ಗೋಳಿಯಂಗಡಿ – ತೊಂಭತ್ತು ರಸ್ತೆ ಬದಿ ತ್ಯಾಜ್ಯ ರಾಶಿ

ಬೆಳ್ವೆ ಗ್ರಾಮ ಪಂಚಾಯತ್‌

Team Udayavani, Mar 13, 2020, 5:24 AM IST

ಗೋಳಿಯಂಗಡಿ – ತೊಂಭತ್ತು ರಸ್ತೆ ಬದಿ ತ್ಯಾಜ್ಯ ರಾಶಿ

ಗೋಳಿಯಂಗಡಿ: ಕೆಲ ವರ್ಷಗಳ ಹಿಂದೆ ಹಚ್ಚ – ಹಸುರುನಿಂದ ಕೂಡಿದ್ದ ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಗೋಳಿಯಂಗಡಿಯಿಂದ ತೊಂಭತ್ತು ಕಡೆಗೆ ಸಂಚರಿಸುವ ರಸ್ತೆಯ ಮಕ್ಕಳ್‌ ಕೋಟಿ ಆಣಿ ಪ್ರದೇಶವೀಗ ಕಸ ಬಿಸಾಡುವ ಜಾಗವಾಗಿ ಪರಿವರ್ತನೆಗೊಂಡಿದೆ.

ಬೆಳ್ವೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಗೋಳಿಯಂಗಡಿ ಪೇಟೆಯಿಂದ 150 ಮೀ. ಸಾಗಿ ಎಡಕ್ಕೆ ತಿರುವು ತೆಗೆದುಕೊಂಡು ಮುಂದೆ 100 ಮೀ. ಹೋಗಿ ಬಲಕ್ಕೆ ತಿರುಗಿದರೆ ರಸ್ತೆಯ ಬದಿಯಲ್ಲಿ ಈ ಜಾಗ ಕಾಣಸಿಗುತ್ತದೆ. ಈ ಜಾಗಕ್ಕೆ ಮಕ್ಕಳ್‌ ಕೋಟಿ ಅಣಿ ಎಂದು ಕರೆಯುತ್ತಾರೆ. ಕಡಿದಾದ ಇಳಿಜಾರಿನಿಂದ ಕೂಡಿದ ತಿರುವು ಇದ್ದು, ಮುಂದೆ ಸಾಗಿದರೆ ತೊಂಭತ್ತು, ಹೆಂಗವಳ್ಳಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಜಾಗವು ಎಲ್ಲಿಯೂ ಕೂಡ ಒಂದು ಪ್ಲಾಸ್ಟಿಕ್‌ ಚೂರು ಸಿಗದ ಸುಂದರ ಜಾಗವಾಗಿತ್ತು. ಆದರೆ ಬರು ಬರುತ್ತ ಪ್ಲಾಸ್ಟಿಕ್‌ ಬಳಕೆ ಹೆಚ್ಚಾದಂತೆ, ಕಸ ವಿಲೇವಾರಿಗೆ ಸೂಕ್ತ ಸ್ಥಳವೆಂದು ತಿಳಿದ ಜನರು ತಮ್ಮ ಮನೆಯ ಕಸ, ಅಂಗಡಿಯ ತ್ಯಾಜ್ಯ, ಕಸ ಮುಂತಾದವುಗಳನ್ನು ಇಲ್ಲಿ ತಂದು ಸುರಿದು ಅಕ್ಷರಶಃ ಡಂಪಿಂಗ್‌ ಯಾರ್ಡ್‌ ರೀತಿ ಮಾಡಿದ್ದಾರೆ. ಕೆಲವರು ಬೆಳಗ್ಗಿನ ವೇಳೆಯಲ್ಲಿ ಬಂದು ಕಸ ಎಸೆದು ಹೋಗುತ್ತಿದ್ದರೆ, ಕೆಲವರು ಸಂಜೆ ವೇಳೆ ವಾಹನದಲ್ಲಿ ಬಂದು ಇಲ್ಲಿ ಕಸ ಎಸೆದು ಹೋಗುತ್ತಿದ್ದಾರೆ. ಕೆಲ ಅಂಗಡಿಯವರು ಕೂಡ ಇಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾರೆ ಎನ್ನುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಇದರ ಬಗ್ಗೆ ಸಂಬಂಧಪಟ್ಟ ಯಾವುದೇ ಆರೋಗ್ಯ ಅಧಿಕಾರಿಗಳು, ಪಂಚಾಯತ್‌ ಸದಸ್ಯರು, ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಕಸ ಎಸೆಯ ಬೇಡಿ ಅನ್ನುವ ಸೂಚನ ಫಲಕ ಸಹ ಅಳವಡಿಸಿಲ್ಲ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

“ಸೂಕ್ತ ಕ್ರಮಕೈಗೊಳ್ಳಲಿ’
ಈ ಪ್ರದೇಶವು ಪ್ರಸ್ತುತ ಪ್ಲಾಸ್ಟಿಕ್‌, ಬಿಯರ್‌ ಬಾಟಲ್‌ ಮುಂತಾದ ಅನುಪಯುಕ್ತ ವಸ್ತುಗಳಿಂದ ಕೂಡಿದ ಸ್ಥಳವಾಗಿದೆ. ಜೋರಾದ ಗಾಳಿ ಬೀಸಿದರೆ ಗಾಳಿಗೆ ಪ್ಲಾಸ್ಟಿಕ್‌ ಹಾರಿ ಹೋಗಿ ತಗ್ಗು ಪ್ರದೇಶಗಳಲ್ಲಿ ಬೀಳುತ್ತದೆ. ಮೇವು ಅರಸಿ ಬರುವ ಜಾನುವಾರುಗಳಿಗೆ ಈ ಜಾಗವು ಕಂಟಕಪ್ರಾಯವಾಗಿದೆ. ಇಲ್ಲಿ ಕಸ ಎಸೆಯದಂತೆ ಸ್ಥಳೀಯಾಡಳಿತ ಸಂಸ್ಥೆಯು ಸೂಕ್ತ ಕ್ರಮವನ್ನು ಕೈಗೊಳ್ಳಲಿ.
– ಸುರೇಶ್‌ ಹೆಂಗವಳ್ಳಿ, ಸ್ಥಳೀಯರು

“ಪರಿಶೀಲನೆ ನಡೆಸಲಾಗುವುದು’
ಈ ಬಗ್ಗೆ ಪಂಚಾಯತ್‌ಗೆ ಯಾವುದೇ ಮಾಹಿತಿಯಿಲ್ಲ. ಈವರೆಗೆ ಗ್ರಾಮಸ್ಥರಿಂದ ಯಾವುದೇ ದೂರುಗಳು ಬಂದಿಲ್ಲ. ಕೂಡಲೇ ಪರಿಶೀಲನೆ ನಡೆಸಲಾಗುವುದು. ಬೆಳ್ವೆ, ಅಲಾºಡಿ, ಮಡಾಮಕ್ಕಿ 3 ಗ್ರಾಮಗಳನ್ನೊಳಗೊಂಡ ತ್ಯಾಜ್ಯ ವಿಲೇವಾರಿ ಘಟಕ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಸದ್ಯ ತಾತ್ಕಲಿಕವಾಗಿ ಆರಂಭಿಸಲಾಗಿದೆ.
– ಪ್ರಭಾಶಂಕರ್‌ ಪುರಾಣಿಕ್‌, ಪಿಡಿಒ, ಬೆಳ್ವೆ ಗ್ರಾ.ಪಂ.

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.