ಸಾಧನೆಗೆ ಅಡ್ಡಿಯಾಗದ ಅಂಧತ್ವ: ಉದಯವಾಣಿಯಲ್ಲಿ “ಮಾನವ ಕಂಪ್ಯೂಟರ್‌’


Team Udayavani, Dec 13, 2022, 7:55 AM IST

ಸಾಧನೆಗೆ ಅಡ್ಡಿಯಾಗದ ಅಂಧತ್ವ: ಉದಯವಾಣಿಯಲ್ಲಿ “ಮಾನವ ಕಂಪ್ಯೂಟರ್‌’

ಮಣಿಪಾಲ : ಮಾಹಿತಿಗ ಳನ್ನು ಕ್ಷಣಾರ್ಧದಲ್ಲಿ ತಿಳಿಯಲು ಕಂಪ್ಯೂಟರ್‌ ಮೊರೆ ಹೋಗುವುದೇ ಹೆಚ್ಚು. ಈ ಜ್ಞಾನ ಮನುಷ್ಯರಿಗೆ ಸಿದ್ಧಿಸಿದರೆ ಹೇಗಾಗಬೇಡ…? ಇಂತಹದ್ದೇ ಒಂದು ಜ್ಞಾನ ಭಂಡಾರ ಇರುವುದು ಬೆಳಗಾವಿ ಜಿಲ್ಲೆ ಅಥಣಿಯ ಬಸವರಾಜ ಶಂಕರ ಉಮ್ರಾಣಿ ಅವರಿಗೆ.

ಉದಯವಾಣಿಯ ಮಣಿಪಾಲ ಕೇಂದ್ರ ಕಚೇರಿಗೆ ಆಗ ಮಿಸಿದ್ದ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಹುಟ್ಟು ಕುರುಡರಾದ ಇವರ ಸಾಧನೆಗೆ ಅದು ಯಾವತ್ತೂ ಅಡ್ಡಿ ಎನಿಸಿದ್ದೇ ಇಲ್ಲವಂತೆ!

28 ವರ್ಷದ ಇವರು ಎಂಎ, ಬಿಎಡ್‌ ಪದವೀಧರರು. ಬೆಂಗಳೂರಿನ ಆದರ್ಶ ಗ್ರೂಪ್‌ ಆಫ್ ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. 1900ರಿಂದ 2100ರ ವರೆಗಿನ ಯಾವುದೇ ವರ್ಷದ ಕ್ಯಾಲೆಂಡರ್‌ ದಿನವನ್ನು ಕ್ಷಣಾರ್ಧದಲ್ಲಿ ಹೇಳಬಲ್ಲರು. ಹುಟ್ಟಿದ ದಿನಾಂಕ, ದಿನ ಕೂಡ!

ಗಣಿತ ವಿಚಾರಗಳೆಲ್ಲವೂ ಲೀಲಾಜಾಲ. 30 ಅಂಕಿಗಳನ್ನು ಒಟ್ಟಿಗೆ ಹೇಳಿದರೂ ಅದನ್ನು ಏರಿಕೆ ಮತ್ತು ಇಳಿಕೆ ಕ್ರಮದಲ್ಲಿ ಹೇಳಬಲ್ಲರು. ಗಡಿಯಾರದ ಸಹಾಯವಿಲ್ಲದೆ ನಿಖರವಾಗಿ ಸಮಯ ಹೇಳುವ ನೈಪುಣ್ಯ ಇವರದ್ದು. ಬೇರೆ ಬೇರೆ ಮೌಲ್ಯದ ಕರೆನ್ಸಿ ನೋಟುಗಳನ್ನು ಕೈಯಲ್ಲಿ ಸ್ಪರ್ಶಿಸಿಯೇ ಅವುಗಳ ಒಟ್ಟು ಮೌಲ್ಯವನ್ನು ತಿಳಿಸುವ ಚಾತುರ್ಯ ಇವರಿಗಿದೆ. ಎಂದೋ… ಎಲ್ಲೋ ಕೇಳಿದ ದೂರವಾಣಿ ಸಂಖ್ಯೆಯನ್ನು ಹಾಗೂ ಭೇಟಿಯಾದ ದಿನಾಂಕ ಸಮಯವನ್ನೂ ಹೇಳಬಲ್ಲರು.

ಹಲವು ನಾಯಕರ ಭೇಟಿ
ಭಾರತದ ಬಹುತೇಕ ಜಿಲ್ಲೆ ಹಾಗೂ ರಾಜ್ಯಗಳನ್ನು ಸುತ್ತಿರುವ ಇವರು ಸೌದಿ ಅರೇಬಿಯಾ, ದುಬಾೖ, ಶಾರ್ಜಾ ಸಹಿತ ಹಲವಾರು ವಿದೇಶಿ ತಾಣಗಳಿಗೂ ಭೇಟಿ ನೀಡಿ ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ಡಾ| ಎಪಿಜೆ ಅಬ್ದುಲ್‌ ಕಲಾಂ, ದುಬಾೖ ದೊರೆ… ಹೀಗೆ ಇವರು ಭೇಟಿ ಮಾಡಿರುವ ಗಣ್ಯರ ಪಟ್ಟಿ ಬೆಳೆಯುತ್ತದೆ.
ಏಕಾಗ್ರತೆ, ಯೋಗ, ಧ್ಯಾನ, ಪ್ರಾಣಾಯಾಮವೇ ಯಶಸ್ಸಿನ ಮೂಲ. ನಾವು ಮಾಡುವ ಕೆಲಸದ ಮೇಲೆ ಏಕಾಗ್ರತೆ ಇದ್ದರೆ ನಮ್ಮ ಸಾಧನೆಗೆ ಯಾರೂ ಅಡ್ಡಿಯಾಗಲಾರರು ಎನ್ನುತ್ತಾರೆ ಅವರು.

ಅಧಿಕಾರಿಯಾಗುವಾಸೆ
ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದು ಉನ್ನತ ಅಧಿಕಾರಿಯಾಗುವ ಆಸೆ ಇವರದ್ದು. ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಗಣಿತದ ಬಗ್ಗೆ ಇರುವ ಭಯವನ್ನು ಹೋಗಲಾಡಿಸುವ ಉದ್ದೇಶ ಹೊಂದಿದ್ದಾರೆ. ವಿದ್ಯಾರ್ಥಿಗಳನ್ನು ಹ್ಯೂಮನ್‌ ಕಂಪ್ಯೂಟರ್‌ಗಳನ್ನಾಗಿಸಿ ಆ ಮೂಲಕ ಗಿನ್ನೆಸ್‌ ದಾಖಲೆ ಸ್ಥಾಪಿಸುವ ಉದ್ದೇಶವನ್ನೂ ಹೊಂದಿದ್ದಾರೆ.

ಹೊಸದನ್ನು ಸಾಧಿಸುವ ಹಂಬಲ ಪ್ರತಿಯೊಬ್ಬರಲ್ಲಿಯೂ ಇರಬೇಕು. ಏಕಾಗ್ರತೆಯಿಂದ ಇದನ್ನು ಸಾಧಿಸಬೇಕು. ದೂರದ ಊರಿಗೆ ಹೋಗುವಾಗ ನಾವು ಮಾಡುವ ಸಿದ್ಧತೆಯಂತೆ. ಪ್ರತಿದಿನ, ಪ್ರತಿಕ್ಷಣವೂ ಸಿದ್ಧ ಎಂಬ ಭಾವನೆಯೇ ಯಶಸ್ಸಿನ ಗುಟ್ಟು.
– ಬಸವರಾಜ ಶಂಕರ ಉಮ್ರಾಣಿ

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.