Bantwal: ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ; ನಗದು-ಚಿನ್ನದ ಸರ ದರೋಡೆ
Team Udayavani, Aug 15, 2024, 8:34 PM IST
ಬಂಟ್ವಾಳ: ಕೊಡಗು ಮೂಲದ ವ್ಯಕ್ತಿಯೊಬ್ಬರು ಬಿ.ಸಿ. ರೋಡಿನಿಂದ ನರಿಕೊಂಬುವಿಗೆ ಹೋಗಲು ವಾಹನಕ್ಕೆ ಕಾಯುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗದು ಹಾಗೂ ಚಿನ್ನದ ಸರ ದರೋಡೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಡಗಿನ ವೀರಾಜಪೇಟೆ ನಿವಾಸಿ ಎಂ. ಗಂಗಾಧರ ಅವರು ದರೋಡೆಗೊಳಗಾದವರು. ಅವರು ಆ. 9ರಂದು ವಿರಾಜಪೇಟೆಯಿಂದ ಬಿ.ಸಿ. ರೋಡಿಗೆ ಬಂದು ನರಿಕೊಂಬುನಲ್ಲಿರುವ ಅಣ್ಣನ ಮನೆಗೆ ತೆರಳುವುದಕ್ಕೆ ರಾತ್ರಿ ಯಾವುದಾದರೂ ವಾಹನ ಸಿಗುತ್ತದೆಯೋ ಎಂದು ಕಾಯುತ್ತಿದ್ದರು.
ಈ ವೇಳೆ ಬಿಳಿ ಬಣ್ಣದ ಕಾರೊಂದು ಅವರ ಬಳಿ ಬಂದು ನಿಂತಿದ್ದು, ಅದರಲ್ಲಿದ್ದ ಅಪರಿಚಿತರು ತಾವು ಪಾಣೆಮಂಗಳೂರು ಕಡೆಗೆ ತೆರಳುತ್ತಿದ್ದು ಅಲ್ಲಿವರೆಗೆ ಬರುವಂತೆ ತಿಳಿಸಿದ್ದಾರೆ. ಹಾಗಾಗಿ ಅವರು ಹಿಂದಿನ ಸೀಟಿನಲ್ಲಿ ಕುಳಿತಿದ್ದಾರೆ. ಕಾರು ಸ್ವಲ್ಪ ಮುಂದೆ ಚಲಿಸಿದಾಗ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಅಪರಿಚಿತರು ಗಂಗಾಧರ್ ಮೇಲೆ ಹಲ್ಲೆ ನಡೆಸಿ ಅವರ ಬಳಿಯಿದ್ದ 80,000 ರೂ. ಮೌಲ್ಯದ ಚಿನ್ನದ ಸರ ಹಾಗೂ 2 ಸಾವಿರ ರೂ. ನಗದು ಕಸಿದುಕೊಂಡು ಬಳಿಕ ಅವರನ್ನು ಕಾರಿನಿಂದ ದೂಡಿ ಹಾಕಿ ಪರಾರಿಯಾಗಿದ್ದಾರೆ.
ಬಳಿಕ ಗಂಗಾಧರ್ ಈ ಕುರಿತು ತನ್ನ ಮನೆಯವರು ಹಾಗೂ ಅಣ್ಣನಿಗೆ ವಿಷಯ ತಿಳಿಸಿದ್ದು, ಗಾಯಗೊಂಡಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ಆ. 9ರಂದು ನಡೆದರೂ ಅವರು ಆ. 14ರಂದು ಪೊಲೀಸರಿಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.