“ಬೆರ್ಮಣ್ಣೆ ವ್ಯಕ್ತಿ ಅಲ್ಲ ಅವರು ಸಮಾಜದ ಒಂದು ಶಕ್ತಿ’
Team Udayavani, Jul 8, 2018, 4:06 PM IST
ಉಡುಪಿ: ಬೆರ್ಮಣ್ಣೆ ವ್ಯಕ್ತಿಯಲ್ಲ ಅವರೊಬ್ಬ ಸಮಾಜದ ಶಕ್ತಿಯಾಗಿದ್ದಾರೆ. ಸೇವಾ ಮನೋಧರ್ಮ ಮತ್ತು ತ್ಯಾಗದಿಂದ ಆದರ್ಶಮಯ ಜೀವನವನ್ನು ನಡೆಸಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದ ಅವರ ಜೀವನ ಶೈಲಿ ನಮಗೆಲ್ಲರಿಗೆ ಮಾದರಿಯಾಗಿದೆ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಮಾಜಿ ಅಧ್ಯಕ್ಷ ದಯಾನಂದ ಬಂಗೇರ ಹೇಳಿದರು.
ಶನಿವಾರ ಕಟಪಾಡಿ ನಿತ್ಯಾನಂದ ಸಭಾಗೃಹದಲ್ಲಿ ನಡೆದ ಮುಂಬಯಿ ಪ್ರಸಿದ್ಧ ಉದ್ಯಮಿ ಬೆರ್ಮು ಕೃಷ್ಣ ಪೂಜಾರಿ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿ ನುಡಿ ನಮನ ಸಲ್ಲಿಸಿದರು.
ಉದ್ಯಾವರ ನಾರಾಯಣಗುರು ಮಂದಿರದ ಅರ್ಚಕ ಲೋಕನಾಥ್ ಶಾಂತಿ, ಊರಿನ ಪ್ರಮುಖರಾದ ದೇವಪ್ಪ ಪೂಜಾರಿ, ರಾಮಚಂದ್ರ ಕಿದಿಯೂರು ಅವರು ಮಾತನಾಡಿ ಬೆರ್ಮು ಪೂಜಾರಿ ಅವರ ತ್ಯಾಗ ಸೇವೆ, ಮತ್ತು ಕರ್ತವ್ಯ ಬದ್ಧªತೆ, ಎಲ್ಲರನ್ನು ಕುಟುಂಬದ ಸದಸ್ಯರಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ರೀತಿ ಅಪಾರವಾದುದು. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಬೆರ್ಮು ಪೂಜಾರಿ ಅವರ ಪತ್ನಿ ಮೀರಾ ಪೂಜಾರಿ, ಮಕ್ಕಳಾದ ಗಣೇಶ್, ರಮೇಶ್, ಸುರೇಶ್, ಸವಿತಾ ತಾರಾನಾಥ್ ಮೊದಲಾದವರು ಉಪಸ್ಥಿತರಿದ್ದರು. ರಮೇಶ್ ಕೋಟ್ಯಾನ್ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.