
ಉತ್ಥಾನ ದ್ವಾದಶಿಯಂದು ರಾಮನ ಉತ್ಥಾನ: ಪಲಿಮಾರು ಶ್ರೀ
Team Udayavani, Nov 10, 2019, 5:12 AM IST

ಉಡುಪಿ: ಉತ್ಥಾನ ದ್ವಾದಶಿಯ ಪರ್ವ ಕಾಲದಲ್ಲಿ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟು ದೇಶದ ಆರಾಧ್ಯ ದೇವರನ್ನು ಎಬ್ಬಿಸುವಂತಹ ಉತ್ತಮ ತೀರ್ಪು ನೀಡಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದ್ದಾರೆ.
ನ್ಯಾಯಾಲಯದ ಮೇಲಿಟ್ಟ ನಿರೀಕ್ಷೆ, ಭರವಸೆ ಈಡೇರಿದೆ, ನ್ಯಾಯ ಸಿಕ್ಕಿದೆ. ನ್ಯಾಯಾಧೀಶರೂ ಅಭಿನಂದನೀಯರು. ತೀರ್ಪಿನ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದ ಕಾಪಾಡಲು ಕೈಗೊಂಡ ಕ್ರಮ ಶ್ಲಾಘನೀಯ. ಮಂದಿರ ನಿರ್ಮಾಣಕ್ಕೆ ಉತ್ತಮ ವಾತಾವರಣ ಮೂಡಿದೆ.
ವಿವಾದಿತ ಕಟ್ಟಡ ಬೀಳುವಾಗ ಭಜನೆ ನಡೆಯುತ್ತಿದ್ದರೆ ಉಡುಪಿಯಲ್ಲಿ ಕಳೆದೆರಡು ವರ್ಷಗಳಿಂದ ಆಯೋಜಿಸಿದ ಅಖಂಡ ಭಜನೆ ಭಕ್ತರ ಭಕ್ತಿಯ ಜತೆಗೆ ನ್ಯಾಯಾಲಯದ ನ್ಯಾಯ ತೀರ್ಮಾನಕ್ಕೆ ವರವಾಗಿದೆ.
“ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ, ಅಭ್ಯುತ್ಥಾನಮಧರ್ಮಸ್ಯ ಧರ್ಮ ಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ’ ಎಂದ ಕೃಷ್ಣ ಈಗಲೂ ಧರ್ಮದ ರಕ್ಷಣೆ ಕೆಲಸ ಮಾಡುತ್ತಿದ್ದಾನೆ. ಐದು ಎಕರೆ ಜಾಗದ ನ್ಯಾಯ ಮಸೀದಿ ನಿರ್ಮಾಣಕ್ಕೆ ಸಂದಿದೆ. ರಾಮ ರಹೀಮರ ಪರಸ್ಪರ ಸಹಕಾರದಿಂದ ದೇಶಕ್ಕೆ ಒಳಿತಾಗಲಿ ಎನ್ನುವ ಹಾರೈಕೆಯೊಂದಿಗೆ ಶ್ರೀಕೃಷ್ಣಮುಖ್ಯಪ್ರಾಣರಿಗೆ ಪ್ರಾರ್ಥನೆ ಸಲ್ಲಿಸುವುದಾಗಿ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.