![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 20, 2018, 2:15 AM IST
ಕುಂದಾಪುರ: ಇಲ್ಲಿನ ಪುರಸಭಾ ವ್ಯಾಪ್ತಿಯ ವಿನಾಯಕ ಚಿತ್ರಮಂದಿರ ಬಳಿ ರಿಕ್ಷಾ ನಿಲ್ದಾಣದ ಜಾಗದ ಸಮಸ್ಯೆ ಕುರಿತಂತೆ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ. ಭೂಬಾಲನ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಹೆದ್ದಾರಿ ಕಾಮಗಾರಿಯಿಂದಾಗಿ ಮೊದಲಿದ್ದ ಜಾಗದಲ್ಲಿ ರಿಕ್ಷಾ ನಿಲ್ಲಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಎಸಿ ಅವರಿಗೆ ಇಲ್ಲಿನ ರಿಕ್ಷಾ ಚಾಲಕರು ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಭೇಟಿ ನೀಡಿದ ಎಸಿ ಅವರು, ಪುರಸಭೆ ಅಧೀನದ ಜಾಗದಲ್ಲಿ ಇರುವ ಅಂಗಡಿಯವರನ್ನು ಚರಂಡಿಯಿಂದ 2 ಮೀಟರ್ ಹಿಂದಕ್ಕೆ ಹೋಗಲು ತಿಳಿಸಿದ್ದು, ಇಲ್ಲಿ ರಿಕ್ಷಾ ಚಾಲಕರಿಗೆ ನಿಲ್ದಾಣದ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ. ಇದರಿಂದ ಈಗ ರಿಕ್ಷಾ ಚಾಲಕರ ಸಮಸ್ಯೆ ಸುಖಾಂತ್ಯಗೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿವೆ. ಜಿ.ಪಂ. ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಬಿಜೆಪಿ ಮುಖಂಡ ಮಂಜು ಬಿಲ್ಲವ, ಕಾಂಗ್ರೆಸ್ ಮುಖಂಡ ಗಣೇಶ್ ಶೇರಿಗಾರ್, ರಿಕ್ಷಾ ಚಾಲಕರ ಸಂಘದ ಮಹೇಶ್ ಶೆಣೈ, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.