ಖಾಲಿಯಾಗುತ್ತಿರುವ ಬ್ಯಾಂಕಿಂಗ್‌ ಹುದ್ದೆಗಳು; ಭರ್ತಿ ಅವಕಾಶ


Team Udayavani, Mar 10, 2017, 6:53 AM IST

10-UDUPI-1.jpg

ಉಡುಪಿ: ಇತ್ತೀಚಿನ ವರ್ಷಗಳಲ್ಲಿ ಯಾವುದೇ ಬ್ಯಾಂಕ್‌ ಶಾಖೆಗಳಿಗೆ ಹೋದರೂ ಹಿರಿಯರ ಮುಖದರ್ಶನ ಆಗುತ್ತದೆ, ಜೊತೆಗೆ ಕನ್ನಡ ಬಾರದ ಹೊಸಬರ ಮುಖದರ್ಶನವೂ ಆಗುತ್ತದೆ. 

ಕಾರಣವಿಷ್ಟೆ 1970-70ರ ದಶಕಗಳಲ್ಲಿ ಬ್ಯಾಂಕ್‌ಗಳು ವಿಸ್ತರಣೆಗೊಂಡ ಸಂದರ್ಭ ಸೇರ್ಪಡೆಗೊಂಡ ಸಿಬಂದಿ ಒಂದು ದಶಕದಿಂದ ನಿವೃತ್ತರಾಗುತ್ತಲೇ ಇದ್ದಾರೆ. ಇದೇ ಪ್ರಮಾಣದಲ್ಲಿ ಕನ್ನಡಿಗರು ಬ್ಯಾಂಕ್‌ಗಳಿಗೆ ಸೇರ್ಪಡೆಗೊಳ್ಳುತ್ತಿಲ್ಲ. ಇದರ ಅಡ್ಡಪರಿಣಾಮವೇ ಕನ್ನಡೇತರರು ಬ್ಯಾಂಕ್‌ಗಳಿಗೆ ಲಗ್ಗೆ ಇಡುತ್ತಿದ್ದಾರೆ. ಬ್ಯಾಂಕ್‌ಗಳ ತೊಟ್ಟಿಲು ಎಂದು ಪ್ರಸಿದ್ಧವಾದ, ಬಹುತೇಕ ಎಲ್ಲ ಮನೆಗಳಲ್ಲಿಯೂ ಒಬ್ಬರಲ್ಲ ಒಬ್ಬರು ಬ್ಯಾಂಕ್‌ ಉದ್ಯೋಗಿಗಳಾಗಿದ್ದ ಕರಾವಳಿ ಜಿಲ್ಲೆಗಳಲ್ಲಿಯೂ ಇದರ ಲಕ್ಷಣ ಕಂಡುಬರುತ್ತಿದೆ. 

ಒಂದು ಕಾಲದಲ್ಲಿ ಬಿಎಸ್‌ಆರ್‌ಬಿ ಬ್ಯಾಂಕ್‌ಗಳಿಗೆ ಆಯ್ಕೆ, ನೇಮಕಾತಿ ಮಾಡುತ್ತಿತ್ತು. ಈಗ ಬಿಎಸ್‌ಆರ್‌ಬಿ ಅಸ್ತಿತ್ವದಲ್ಲಿಲ್ಲ. ಇನ್‌ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸನೆಲ… ಸೆಲೆಕ್ಷನ್‌ (ಐಬಿಪಿಎಸ್‌) ಬ್ಯಾಂಕಿಂಗ್‌ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದೆ. ಐಬಿಪಿಎಸ್‌ ರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್‌ ನೇಮಕಾತಿಗೆ ಪರೀಕ್ಷೆ ನಡೆಸುವ ಸ್ವಾಯತ್ತ ಸಂಸ್ಥೆ. ಖಾಸಗಿ, ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್‌ಗಳಿಗೆ ನೇಮಕಾತಿ ಪರೀಕ್ಷೆಗಳನ್ನು ನಡೆಸುತ್ತಿದೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೂ ಪರೀಕ್ಷೆ ನಡೆಸುತ್ತಿದೆ ಐಬಿಪಿಎಸ್‌. ಐಬಿಪಿಎಸ್‌ ವೆಬ್‌ಸೈಟ್‌ಗೆ ಭೇಟಿ ನೀಡಿದರೆ ಎಲ್ಲ ವಿವರಗಳು ದೊರಕುತ್ತವೆ. ಈ ವೆಬ್‌ ತಾಣದಲ್ಲಿ ಅರ್ಜಿ ಸಲ್ಲಿಕೆ, ಪರೀಕ್ಷೆ ನಡೆಯುವ ದಿನಾಂಕ, ಅಣಕು ಪರೀಕ್ಷೆ, ಹಾಲ್‌ ಟಿಕೆಟ್‌, ಫ‌ಲಿತಾಂಶ ಇತ್ಯಾದಿ ಮಾಹಿತಿ ಸಿಗುತ್ತವೆ. 

 ಐಬಿಪಿಎಸ್‌ ಬಗ್ಗೆ ಯುವ ಜನರಿಗೆ ಅರಿವು ಮೂಡಿಸಬೇಕಾಗಿದೆ. ಬೇರೆ ಬೇರೆ ಕ್ಷೇತ್ರಗಳ ಕುರಿತು ಆಕರ್ಷಕ ಪ್ರಚಾರ ನಡೆಯುವಂತೆ ಬ್ಯಾಂಕಿಂಗ್‌ ಸೇರ್ಪಡೆ ಕುರಿತು ಆಕರ್ಷಕ ಪ್ರಚಾರ ನಡೆಯುತ್ತಿಲ್ಲ. ಬ್ಯಾಂಕಿಂಗ್‌ ಪರೀಕ್ಷೆ ಈಗ ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಾಗಿ ರೂಪುಗೊಂಡಿರುವುದರಿಂದ ತಮ್ಮ ಬುದ್ಧಿಮತ್ತೆಗೆ ಸಾಣೆ ಹಿಡಿಯಬೇಕಾಗುತ್ತದೆ ಮತ್ತು ರಾಷ್ಟ್ರ ಮಟ್ಟದ ಪರೀಕ್ಷೆಯಾದ ಕಾರಣ ಕನ್ನಡಿಗರು ಹಿಂದೆ ಬಿದ್ದರೆ ಸಹಜವಾಗಿ ನಮ್ಮ ನೆಲದಲ್ಲಿ ಸಿಗಬೇಕಾದ ಉದ್ಯೋಗಾವಕಾಶ ಬೇರೆ ರಾಜ್ಯದವರಿಗೆ ಹೋಗುತ್ತಿದೆ. ಹೀಗಾಗಿ ಅಭ್ಯರ್ಥಿಗಳು ಪರೀಕ್ಷೆಗೆ ಪೂರ್ಣ ಪ್ರಮಾಣದ ಗಮನ ಕೊಟ್ಟು, ಕಠಿನ ಪರಿಶ್ರಮದೊಂದಿಗೆ ತಯಾರಿ ನಡೆಸಲೇಬೇಕಿದೆ. ಉದಾಸೀನತೆಯೊಂದಿಗೆ ಅಥವ ಅರೆ-ಮನಸ್ಸಿ ನೊಂದಿಗೆ ಪರೀಕ್ಷೆ ಎದುರಿಸಿದರೆ ಪ್ರಯೋಜನ ಸಿಗದು. ಇದಕ್ಕಾಗಿಯೇ ಅನೇಕ ತರಬೇತಿ ಕೇಂದ್ರಗಳು ಆರಂಭಗೊಂಡಿದ್ದು, ಪ್ರಶ್ನೆಗಳಿಗೆ ಉತ್ತರಿಸುವ ಕ್ರಮ, ಟೈಮ್‌ ಮೆನೇಜೆ¾ಂಟ್‌ನ್ನು ತಿಳಿಸುತ್ತವೆ. 

ಉದ್ಯೋಗಕ್ಕೆ ವಿಫ‌ುಲ ಅವಕಾಶ: ಬ್ಯಾಂಕ್‌ಗಳಲ್ಲಿ ನಿವೃತ್ತಿ ಅಂಚಿನಲ್ಲಿರುವವರ ಜೊತೆ ಬ್ಯಾಂಕ್‌ಗಳು ಸಣ್ಣ ಸಣ್ಣ ಹಳ್ಳಿಗಳಲ್ಲಿಯೂ ಶಾಖೆ ತೆರೆಯುವ ಚಿಂತನೆಯಲ್ಲಿವೆ. ಇದಕ್ಕೆ ಸರಕಾರದ ಆದೇಶವಿದೆ. ಬ್ಯಾಂಕ್‌ಗಳೂ ವಿವಿಧ ರೀತಿಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಗ್ರಾಹಕ ಜಾಲ ವಿಸ್ತರಿಸುತ್ತಿವೆ. ಈ ಅಗತ್ಯತೆ ಪೂರೈಸಲು ಹೊಸ ಜನರು, ಕ್ರಿಯಾಶೀಲರು ಬೇಕಾಗಿ¨ªಾರೆ. ಒಂದು ಅಂದಾಜಿನ ಪ್ರಕಾರ ಮುಂದಿನ 12 ತಿಂಗಳಲ್ಲಿ 3 ಲಕ್ಷ ಉದ್ಯೋಗಕ್ಕೆ ಬ್ಯಾಂಕಿಂಗ್‌ ಕ್ಷೇತ್ರ ತೆರೆದುಕೊಳ್ಳಲಿದೆ. ಈ ಅವಕಾಶವನ್ನು ನಮ್ಮ ಅಭ್ಯರ್ಥಿಗಳು ಬಳಸಿಕೊಳ್ಳಬೇಕಾಗಿದೆ ಎಂದು  ಕರ್ಣಾಟಕ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಮುಖ್ಯಪ್ರಬಂಧಕ ಬಿ.ಎಂ. ರಮೇಶ್‌ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.