Bengaluru-Karwar ರಾತ್ರಿ ರೈಲು: ಪ್ರಸ್ತಾವನೆಗೆ ಕೋಟ ಸೂಚನೆ
Team Udayavani, Aug 17, 2024, 6:45 AM IST
ಮಣಿಪಾಲ:ಕೊಂಕಣ ರೈಲು ಹಳಿ ದ್ವಿಪಥ ಹಾಗೂ ಬೆಂಗಳೂರಿನಿಂದ ಕಾರವಾರಕ್ಕೆ ರಾತ್ರಿ 10 ಕ್ಕೆ ವಿಶೇಷ ರೈಲು ಸೇವೆ ಒದಗಿಸಲು ಪ್ರಸ್ತಾವವನ್ನು ಶೀಘ್ರವೇ ರೈಲ್ವೇ ಇಲಾಖೆಗೆ ಸಲ್ಲಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೊಂಕಣ ರೈಲ್ವೇ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿ ಸಂಕೀರ್ಣದಲ್ಲಿನ ತಮ್ಮ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳ ಸಭೆ ನಡೆಸಿದ ಅವರು, ಕರಾವಳಿಗರ ಅನುಕೂಲಕ್ಕೆ ರಾತ್ರಿ 10 ಕ್ಕೆ ಬೆಂಗಳೂರಿನಿಂದ ಕಾರವಾರಕ್ಕೆ ಹೊರಡುವ ಒಂದು ರೈಲು ಅಗತ್ಯವಿದೆ. ಇದಕ್ಕಾಗಿ ಶೀಘ್ರವೇ ಪ್ರಸ್ತಾವ ಸಲ್ಲಿಸಿದ ಕೂಡಲೇ ರೈಲ್ವೇ ಸಚಿವರೊಂದಿಗೆ ಚರ್ಚಿ ಸಲಾಗುವುದು. ಜತೆಗೆ 111 ಕಿ.ಮೀ. ರೈಲು ಹಳಿ ದ್ವಿಪಥಕ್ಕೂ ಇನ್ನೊಮ್ಮೆ ಪ್ರಸ್ತಾವ ಸಲ್ಲಿಸಲು ನಿರ್ದೇಶಿಸಿದರು.
ವಂದೇ ಭಾರತ್ ರೈಲು ಕುಂದಾಪುರ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಬೇಕು. ಈ ರೈಲು ಸೇವೆಯನ್ನು ಮಂಗಳೂರಿನಿಂದ ಬೆಂಗಳೂರಿನವರೆಗೆ ಹಾಗೂ ಕಾರವಾರದಿಂದ ಮುಂಬಯಿವರೆಗೂ ವಿಸ್ತರಿಸಲು ಕೇಂದ್ರ ರೈಲ್ವೇ ಮಂಡಳಿಗೆ ಪ್ರಸ್ತಾವ ಸಲ್ಲಿಸಬೇಕು ಎಂದರು.
ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಇಂದ್ರಾಳಿ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಪ್ರದಾಯಿಕ ಹಿನ್ನೆಲೆಗೆ ಸೂಕ್ತವಾಗಿ ಅಭಿವೃದ್ಧಿಪಡಿಸಲು ರೈಲ್ವೇ ಸಚಿವರೊಂ ದಿಗೆ ಚರ್ಚಿಸಲಾಗುವುದು. ಕುಂದಾಪುರ ರೈಲು ನಿಲ್ದಾಣ ಅಭಿವೃದ್ಧಿ ಪ್ರಸ್ತಾವ ಸಲ್ಲಿಸಬೇಕು. ರೈಲಿಗೆ ನೀರು ತುಂಬಿಸಲು ಬೇಕಾದ ವ್ಯವಸ್ಥೆ ನಿಲ್ದಾಣಗಳಲ್ಲಿ ಕಲ್ಪಿಸಬೇಕು. ರೈಲು ಪಾರ್ಕ್, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಂತೆ ಸೂಚಿಸಿದರು.
ಉಡುಪಿಯಿಂದ ಈ ಹಿಂದೆ ಹಬ್ಬದ ಸಂದರ್ಭದಲ್ಲಿ ಸಂಚರಿಸುತ್ತಿದ್ದ ವಾಸ್ಕೋ- ವೇಲಂ ಕಣಿ ರೈಲನ್ನು ಮತ್ತೆ ಆರಂಭಿಸಬೇಕು. ಇಲ್ಲಿನ ಯಾತ್ರಾರ್ಥಿಗಳಿಗೆ ಉಡುಪಿ- ವಾರಾಣಸಿ-ಅಯೋಧ್ಯೆ-ತಿರುಪತಿ ರೈಲು ಸೇವೆ ಒದಗಿಸಬೇಕು ಎಂದರು. ಶಾಸಕ ಯಶ್ಪಾಲ್ ಸುವರ್ಣ ಅವರು ಉಡುಪಿ ರೈಲು ನಿಲ್ದಾಣದ ಅಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೊಂಕಣ ರೈಲು ನಿಗಮದ ಮುಖ್ಯಸ್ಥ ಹಾಗೂ ಎಂಡಿ ಸಂತೋಷ್ ಕುಮಾರ್ ಝಾ ಮಾತನಾಡಿ, ರೈಲು ಹಳಿ ದ್ವಿಪಥ, ಹೊಸ ರೈಲು, ರೈಲು ವಿಸ್ತರಣೆ, ಸಮಯ ಬದಲಾ ವಣೆ ಹಾಗೂ ನಿಲುಗಡೆ ಬಗ್ಗೆ ಪ್ರಸ್ತಾವಗಳನ್ನು ಸಲ್ಲಿಸಲಿದ್ದು, ರೈಲ್ವೇ ಮಂಡಳಿ ನಿರ್ಧರಿಸಬೇಕು ಎಂದರು. ನಿಗಮದ ಹಿರಿಯ ಅಧಿಕಾರಿಗಳಾದ ನಾಗದತ್ ರಾವ್, ಬಿ.ಬಿ.ನಿಕಂ, ದಿಲೀಪ್ ಡಿ.ಭಟ್, ಎಸ್.ಕೆ. ಬಾಲ, ಆರ್.ಡಿ.ಗೋಲಬ್, ಸುಧಾಕೃಷ್ಣಮೂರ್ತಿ, ಜಿ.ಡಿ. ಮೀನಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.