“ಸಮಾಜ ನಿರ್ಮಾಣದಲ್ಲಿ ಕಲೆಯೇ ಪ್ರಧಾನ’
Team Udayavani, Sep 4, 2017, 7:10 AM IST
ತೆಕ್ಕಟ್ಟೆ (ಬೇಳೂರು): ಈ ಸಮಾಜದ ವಿವಿಧ ಸ್ತರಗಳಲ್ಲಿ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಮಾಜಿಕವಾಗಿ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ ಈ ನಿಟ್ಟಿನಲ್ಲಿ ನಮ್ಮ ಭಾರತೀಯ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಒಂದಾಗಿ ಬೆರೆತಾಗ ಮಾತ್ರ ಸಂತೃಪ್ತ ಸಮಾಜದ ನಿರ್ಮಾಣ ಸಾಧ್ಯ ಎಂದು ಬೇಳೂರು ಸ್ಫೂರ್ತಿಧಾಮದ ಮುಖ್ಯಕಾರ್ಯನಿರ್ವಾಹಕ ಡಾ|ಕೇಶವ ಕೋಟೇಶ್ವರ ಹೇಳಿದರು .
ಅವರು ಸೆ. 2 ಶನಿವಾರದಂದು ಬೇಳೂರು ಸ್ಫೂರ್ತಿಧಾಮದ ಸಭಾಂಗಣದಲ್ಲಿ ಉಡುಪಿಯ ಕೊಡವೂರಿನ ನೃತ್ಯನಿಕೇತನ ಸಂಸ್ಥೆಗೆ 25ರ ಸಂಭ್ರಮದ ಹಿನ್ನೆಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸುವ ನಿಟ್ಟಿನಿಂದ ನಡೆದ ನೃತ್ಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ನೃತ್ಯ ವಿಲಾಸ ಕಾರ್ಯಕ್ರಮದ ಸಂಘಟಕರಿಗೆ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ನೃತ್ಯ ನಿರ್ದೇಶಕರಾದ ಸುಧೀರ್ ರಾವ್ ಕೊಡವೂರು ಸಂಸ್ಥೆಯ ನೃತ್ಯ ನಿರ್ದೇಶಕಿ ಮಾನಸಿ ಸುಧೀರ್ ರಾವ್, ವಸ್ತ್ರ ವಿನ್ಯಾಸಕಿ ಶಾರದಾ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು. ಬೇಳೂರು ಸ್ಫೂರ್ತಿಧಾಮದ ಕಾರ್ಯನಿರ್ವಾಹಕಿ ಜಿಜಿ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.