Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ


Team Udayavani, Jan 11, 2024, 1:51 PM IST

Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ

ಪಡುಬಿದ್ರಿ: ಮಾಣಿಯೂರು ಅನಂತ ಪದ್ಮನಾಭನ ಸನ್ನಿಧಾನ ಅಭಿವೃದ್ಧಿಯಾಗಿರುವುದು ಸಂತಸ ತಂದಿದೆ. ಅತನ ಪೂಜೆಯೇ ತನಗೆ ಮುಂದೆ ಕೃಷ್ಣಪೂಜಾ ದೀಕ್ಷೆಯು ದೊರೆಯಲು ಕಾರಣವಾಗಿತ್ತು. ಜನ್ಮಭೂಮಿಯ ದರ್ಶನದ ಸಂತೋಷ ಎಲ್ಲಿ ಹೋದರೂ ಆಗದು. ಅನಂತ ಪದ್ಮನಾಭನ ಜಾಗೃತ ಸನ್ನಿಧಾನ ಇಲ್ಲಿದೆ. ನಮ್ಮ ಪರ್ಯಾಯವು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಹಾಗೂ ನಮ್ಮ ಜನ್ಮಭೂಮಿ ಮಾಣಿಯೂರಿನ ಅಭಿವೃದ್ಧಿಯ ನೆನಪಲ್ಲಿ ಸದಾ ಹಸಿರಾಗಿರುತ್ತದೆ. ಈ ಬಾರಿಯೂ ಮಾಣಿಯೂರಿನವರದ್ದೇ ಪರ್ಯಾಯ. ತಾವೆಲ್ಲರೂ ಉಡುಪಿಯಲ್ಲಿದ್ದು ಅದನ್ನು ನಡೆಸಿಕೊಡಬೇಕೆಂದು ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಜ. 11ರಂದು ಎಲ್ಲೂರು ಸಮೀಪದ ಮಾಣಿಯೂರು ಮಠದಲ್ಲಿ ತಾವು ಕಲಿತು ಈಗ ಮುನ್ನಡೆಸುತ್ತಿರುವ ಕೆಮುಂಡೇಲು ಅನುದಾನಿತ ಹಿ. ಪ್ರಾ. ಶಾಲೆ, ಶ್ರೀ ಪಾಂಡುರಂಗ ಭಜನ ಮಂಡಳಿ ಕೆಮುಂಡೇಲು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುದರಂಗಡಿ ಮತ್ತು ಜನ್ಮಭೂಮಿ ಗೌರವಾಭಿನಂದನ ಸಮಿತಿಗಳ ಆಶ್ರಯದಲ್ಲಿನ `ಗೌರವಾಭಿನಂದನೆ’ಯನ್ನು ಸ್ವೀಕರಿಸಿ ನೆರೆದಿದ್ದವರನ್ನು ಹರಸಿ ಮಾತನಾಡಿದರು.

ಕೆಮುಂಡೇಲು ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಜಗನ್ನಾಥ ಶೆಟ್ಟಿ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ, ಮುದರಂಗಡಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ದೇವಾಡಿಗ, ಪಾಂಡುರಂಗ ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್, ಎಲ್ಲೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಜಯಂತಕುಮಾರ್ ಉಪಸ್ಥಿತರಿದ್ದರು.

ಮಾಣಿಯೂರು ಮಠಕ್ಕಾಗಮಿಸುವ ರಸ್ತೆ ಕಾಂಕ್ರೀಟೀಕರಣಕ್ಕೆ ಹಾಗೂ ಅಭಿವೃದ್ಧಿಗೆ ಸಹಕರಿಸಿದ ಮಾಜಿ ಗ್ರಾ. ಪಂ. ಸದಸ್ಯೆ ತೆರೇಸಾ, ಜಯಂತ್ ಕುಮಾರ್ ಹಾಗೂ ಗಂಜೀಫಾ ಚಿತ್ರಕಲೆಗಳಿಂದ ಮಾಣಿಯೂರು ಮಠದ ಅಂದವನ್ನು ಹೆಚ್ಚಿಸಿರುವ ಉಪಾಧ್ಯಾಯ ಮೂಡುಬೆಳ್ಳೆ ಅವರನ್ನು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಂತ್ರಾಕ್ಷತೆಗಳನ್ನಿತ್ತು ಗೌರವಿಸಿ ಅಭಿನಂದಿಸಿದರು.

ಶ್ರೀಗಳ ಚತುರ್ಥ ಪರ್ಯಾಯ ಕಾಲದಲ್ಲಿ ಗೈಯ್ಯಲಾಗಿರುವ ಮಾಣಿಯೂರು ಮಠದ ಶ್ರೀ ಅನಂತಪದ್ಮನಾಭ ಸನ್ನಿಧಾನದ ಅಭಿವೃದ್ಧಿಕಾರ್ಯಗಳನ್ನು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಲೋಕಾರ್ಪಣೆಗೈದರು. ಕೆಮುಂಡೇಲು ಶ್ರೀ ಪಾಂಡುರಂಗ ಭಜನ ಮಂದಿರದ ಪಾಂಡುರಂಗ ದೇವರಿಗೆ ಶ್ರೀಪಾದರು ಪೂಜೆ ಸಲ್ಲಿಸಿ ತಾವು ಕಲಿತ ಕೆಮುಂಡೇಲು ಅ. ಹಿ. ಪ್ರಾ. ಶಾಲೆಗೆ ತೆರಳಿ ಅಲ್ಲಿ ನೂತನ ಶಾಲಾ ಕೊಠಡಿಗಳ ಕಟ್ಟಡವನ್ನು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ಮಾಣಿಯೂರು ಮಠಕ್ಕೆ ಬರುವ ಸೂಚನಾ ಫಲಕವನ್ನೂ ಶ್ರೀಪಾದರು ಅನಾವರಣಗೊಳಿಸಿದರು.

ಕೆಮುಂಡೇಲು ಅ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯ ಚಂದ್ರಹಾಸ ಪ್ರಭು ಸ್ವಾಗತಿಸಿ ಶ್ರೀ ಶ್ರೀಗಳ ಸಮ್ಮಾನಪತ್ರವನ್ನು ವಾಚಿಸಿದರು. ಜಾನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ ಪ್ರಾಸ್ತಾವಿಸಿದರು. ಹರೀಶ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.