ಹೈನುಗಾರರ ಸ್ವಾವಲಂಬನೆಗೆ ದಾರಿದೀಪವಾದ ಸಂಸ್ಥೆ

ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ

Team Udayavani, Feb 14, 2020, 6:15 AM IST

hainugarike

ಗ್ರಾಮೀಣ ಜನರಿಗೆ ಬೇಸಾಯದ ಜತೆಗೆ ಉಪ ಕಸುಬು ಕಲ್ಪಿಸಿ, ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ಥಾಪನೆಗೊಂಡದ್ದು ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ. ಜಿಲ್ಲೆಯ ಕ್ರಿಯಾಶೀಲ ಸಂಘವಾಗಿ ಇದರ ಸಾಧನೆಯೂ ದೊಡ್ಡದಿದೆ.

ಕೋಟ: ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ 1976 ಮಾ.22ರಂದು ಕೆನರಾ ಮಿಲ್ಕ್ ಯೂನಿಯನ್‌(ಕೆಮುಲ್‌) ಅಧೀನದಲ್ಲಿ ಸ್ಥಾಪನೆಯಾಗಿತ್ತು. ಆರಂಭದಲ್ಲಿ ಇಲ್ಲಿನ ಪರಮಹಂಸ ಹಿ.ಪ್ರಾ. ಶಾಲೆಯ ಕೋಣೆಯೊಂದರಲ್ಲಿ ಸಂಘ ಕಾರ್ಯಚಟುವಟಿಕೆ ನಡೆಸುತ್ತಿತ್ತು. ಅನಂತರ 1997ರಲ್ಲಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ಇದು ಜಿಲ್ಲೆಯ ಹಳೆಯ ಡೈರಿಗಳಲ್ಲಿ ಒಂದಾಗಿದ್ದು ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧೀನದಲ್ಲಿ ಈಗ ಕಾರ್ಯ ನಿರ್ವಹಿಸುತ್ತಿದೆ.

ಉಪಕಸುಬಿನ ಕನಸು
ಗ್ರಾಮಾಂತರ ಭಾಗದ ಜನರಿಗೆ ಕೃಷಿಯ ಜತೆಗೆ ಉಪಕಸಬು ಕಲ್ಪಿಸಬೇಕು ಎನ್ನುವ ಕನಸಿನೊಂದಿಗೆ ಈ ಸಂಘ ಉದಯವಾಗಿತ್ತು. ಕೆನರಾ ಮಿಲ್ಕ್ಯೂನಿಯನ್‌ನ ನಿರ್ದೇಶಕ ರಾಗಿದ್ದ ಭೋಜ ಹೆಗ್ಡೆಯವರು ಈ ಸಂಘದ ಸ್ಥಾಪಕಾಧ್ಯಕ್ಷರು. ಶಿಕ್ಷಣ ತಜ್ಞ ದಿ| ಬನ್ನಾಡಿ ಸುಬ್ಬಣ್ಣ ಹೆಗ್ಡೆಯವರ ಮಾರ್ಗದರ್ಶನ ಆಗ ಪ್ರಮುಖವಾಗಿತ್ತು. ಕೇವಲ 60-70 ಸದಸ್ಯರು, 50 ಲೀ.ಹಾಲು ಆರಂಭದ ದಿನಗಳಲ್ಲಿ ಸಂಗ್ರಹವಾಗುತಿತ್ತು. ಐದಾರು ಕಿ.ಮೀ. ದೂರದ ಚಿತ್ರಪಾಡಿ, ಉಪ್ಲಾಡಿ, ಕಾವಡಿ ಮೊದಲಾದ ಕಡೆಗಳಿಂದ ಜನರು ಹಾಲು ತರುತ್ತಿದ್ದರು. ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಶಿವಮರಕಾಲ ಸುಮಾರು 32ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸಂಘವನ್ನು ಮುನ್ನಡೆಸಿದ್ದರು.

ಕೃತಕ ಗರ್ಭಧಾರಣೆ ಸೌಲಭ್ಯ
ಆ ಕಾಲದಲ್ಲಿ ರಾಸುಗಳಿಗೆ ಕೃತಕ ಗರ್ಭಧಾರಣೆ ಕೇವಲ ಪಶು ಆಸ್ಪತ್ರೆಯ ಮೂಲಕ ಮಾಡಲಾಗುತ್ತಿತ್ತು. ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಈ ಬಗ್ಗೆ ಹೆಚ್ಚು ತಿಳಿವಳಿಕೆ ಇರಲಿಲ್ಲ. ಹೀಗಾಗಿ ಊರಿನ ರಾಸುಗಳಿಗೂ ಕೃತಕ ಗರ್ಭಧಾರಣೆ ಮಾಡುತ್ತಿದ್ದರು.

ಹೈಬ್ರಿಡ್‌ ತಳಿಯ ಕರುಗಳನ್ನು ಪಡೆದು ಅದರಿಂದ ಹೆಚ್ಚು ಹಾಲು ಉತ್ಪಾದನೆ ಮಾಡುವ ಸಲುವಾಗಿ ಹಾಲು ಉತ್ಪಾದಕರ ಸಂಘಗಳ ಸಿಬಂದಿಗೆ ಕೆನರಾ ಮಿಲ್ಕ್ಯೂನಿಯನ್‌ ವತಿಯಿಂದ ತರಬೇತಿ ನೀಡಲಾಗುತಿತ್ತು. ಆಗ ಬನ್ನಾಡಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯಾಗಿದ್ದ ಶಿವ ಮರಕಾಲ ಈ ಭಾಗದಲ್ಲಿ ಪ್ರಥಮವಾಗಿ ಈ ತರಬೇತಿಯನ್ನು ಪಡೆದು ಯೋಜನೆಯನ್ನು ಕಾರ್ಯಗತಗೊಳಿಸಿದ್ದರು.

ಪ್ರಸ್ತುತ ಸ್ಥಿತಿಗತಿ
ಪ್ರಸ್ತುತ ಸಂಘದಲ್ಲಿ 218 ಮಂದಿ ಸದಸ್ಯರಿದ್ದು ಪ್ರತಿದಿನ ಸುಮಾರು 725ಲೀ. ಮಿಕ್ಕಿ ಹಾಲು ಸಂಗ್ರಹವಾಗುತ್ತಿದೆ. ವಸಂತ್‌ ಶೆಟ್ಟಿ ಪ್ರಸ್ತುತ ಅಧ್ಯಕ್ಷರಾಗಿದ್ದು ಸುಜಾತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯರಾದ ಸರಸ್ವತಿ, ಚಂದ್ರ ಪೂಜಾರಿ ಸಂಘಕ್ಕೆ ಅತೀ ಹೆಚ್ಚು ಹಾಲು ಪೂರೈಕೆ ಮಾಡುತ್ತಿದ್ದಾರೆ. ಊರಿನ ನೂರಾರು ಮಂದಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದು ಆರ್ಥಿಕವಾಗಿ ಲಾಭವನ್ನು ಪಡೆದಿದ್ದಾರೆ.

ಹಿರಿಯರು ಸಾಕಷ್ಟು ಪರಿಶ್ರಮಪಟ್ಟು ಈ ಸಂಸ್ಥೆಯನ್ನು ಕಟ್ಟಿಬೆಳೆಸಿದ್ದಾರೆ. ಇದೀಗ ಹಾಲಿನ ಸಂಗ್ರಹ ಮೊದಲಿಗಿಂತ ಹೆಚ್ಚಿದೆ. ಸಾಮಾಜಿಕ, ಚಟುವಟಿಕೆಗಳಲ್ಲೂ ತೊಡಗಿಸಿ ಕೊಂಡಿದ್ದೇವೆ. ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಬೇಕು. ಆ ಮೂಲಕ ಜನರನ್ನು ಇನ್ನಷ್ಟು ಸ್ವಾವಲಂಬಿಗಳನ್ನಾಗಿಸಬೇಕು ಎನ್ನುವುದು ಸಂಸ್ಥೆಯ ಆಶಯವಾಗಿದೆ.

– ವಸಂತ್‌ ಶೆಟ್ಟಿ, ಅಧ್ಯಕ್ಷರು

-  ರಾಜೇಶ್‌ ಗಾಣಿಗ ಅಚಾÉಡಿ

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.