ಕುವೈಟ್‌ ಸೆರೆಯಲ್ಲಿ ಬಸ್ರುರೂ ವ್ಯಕ್ತಿ: ಇನ್ನೆರಡು ದಿನದಲ್ಲಿ ಸ್ಪಷ್ಟ


Team Udayavani, Aug 30, 2018, 11:01 AM IST

basruru.jpg

ಕುಂದಾಪುರ: ಊರಿನಿಂದ ಮರಳುವಾಗ ಬೇರೆಯವರ ಮಾತ್ರೆ ಪಾರ್ಸೆಲನ್ನು ತೆಗೆದುಕೊಂಡು ಹೋದರೆಂಬ ಕಾರಣಕ್ಕೆ ಕುವೈಟ್‌ ಜೈಲು ಸೇರಿರುವ ಕುಂದಾಪುರ ತಾಲೂಕು ಬಸ್ರುರೂ ನಿವಾಸಿ ಶಂಕರ ಪೂಜಾರಿ (40) ಅವರನ್ನು ಭಾರತಕ್ಕೆ ಕರೆತರುವ ಸಂಬಂಧ ಉಡುಪಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ.

ಶಂಕರ ಪೂಜಾರಿ ಅವರು 3 ತಿಂಗಳಿನಿಂದ ಜೈಲಿನಲ್ಲಿದ್ದು, ಯಾವ ಕಾರಣಕ್ಕೆ ಬಂಧನಕ್ಕೊಳಗಾಗಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭಿಸಿಲ್ಲ. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಶಂಕರ ಪೂಜಾರಿ ಅವರ ಪತ್ನಿ ಜ್ಯೋತಿ ಅವರನ್ನು ಬುಧವಾರವೂ ಕಚೇರಿಗೆ ಕರೆಸಿ ಪೂರಕ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.
ಮಾನವ ಹಕ್ಕುಗಳ ಪ್ರತಿಷ್ಠಾನದ ವತಿಯಿಂದಲೂ ಮಾಹಿತಿ ಕಲೆ ಹಾಕುತ್ತಿದ್ದು, ಅವರು ಕೂಡ ಕುವೈಟ್‌ನಲ್ಲಿರುವ ರಾಯಭಾರ ಕಚೇರಿಯ ಸಂಪರ್ಕದಲ್ಲಿದ್ದಾರೆ.

ವಿದೇಶಾಂಗ ಇಲಾಖೆ ಸ್ಪಂದನೆ
ಈ ನಡುವೆ ಸಂಸದರ ಮೂಲಕ ವಿದೇಶಾಂಗ ಇಲಾಖೆಗೂ ಅವರ ಕುಟುಂಬ ಮನವಿ ಮಾಡಿದ್ದು, ಅದಕ್ಕೆ ಪ್ರತಿಯಾಗಿ ವಿದೇಶಾಂಗ ಇಲಾಖೆಯಿಂದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬಂದಿದೆ. ಶಂಕರ ಪೂಜಾರಿ ನಾಪತ್ತೆ ಸಂಬಂಧ ವಿದೇಶಾಂಗ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಪತ್ತೆಗೆ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎನ್ನುವ ಪತ್ರ ರವಾನೆಯಾಗಿದೆ.

ಕುವೈಟ್‌ನ ಕಂಪೆನಿಯೊಂದರಲ್ಲಿ 4 ವರ್ಷದಿಂದ ಕೆಲಸ ಮಾಡುತ್ತಿದ್ದ ಶಂಕರ ಪೂಜಾರಿ ಅವರು 3 ತಿಂಗಳ ಹಿಂದೆ ಊರಿಗೆ ಬಂದು ವಾಪಸಾಗುವಾಗ ಪರಿಚಯಸ್ಥರೊಬ್ಬರು ಕುವೈಟ್‌ನಲ್ಲಿ ರುವ ಅವರ ಸಂಬಂಧಿಗೆ ನೀಡುವಂತೆ ಪಾರ್ಸೆಲ್‌ ಒಂದನ್ನು ಕೊಟ್ಟಿದ್ದರು. ಕುವೈಟ್‌ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಪೊಲೀಸರಿಗೆ ಮಾತ್ರೆಗಳ 
ಕಟ್ಟು ಪತ್ತೆಯಾದ್ದರಿಂದ ವಿಚಾರಣೆ ನಡೆಸಿದ್ದು, ಸಹೋದ್ಯೋಗಿಯ ವಿನಂತಿಯಂತೆ ಕುವೈಟ್‌ನಲ್ಲಿರುವ ಮಹಿಳೆಗೆ ನೀಡಲು ತಂದಿರುವುದಾಗಿ ಶಂಕರ ಪೂಜಾರಿ ಹೇಳಿದ್ದರು. 

ಪಾರ್ಸೆಲ್‌ ಕೊಟ್ಟ ವ್ಯಕ್ತಿಯಿಂದ ಮಾಹಿತಿ ಬಯಸಿದಾಗ ಆತ ಇದಕ್ಕೂ ತನಗೂ ಸಂಬಂಧವಿಲ್ಲ ಎಂದು ಹೇಳಿದ್ದರಿಂದ ಶಂಕರ ಪೂಜಾರಿ ಅವರನ್ನು  ಪೊಲೀಸರು ಬಂಧಿನದಲ್ಲಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಮಂಗಳವಾರದಿಂದಲೇ ನಾವು ಭಾರತೀಯ ವಿದೇಶಾಂಗ ಇಲಾಖೆ ಅಧಿಕಾರಿಗಳು ಹಾಗೂ ಕುವೈಟ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ.  ಶಂಕರ ಪೂಜಾರಿ ಕುರಿತು ಸರಿಯಾದ  ಮಾಹಿತಿ ಸಿಗದ ಕಾರಣ ಸಮಸ್ಯೆಯಾಗಿದ್ದು, ಆದರೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. 
ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌,ಉಡುಪಿ ಡಿಸಿ

ನನ್ನ ಪತಿಯನ್ನು ವಾಪಸು ಭಾರತಕ್ಕೆ ಕರೆ ತರುವ ಸಂಬಂಧ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದ್ದು, ಅದೇ ಭರವಸೆಯಲ್ಲಿ ನಾವೆಲ್ಲ ಇದ್ದೇವೆ.
 ಜ್ಯೋತಿ (ಶಂಕರ ಪೂಜಾರಿ ಅವರ ಪತ್ನಿ)

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.