ಬೆಳ್ಮಣ್‌ಗೆ ಬೇಕು ಪ್ರಥಮ ದರ್ಜೆ ಕಾಲೇಜು

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹೆತ್ತವರಿಂದ ಬೇಡಿಕೆ

Team Udayavani, Jun 11, 2019, 5:00 AM IST

Belman-College

ಬೆಳ್ಮಣ್‌: ಅಭಿವೃದ್ಧಿ ಹೊಂದುತ್ತಿರುವ ಬೆಳ್ಮಣ್‌ನಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಯಾಗ ಬೇಕೆಂಬ ಬೇಡಿಕೆ ಬಹುದಿನಗಳಿಂದ ಇದ್ದು, ಬೇಡಿಕೆ ಈಡೇರಿಕೆಗಾಗಿ ಇಲ್ಲಿನ ಜನ ಕಾಯುತ್ತಿದ್ದಾರೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರಯೋಜನ
ಬೆಳ್ಮಣ್‌, ಬೋಳ, ಮುಂಡ್ಕೂರು, ಕಾಂತಾವರ, ನಂದಳಿಕೆ, ಕಲ್ಯಾ, ಇನ್ನಾ ಗ್ರಾಮ ಪಂಚಾಯತ್‌ ಸಹಿತ ಅಕ್ಕ ಪಕ್ಕದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಪಿಯುಸಿ ಮುಗಿಸಿ ಪದವಿ ಪಡೆಯಲು ದೂರದ ಶಿರ್ವ, ನಿಟ್ಟೆ, ಐಕಳದ ಪ್ರಥಮ ದರ್ಜೆ ಕಾಲೇಜುಗಳಿಗೆ ಹೋಗಬೇಕಿದೆ. ಆರ್ಥಿಕ ಸಂಕಷ್ಟ ದಲ್ಲಿರುವ ವಿದ್ಯಾರ್ಥಿಗಳಿಗೆ ವಾಹನ ಗಳಲ್ಲಿ ಹೋಗುವುದರೊಂದಿಗೆ ಖಾಸಗಿ ಕಾಲೇಜುಗಳಿಗೆ ಫೀಸು ಕಟ್ಟುವುದಕ್ಕೂ ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಕಾಲೇಜಿನ ಅಗತ್ಯ ಹೆಚ್ಚಾಗಿದೆ.

ಬೆಳ್ಮಣ್‌ ಪ.ಪೂ. ಕಾಲೇಜು ವೇದಿಕೆಯಾಗಲಿ
ಈಗಾಗಲೇ ಉತ್ತಮ ಫಲಿತಾಂಶ ದಾಖಲಿಸುತ್ತಿರುವ ಬೆಳ್ಮಣ್‌ ಸರಕಾರಿ ಪ.ಪೂ.ಕಾಲೇಜಿನಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗವಿದೆ. ಇದೇ ಕಾಲೇಜಿನಲ್ಲಿ ಕಲೆ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪದವಿ ತರಗತಿ ಆರಂಭಿಸಬಹುದು ಎಂಬ ಸಲಹೆಗಳು ಕೇಳಿಬರುತ್ತಿವೆ. ಆದರೆ ಇಲ್ಲಿ ಕಟ್ಟಡ, ಆಟದ ಮೈದಾನ, ಕುಡಿಯುವ ನೀರು ಇನ್ನಿತರ ಮೂಲಸೌಕರ್ಯ ಕೊರತೆ ಇದೆ. ಜತೆಗೆ ಪ.ಪೂ. ಕಾಲೇಜಿನಲ್ಲಿ ವಾಣಿಜ್ಯ ಉಪನ್ಯಾಸಕರು, ಕಂಪ್ಯೂಟರ್‌ ಸಿಬಂದಿ ಹಾಗೂ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ. ಆದ್ದರಿಂದ ಇಲ್ಲೇ ಕಾಲೇಜು ಆರಂಭದ ಬೇಡಿಕೆಗೆ ಸ್ಪಂದನೆ ಸಿಕ್ಕೀತೇ..? ಎನ್ನುವ ಯಕ್ಷ ಪ್ರಶ್ನೆ ಈ ಭಾಗದ ಶಿಕ್ಷಣ ಚಿಂತಕರದ್ದು.

ಮುಂಡ್ಕೂರು, ಬೆಳ್ಮಣ್‌ ಪ.ಪೂ. ಕಾಲೇಜುಗಳಿಂದ 200 ವಿದ್ಯಾರ್ಥಿಗಳು
ಮುಂಡ್ಕೂರು ವಿದ್ಯಾವರ್ಧಕ ಪ.ಪೂ.ಕಾಲೇಜಿನಿಂದ 100 ಹಾಗೂ ಬೆಳ್ಮಣ್‌ ಪ.ಪೂ. ಕಾಲೇಜಿನಿಂದ 100 ವಿದ್ಯಾರ್ಥಿಗಳು ವರ್ಷವೂ ಹೊರಬರುತ್ತಿದ್ದು ಈ ಸಂಖ್ಯೆ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಸಾಕು ಎನ್ನುವ ಲೆಕ್ಕಾಚಾರವಿದೆ. ಉಳಿದಂತೆ ಕಾಂತಾವರ, ಬೋಳ, ಕಲ್ಯಾ, ಇನ್ನಾ, ನಂದಳಿಕೆ ಭಾಗದಿಂದ ದೂರದ ಪ್ರದೇಶಗಳಿಗೆ ಹೋಗುವ ವಿದ್ಯಾರ್ಥಿಗಳೂ ಬಂದಲ್ಲಿ 300 ವಿದ್ಯಾರ್ಥಿಗಳು ಆಗಬಹುದು ಎಂಬ ನಿರೀಕ್ಷೆ ಇದೆ.

ದಾನಿಗಳ ಕೊರತೆ
ಈಗಾಗಲೇ ಬೆಳ್ಮಣ್‌ನ ಸರಕಾರಿ ಪ.ಪೂ.ಕಾಲೇಜಿಗೆ ಎಸ್‌ಡಿಎಂಸಿಯ ನೆರವು ಬಿಟ್ಟರೆ ದಾನಿಗಳ ನೆರವು ದೊರಕುತ್ತಿಲ್ಲ ಎನ್ನುವುದು ಸಂಸ್ಥೆಯ ವಿದ್ಯಾರ್ಥಿಗಳ ಹೆತ್ತವರ ಅಳಲು. ಹೀಗಿರುವಾಗ ಸರಕಾರ ಅಥವಾ ಇಲಾಖೆಯೇ ಮುಂದೆ ಬಂದು ಇಲ್ಲಿ ಪ್ರಥಮದರ್ಜೆ ಕಾಲೇಜು ಪ್ರಾರಂಭಿಸಲು ಹೊಣೆ ಹೊರಬೇಕಾಗುತ್ತದೆ.

ಬೆಳ್ಮಣ್‌ ಪ್ರಥಮ ಆದ್ಯತೆ
ಬೆಳ್ಮಣ್‌ ಭಾಗದ ಶಿಕ್ಷಣ ಪ್ರೇಮಿಗಳ ಆಶಯವನ್ನು ಸರಕಾರದ ಗಮನಕ್ಕೆ ತರಲಾಗಿದೆ. ಸರಕಾರ ನನ್ನ ವಿಧಾನ ಸಭಾ ಕ್ಷೇತ್ರಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಿದಲ್ಲಿ ಪ್ರಥಮ ಆದ್ಯತೆ ಬೆಳ್ಮಣ್‌ ಹಾಗೂ ಪಿಯು ಕಾಲೇಜು ಮಂಜೂರು ಮಾಡಿದರೆ ಮೊದಲ ಆದ್ಯತೆ ಹೊಸ್ಮಾರು. ಖಂಡಿತಾ ಪ್ರಯತ್ನ ಮುಂದುವರಿಯಲಿದೆ.
-ವಿ. ಸುನಿಲ್‌ ಕುಮಾರ್‌ , ಶಾಸಕರು ಕಾರ್ಕಳ

ಹೆತ್ತವರು ಇಲಾಖೆಯ ಗಮನಕ್ಕೆ ತನ್ನಿ
ಬೆಳ್ಮಣ್‌ನಲ್ಲಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಿದರೆ ಒಳ್ಳೆಯದು. ಇದನ್ನು ವಿದ್ಯಾರ್ಥಿಗಳ ಹೆತ್ತವರೇ ಸರಕಾರ ಮತ್ತು ಇಲಾಖೆಯ ಗಮನಕ್ಕೆ ತರಬೇಕು.
-ಕಿಶೋರಿ, ಪ್ರಭಾರ ಪ್ರಾಂಶುಪಾಲೆ, ಸರಕಾರಿ ಪ.ಪೂ.ಕಾಲೇಜು, ಬೆಳ್ಮಣ್‌

ಶಾಸಕರ ಭರವಸೆ
ಈ ಬಗ್ಗೆ ಕಾರ್ಕಳ ಶಾಸಕರ ಮೂಲಕ ಪ್ರಯತ್ನಿಸಲಾಗುತ್ತಿದೆ. ಶಾಸಕರು ಭರವಸೆ ನೀಡಿದ್ದಾರೆ. ಈ ಭಾಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಗತ್ಯವಾಗಿ ಬೇಕು.
 -ರೇಷ್ಮಾ ಉದಯ ಶೆಟ್ಟಿ,
ಜಿಲ್ಲಾ ಪಂಚಾಯತ್‌ ಸದಸ್ಯೆ

-ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.