Shivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್, ಕಟೌಟ್ ತೆರವು
Team Udayavani, Oct 4, 2023, 12:41 AM IST
ಉಡುಪಿ: ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಮಂಗಳವಾರ ಬೆಳಗ್ಗೆ ನಡೆಸಿದರು.
ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್ಹಾಗೂ ಕಟೌಟ್ಗಳನ್ನು ತೆರವುಗೊಳಿಸಲಾಯಿತು.
ಅ. 10ರಂದು ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಿರುವ ಹಿಂದೂ ಸಮಾಜೋತ್ಸವಕ್ಕೆ ಸಂಬಂಧಿಸಿದ ಬ್ಯಾನರ್ಗಳನ್ನು ಅನುಮತಿ ಪಡೆಯದೆ ಅಳವಡಿಸಿದ್ದು, ಅವುಗಳನ್ನೂ ತೆರವುಗೊಳಿಸಿದ್ದಾರೆ. ಸಂಘಟನೆಯವರು ಸಂಜೆ ವೇಳೆ ಕಟೌಟ್ಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿರುವುದಾಗಿ ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಶಾಸಕರಿಂದ ಎಸ್ಪಿ ಭೇಟಿ
ಹಿಂದೂ ಸಮಾಜೋತ್ಸವದ ಬ್ಯಾನರ್ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಕೆ. ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಹಿಂದಿನಂತೆ ಸಮಾಜೋತ್ಸವ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಬ್ಯಾನರ್ ಅಳವಡಿಕೆ, ಅಲಂಕಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಎಸ್ಪಿಯವರಿಗೆ ಮನವಿ ಮಾಡಿದ್ದೇವೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಭರವಸೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.