Padubidri ಗೃಹಬಳಕೆ ಜಾಡಿಯಿಂದ ಗ್ಯಾಸ್‌ ಕದಿಯುತ್ತಿದ್ದ ಇಬ್ಬರ ಬಂಧನ

ಮಾಲಕಿ ಸಹಿತ ನಾಲ್ವರ ವಿರುದ್ಧ ಕೇಸು

Team Udayavani, Jun 22, 2024, 11:03 PM IST

ಗೃಹಬಳಕೆ ಜಾಡಿಯಿಂದ ಗ್ಯಾಸ್‌ ಕದಿಯುತ್ತಿದ್ದ ಇಬ್ಬರ ಬಂಧನ

ಪಡುಬಿದ್ರಿ: ಮುದರಂಗಡಿಯ ಸಮನ್ಯು ಎಚ್‌ಪಿ ಗ್ಯಾಸ್‌ ಏಜೆನ್ಸಿಯ ಗೋದಾಮಿನ ಬಳಿ ಇರುವ ಅದರ ಮೂವರು ಲೋಡಿಂಗ್‌ ಕಾರ್ಮಿಕರಾಗಿರುವ ರಾಜಸ್ಥಾನ ಮೂಲದವರ ಮನೆಗೆ ಕಾಪು ಆಹಾರ ನಿರೀಕ್ಷಕರ ಜತೆಗೂಡಿ ಜೂ. 22ರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಪಡುಬಿದ್ರಿ ಪೊಲೀಸ್‌ ಠಾಣಾಧಿಕಾರಿ ಪ್ರಸನ್ನ ಹಾಗೂ ಸಿಬಂದಿ ಗ್ರಾಹಕರಿಗೆ ನೀಡಬೇಕಾಗಿರುವ ಗ್ಯಾಸ್‌ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್‌ ಮರುಪೂರಣ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ.

ಗ್ಯಾಸ್‌ ಏಜೆನ್ಸಿಯ ಮಾಲಕಿ ವಿದ್ಯಾ ಎಸ್‌. ಹೆಗ್ಡೆ, ಕಾರ್ಮಿಕರಾದ ಸುರೇಂದ್ರ ಕುಮಾರ್‌, ಸುಖ್‌ದೇವ್‌ ಮತ್ತು ದೇವರಾಮ್‌ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಸುರೇಂದ್ರ ಕುಮಾರ್‌ ಮತ್ತು ಸುಖ್‌ದೇವ್‌ ಅವರನ್ನು ಬಂಧಿಸಲಾಗಿದೆ. ದೇವರಾಮ್‌ ಪರಾರಿಯಾಗಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರಿಂದ ಗೃಹಬಳಕೆಯ 11 ಹಾಗೂ ವಾಣಿಜ್ಯೋದ್ದೇಶದ 4 ಗ್ಯಾಸ್‌ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಠಾಣಾಧಿಕಾರಿ ಪ್ರಸನ್ನ ಅವರಿಗೆ ಬಂದ ಖಚಿತ ಮಾಹಿತಿಯನ್ವಯ ಅದನ್ನು ಕಾಪು ತಹಶೀಲ್ದಾರ್‌ ಪ್ರತಿಭಾ ಅವರಿಗೆ ರವಾನಿಸಲಾಗಿತ್ತು. ಹಾಗಾಗಿ ಬೆಳಗ್ಗೆ 6 ಗಂಟೆಗೆ ಕಾಪು ಆಹಾರ ನಿರೀಕ್ಷಕ ಎಂ.ಟಿ. ಲೀಲಾನಂದ ಅವರ ಜತೆಗೇ ಪೊಲೀಸರು ದಾಳಿಯನ್ನು ಸಂಘಟಿಸಿ ಅಕ್ರಮವನ್ನು ಬಯಲಿಗೆಳೆದರು.

ಆರೋಪಿಗಳು ಪ್ರತೀದಿನ ವಿತರಣೆಗಾಗಿ ಹಿಂದಿನ ದಿನದ ಸಾಯಂಕಾಲವೇ ಸಿಲಿಂಡರ್‌ಗಳನ್ನು ತಮ್ಮ ವಾಹನಗಳಿಗೆ ಪೇರಿಸಿ ತಮ್ಮ ಮನೆಯ ಸಮೀಪ ನಿಲ್ಲಿಸುತ್ತಿದ್ದರು. ರಾತ್ರಿ ವೇಳೆ ತಮ್ಮ ವಾಹನಗಳಿಂದ ಗೃಹಬಳಕೆಯ ಸಿಲಿಂಡರ್‌ಗಳನ್ನು ಇಳಿಸಿ ಪ್ರತೀ ಸಿಲಿಂಡರ್‌ನಿಂದಲೂ 2-3 ಕೆಜಿಯಷ್ಟು ಗ್ಯಾಸನ್ನು ತಮ್ಮಲ್ಲಿರುವ ವಾಣಿಜ್ಯ ಉದ್ದೇಶದ ಸಿಲಿಂಡರ್‌ಗೆ ತುಂಬಿಸಿ ಮಾರಾಟ ಮಾಡುತ್ತಿದ್ದರು. ಇದರಿಂದಾಗಿ ಗೃಹಬಳಕೆಯ ಸಿಲಿಂಡರ್‌ಗಳ ಒಟ್ಟು ತೂಕ 30 ಕೆಜಿ ಇರಬೇಕಾಗಿದ್ದುದು ಸುಮಾರು 27 ಕೆಜಿ ಆಸುಪಾಸಿನಲ್ಲಿರುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೂವರೆ ವರ್ಷದಿಂದ…
ಆರೋಪಿತ ಕಾರ್ಮಿಕರು ಸುಮಾರು 2 ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದಿಂದ ಈ ಅಕ್ರಮ ನಡೆಯುತ್ತಿದ್ದ ಮಾಹಿತಿ ಲಭಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾವು
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರು ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಜೂ. 21ರ ರಾತ್ರಿ ಸಂಭವಿಸಿದೆ. ಭವಾನಿ ಮಟನ್‌ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಂಗಪ್ಪ (60) ಮೃತಪಟ್ಟವರು. ಮೂಲತಃ ಹುಬ್ಬಳ್ಳಿಯ ಕುಸುಗಲ ಗ್ರಾಮದವರಾಗಿದ್ದು, ಹಲವು ವರ್ಷಗಳಿಂದ ಪಡುಬಿದ್ರಿಯಲ್ಲಿ ಒಂಟಿಯಾಗಿ ನೆಲೆಸಿದ್ದರು.

ಟಾಪ್ ನ್ಯೂಸ್

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

vijayapura

Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ

3-crime

Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.