ಬನ್ನಂಜೆ ರಾ.ಹೆ. ಬದಿ ನೀರಿನ ಪೈಪ್‌ ಕಡಿತ: ನೀರು ಪೋಲು


Team Udayavani, Sep 27, 2018, 6:00 AM IST

2609udsg2.jpg

ಉಡುಪಿ: ಒಂದೆಡೆ ನೀರಿನ ಕೊರತೆ ಅನುಭವಿಸುತ್ತಿದ್ದರೆ ಇನ್ನೊಂದೆಡೆ ನೀರು ಪೋಲಾಗುತ್ತಿರುವುದನ್ನು ಕಂಡೂ ಉತ್ತರದಾಯಿಗಳು ಸುಮ್ಮನಾಗಿರುವುದು ಕಂಡುಬರುತ್ತಿದೆ. 

ಬನ್ನಂಜೆಯ ಮಂಜುನಾಥ ಆಸ್ಪತ್ರೆ ಬಳಿ, ವಿಜಯ ಜುವೆಲರ್ ಎದುರಿನಲ್ಲಿ ರಾ.ಹೆ.ಯ ಎಡ ಪಾರ್ಶ್ವದ ಫ‌ುಟ್‌ಪಾತ್‌ಗೆ ತಾಗಿಕೊಂಡ ಭಾಗದಲ್ಲಿ ನಗರಸಭೆಗೆ ಸಂಬಂಧಿಸಿದ ನೀರಿನ ಪೈಪ್‌ಲೈನ್‌ ಆಗಸ್ಟ್‌ನಲ್ಲಿಯೇ ಒಡೆದು ಹೋಗಿದ್ದು, ಹಗಲು ರಾತ್ರಿಯೆನ್ನದೆ ಕುಡಿಯುವ ನೀರು ಪೋಲಾಗುತ್ತಿದೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದ್ದರೂ ಇನ್ನೂ ರಿಪೇರಿಗೊಳಿಸಿಲ್ಲ. ಇನ್ನಾದರೂ ನಗರಸಭೆ ಈ ಬಗ್ಗೆ ಗಮನಹರಿಸಿ ಪೈಪ್‌ಲೈನ್‌ ರಿಪೇರಿಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ನೀರು ಪೋಲಾಗುತ್ತಿರುವ ಇಲ್ಲಿ ಅಳವಡಿಸಲಾದ ಇಂಟರ್‌ಲಾಕ್‌ ಕಿತ್ತು ಹೋಗಿ ಸುಮಾರು 2-3 ಅಡಿಯ ಹೊಂಡ ನಿರ್ಮಾಣವಾಗಿದೆ. ಇದಕ್ಕೆ ಆಗಾಗ ಹಲವಾರು ಕಾರು, ರಿಕ್ಷಾ, ದ್ವಿಚಕ್ರವಾಹನಗಳು ಬಿದ್ದ ಘಟನೆಯೂ ನಡೆದಿದೆ. ಈ ಕುರಿತು ನಗರಸಭೆಗೆ ಆ. 20ಕ್ಕೆ ದೂರು ನೀಡಲಾಗಿದ್ದು, ನಗರಸಭೆ ಅಧಿಕಾರಿಗಳು ಮಳೆಗಾಲ, ಚುನಾವಣೆಯ ನೆಪವೊಡ್ಡಿ ಪೈಪ್‌ಲೈನ್‌ ರಿಪೇರಿಗೊಳಿಸದೆ, ಇದುವರೆಗೂ ಸಮಸ್ಯೆ ಜೀವಂತವಾಗಿ ಉಳಿದುಕೊಂಡಿದೆ. ಫ‌ುಟ್‌ಪಾತ್‌ನಲ್ಲಿ ನಿರಂತರವಾಗಿ ಸಂಚರಿಸುವ ಪಾದಾಚಾರಿಗಳು, ಬೆಳಗ್ಗೆ, ಸಂಜೆ ಸಮಯ ಶಾಲಾ ಮಕ್ಕಳು ನಡೆದಾಡುತ್ತಾರೆ. ವಯೋವೃದ್ಧರು, ಶಾಲಾ ಮಕ್ಕಳು ಆಯ ತಪ್ಪಿ ಹೊಂಡಕ್ಕೆ ಬಿದ್ದು ಅನಾಹುತ ಸಂಭವಿಸುವ ಮೊದಲು ನಗರಸಭೆ ಪೈಪ್‌ಲೈನ್‌ ರಿಪೇರಿಗೊಳಿಸಿ, ಹೊಂಡ ಮುಚ್ಚಿ, ಇಂಟರ್‌ಲಾಕ್‌ ಅಳವಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕೊನೆಗೂ ಬ್ಯಾರಿಕೇಡ್‌ ಅಳವಡಿಕೆ
ಅಪಾಯ ಎದುರಿಸುತ್ತಿರುವ ಈ ಭಾಗಕ್ಕೆ ಬ್ಯಾರಿಕೇಡನ್ನಾದರೂ ಅಳವಡಿಸುವಂತೆ ನಗರಸಭೆಗೆ ಹಲವು ಬಾರಿ ದೂರವಾಣಿ ಮೂಲಕ ಭಿನ್ನವಿಸಿಕೊಂಡ 10 ದಿನಗಳ ಬಳಿಕ ಬ್ಯಾರಿಕೇಡ್‌ ಅಳವಡಿಸಿದ್ದಾರೆ. 2 ತಿಂಗಳಿಂದಲೂ ಕುಡಿಯುವ ನೀರು ಅನಾವಶ್ಯಕವಾಗಿ ಹರಿದು ಪೋಲಾಗುತ್ತಿರುವ ಬಗ್ಗೆ ಹಲವು ಬಾರಿ ಹೇಳಿಕೊಂಡರೂ ಪ್ರಯೋಜನವಾಗಿಲ್ಲ.  
– ಜೀವನ ಕುಮಾರ್‌ ಶೆಟ್ಟಿ, ಸ್ಥಳೀಯರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.