ಪ್ರಜನನ ಶಾಸ್ತ್ರ -ಸುಶೃತನು ಕಂಡಂತೆ ಕೃತಿ ಬಿಡುಗಡೆ
Team Udayavani, Mar 31, 2017, 12:36 PM IST
ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಕುತ್ಪಾಡಿ ಉಡುಪಿ ಇದರ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ವತಿಯಿಂದ ಜರಗಿದ ಸೋದರಿ ನಿವೇದಿತಾ ಅವರ 150ನೇ ಜಯಂತಿಯ ಸಂದರ್ಭದಲ್ಲಿ ಕೆಎಂಸಿ ಮಂಗಳೂರಿನ ಪ್ರಜನನ ಶಾಸ್ತ್ರ ವಿಭಾಗದ ಖ್ಯಾತ ತಜ್ಞ ಡಾ| ಪ್ರಹ್ಲಾದ ಕುಷ್ಟಗಿ ಅವರು ಅನುವಾದಿಸಿದ “ಪ್ರಜನನ ಶಾಸ್ತ್ರ – ಸುಶೃತನು ಕಂಡಂತೆ’ ಕೃತಿಯ ಬಿಡುಗಡೆ ಸಮಾರಂಭ ಮಹಾವಿದ್ಯಾಲಯದ ಭಾವಪ್ರಕಾಶ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಸರಕಾರಿ ಆಸ್ಪತ್ರೆಯ ನಿವೃತ್ತ ಪ್ರಸೂತಿ ತಜ್ಞೆ ಡಾ| ಸಾವಿತ್ರಿ ದೈತೋಟ ಕೃತಿಯನ್ನು ಬಿಡುಗಡೆಗೊಳಿಸಿದರು.ಕೃತಿಯ ಅನುವಾದಕ ಡಾ| ಪ್ರಹ್ಲಾದ ಕುಷ್ಟಗಿ ಮಾತನಾಡಿ, ಆಧುನಿಕ ವೈದ್ಯ ಪದ್ಧತಿಯಲ್ಲಿ ಇರುವ ಪ್ರಜನನ ಶಾಸ್ತ್ರದ ಕುರಿತು ಸಾವಿರಾರು ವರ್ಷಗಳ ಹಿಂದೆ ಆಯುರ್ವೇದ ಶಾಸ್ತ್ರದಲ್ಲಿ ವಿವರಿಸಿದೆ. ಇಂದಿನ ಯುವವೈದ್ಯರಿಗೆ ಈ ಕೃತಿ ದಾರಿದೀಪವಾಗಲಿ ಎಂದು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲ ಡಾ| ಪ್ರಭಾಕರ ಯು. ರೆಂಜಾಳ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಜಾದೂಗಾರ ಪ್ರೊ| ಶಂಕರ್ ಮೊದಲಾದವರು ಉಪಸ್ಥಿತರಿದ್ದರು.
ಕಾಲೇಜಿನ ಮಹಿಳಾ ಕ್ಷೇಮಾಭಿವೃದ್ಧಿ ಘಟಕದ ಅಧ್ಯಕ್ಷೆ ಡಾ| ಮಮತಾ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಲಿಖೀತಾ ಡಿ. ಎನ್. ಹಾಗೂ ಡಾ| ಹರ್ಷಿತಾ ಎಂ. ಎಸ್. ಕಾರ್ಯಕ್ರಮ ನಿರ್ವಹಿಸಿದರು. ಡಾ| ಚೇತನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.