Baindur; ದೇವಾಲಯದ ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಮೃ*ತ್ಯು
Team Udayavani, Sep 25, 2024, 12:08 PM IST
ಬೈಂದೂರು: ಇಲ್ಲಿನ ಪೇಟೆಯಲ್ಲಿನ ದೇವಸ್ಥಾನದ ಕೆರೆಯಲ್ಲಿ ಈಜಾಡಲೆಂದು ತೆರಳಿದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಮಂಗಳವಾರ(ಸೆ24 )ಸಂಜೆ ನಡೆದಿದೆ.
ಮೃತ ಬಾಲಕರು ನಾಗೇಂದ್ರ (13) ಮತ್ತು ಮೊಹಮದ್ ಶಫಾನ್ (13) ಎನ್ನುವವರಾಗಿದ್ದಾರೆ. ನಾಗೇಂದ್ರ ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗಿದ್ದು, ಮೊಹಮದ್ ಶಫಾನ್ ರೈಲ್ವೆ ನಿಲ್ದಾಣದ ಬಳಿಯ ಶಾನು ಶಾಲಿಯಾನ್ ಅವರ ಪುತ್ರ.
ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಪರೀಕ್ಷೆ ಬರೆದು ಮನೆಗೆ ಬಂದು ಊಟ ಮುಗಿಸಿ ಈಜಾಡಲು ತೆರಳಿದ್ದರು. ಮಳೆಸುರಿಯುತ್ತಿದ್ದ ಕಾರಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೈಕಲ್, ಬಟ್ಟೆ ಪಾದರಕ್ಷೆಗಳು ಕಂಡು ಬಂದ ಕಾರಣ ಇಬ್ಬರು ನೀರು ಪಾಲಾಗಿರುವುದು ತಿಳಿದು ಬಂದಿದ್ದು, ಹುಡುಕಾಟಕ್ಕಿಳಿಯಲಾಗಿದ್ದು, ಶವಗಳನ್ನು ಕಾರ್ಯಾಚರಣೆ ನಡೆಸಿ ಬುಧವಾರ ನಸುಕಿನ ವೇಳೆ ಮೇಲಕ್ಕೆತ್ತಲಾಗಿದೆ.
ದಿನನಿತ್ಯವೂ ಕೆರೆಗೆ ಹಲವು ಮಂದಿ ಈಜಲೆಂದು ಬರುತ್ತಿದ್ದರು. ಆದರೆ ಮಂಗಳವಾರ ಕಾರಣ ಯಾರೂ ಬಂದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಮೃತ ಬಾಲಕರಿಬ್ಬರಿಗೂ ಸರಿಯಾಗಿ ಈಜು ಬರದಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮೃತರಿಬ್ಬರ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura ಪುರಸಭೆಗೆ ಹೊರೆಯಾದ ನೀರು ಪೂರೈಕೆ ಹೊಣೆ ಗೊಂದಲ; ಜಲಸಿರಿ ಬಿಳಿಯಾನೆಗೆ ಅಂಕುಶ?
Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ
Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು
Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ
Bull Trawl ಬೋಟುಗಳನ್ನು ಅಡ್ಡಗಟ್ಟಿದ ಆಕ್ರೋಶಿತ ನಾಡದೋಣಿ ಮೀನುಗಾರರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kundapura ಪುರಸಭೆಗೆ ಹೊರೆಯಾದ ನೀರು ಪೂರೈಕೆ ಹೊಣೆ ಗೊಂದಲ; ಜಲಸಿರಿ ಬಿಳಿಯಾನೆಗೆ ಅಂಕುಶ?
ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!
Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್ ಲಾರಿ ಹಾಗೂ ಮೃತದೇಹ ಪತ್ತೆ
Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!
Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.