತಡೆಗೋಡೆಯ ಕಲ್ಲುಗಳು  ಸಮುದ್ರ ಸೇರುತ್ತಿದೆ. ಹೀಗಾಗಿ ಶಾಶ್ವತ ಪರಿಹಾರ ಶೀಘ್ರ ಅಗತ್ಯವಿದೆ.

500 ಮೀ. ತಡೆಗೋಡೆ ಬಾಕಿ 
ಮಣೂರು ಪಡುಕರೆಯಲ್ಲಿ  ಕೇವಲ  500 ಮೀ.ನಷ್ಟು ತಡೆಗೋಡೆ ಬಾಕಿ ಇದ್ದು  ಪ್ರತಿ ವರ್ಷ ಅದೇ ಕಡೆ  ಕಡಲ್ಕೊರೆತ ಹೆಚ್ಚುತ್ತಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಕಳೆದ ಬಾರಿ ಕಾಮ ಗಾರಿ ಆರಂಭಿಸುವ ಭರವಸೆ ಕೂಡ ದೊರೆತಿತ್ತು. ಆದರೆ ಕೆಲಸ ಮಾತ್ರ ನಡೆಯಲಿಲ್ಲ. ಈ ವರ್ಷವಾದರು  ಸಮಸ್ಯೆಯನ್ನು ಗಂಭೀರವಾಗಿ ಸ್ವೀಕರಿಸಿ ಕಾರ್ಯಪ್ರವೃತ್ತರಾಗಬೇಕು.
– ಭುಜಂಗ ಗುರಿಕಾರ, ಕೋಟ ಗ್ರಾ.ಪಂ. ಸದಸ್ಯರು.

ಕಡಲ್ಕೊರೆತ ಸಮಸ್ಯೆ 
ಕೋಡಿಕನ್ಯಾಣದಲ್ಲಿ ಸುಮಾರು 500ಮೀಟರ್‌ ಕಡಲ್ಕೊರೆತದ ಸಮಸ್ಯೆ ಇದ್ದು ತಡೆಗೋಡೆ ನಿರ್ಮಿಸುವ ಸಲುವಾಗಿ ದಡದಲ್ಲಿ ಕಲ್ಲು ತಂದು ರಾಶಿ ಹಾಕಲಾಗಿದೆ. ಆದರೆ ಕಾಮಗಾರಿ ಆರಂಭಿಸಿಲ್ಲ. ಇದೀಗ ಮಳೆಗಾಲ ಆರಂಭವಾಗಿರುವುದರಿಂದ ಇನ್ನು ಕಾಮಗಾರಿ ನಡೆಸುವುದು ಕಷ್ಟ.. ಹೀಗಾಗಿ ಇಲ್ಲಿನ ರಸ್ತೆ, ತೆಂಗಿನ ತೋಟಕ್ಕೆ ಈ ಬಾರಿ ಹಾನಿಯಾಗುವ ಸಂಭವವಿದೆ. ಜೋಡಿಸದಿರುವುದರಿಂದ ಕಲ್ಲುಗಳು  ಸಮುದ್ರ ಸೇರಲಿವೆ. ಈ ಕುರಿತು ಸಂಬಂಧಪಟ್ಟವರು ಗಮನಹರಿಸಬೇಕು.
– ಜಯಂತ್‌ ಅಮೀನ್‌ ಕೋಡಿಕನ್ಯಾಣ, ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.