ಬಿಜೆಪಿ ಭರವಸೆ ಕಾರ್ಯಗತಗೊಂಡಿಲ್ಲ: ಆಸ್ಕರ್‌ 


Team Udayavani, Feb 19, 2017, 8:45 AM IST

18-LOC-5.jpg

ಉಡುಪಿ: ಚುನಾವಣಾ ಪೂರ್ವದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆ ಕಾರ್ಯಗತವಾಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಟೀಕಿಸಿದ್ದಾರೆ. ಕಪ್ಪು ಹಣ ತರುವ ಭರವಸೆ ಯೊಂದಿಗೆ ನೋಟು ಅಪಮೌಲ್ಯ ಗೊಳಿಸಲಾಗಿದೆ ಎಂದು ಕೇಂದ್ರ ಹೇಳಿಕೆ ನೀಡುತ್ತಿದೆ. ಚಲಾವಣೆಯಲ್ಲಿ ಇದ್ದ 15ರಿಂದ 18 ಲ.ಕೋ. ರೂ.ಬ್ಯಾಂಕ್‌ಗಳಿಗೆ ಮರು ಪಾವತಿಯಾಗಿದೆ. ಹೀಗಿರುವಾಗ ಕಪ್ಪು ಹಣ ತರುವ ಉದ್ದೇಶ ಈಡೇರಿದೆಯೋ ಎಂಬ ಬಗ್ಗೆ ಸರಕಾರದಿಂದ ಇಷ್ಟರವರೆಗೆ ಯಾವುದೇ ಹೇಳಿಕೆ ಪ್ರಕಟಗೊಂಡಿಲ್ಲ. ಆರ್‌ಬಿಐ ಗವರ್ನರ್‌ ಜತೆಗೆ ಚರ್ಚಿಸದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕೇಂದ್ರ ಸರಕಾರದ ನಡೆಯಿಂದ ದೇಶದ ಆರ್ಥಿಕತೆ ಹಾಗೂ ಉತ್ಪಾದನೆ ಹಿಂಜರಿತ ಕಂಡಿದೆ. ಈ ಸಮಸ್ಯೆಗಳಿಗೆ ಕೇಂದ್ರ ಸರಕಾರ ಯಾವುದೇ ಪರಿಹಾರ ಕಂಡು ಕೊಂಡಿಲ್ಲ ಎಂದು ಅವರು ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಹೇಳಿದರು.

ಕಾಂಗ್ರೆಸ್‌ಗೆ ಪೂರಕ
ಭ್ರಷ್ಟಾಚಾರವನ್ನು ವಿರೋಧಿಸುತ್ತೇವೆ ಎನ್ನುವ ಮೋದಿಯವರು ಸಹರಾ, ಬಿರ್ಲಾ ಕಂಪೆನಿಗಳಿಂದ ಹಣ ಪಡೆದಿರುವುದು ಕಂಪೆನಿಗಳ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡು ಬರುತ್ತದೆ. ಆದರೆ ಕೇಂದ್ರ ಸರಕಾರದಿಂದ ಇಷ್ಟರವರೆಗೆ ಇದಕ್ಕೆ ಸ್ಪಷ್ಟನೆ ಬಂದಿಲ್ಲ. 1972ರಲ್ಲಿ ಇಂದಿರಾ ಗಾಂಧಿಯವರು ಸೋತ ಅನಂತರ 1980ರ ಲೋಕಸಭಾ ಚುನಾವಣೆಯಲ್ಲಿ ಇಂದಿರಾ ಅವರನ್ನು ಮರು ಆಯ್ಕೆ ಮಾಡುವ ವಾತಾವರಣ ಸೃಷ್ಟಿಯಾ ದಂತೆ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪೂರಕ ವಾತಾ
ವರಣ ಉಂಟಾಗಲಿದೆ ಎಂದರು.

ಕಾಂಗ್ರೆಸ್‌ ಮುತುವರ್ಜಿ
ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, 9/11, ಸಿಆರ್‌ಝಡ್‌, ಮರಳು ಸಮಸ್ಯೆಗಳು ಬಿಜೆಪಿ ಆಡಳಿತ ಅವಧಿಯ ಕೊಡುಗೆಗಳು. ಆದರೆ ಸಮಸ್ಯೆ ಪರಿಹಾರಕ್ಕಾಗಿ ಕಾಂಗ್ರೆಸ್‌ ಪಕ್ಷ ಮುತುವರ್ಜಿ ವಹಿಸಿದೆ. ಕಾನೂನು ತೊಡಕನ್ನು ಪರಿಹರಿಸಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಸರಕಾರ ಬದ್ಧವಾಗಿದೆ ಎಂದರು. ಈಗಾಗಲೇ ಹೊಸ ತಾಲೂಕು ರಚನೆಗಾಗಿ ಬ್ರಹ್ಮಾವರ, ಬೈಂದೂರು, ಕಾಪು, ಹೆಬ್ರಿಗಳಲ್ಲಿ ಬೇಡಿಕೆಗಳು ಬಂದಿವೆ. ಸಮಿತಿಯ ವರದಿಯ ಆಧಾರದ ನೆಲೆಯಲ್ಲಿ ಹಂತ ಹಂತ ವಾಗಿ ಹೊಸ ತಾಲೂಕುಗಳ  ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಸಮಾವೇಶ
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಗೋಪಾಲ ಪೂಜಾರಿ ಅವರು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಮತ್ತೂಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಸಲುವಾಗಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಬ್ಲೋಸಂ ಫೆರ್ನಾಂಡಿಸ್‌, ಮುಖಂಡರಾದ ಪ್ರತಾಪಚಂದ್ರ ಶೆಟ್ಟಿ, ಗೋಪಾಲ ಭಂಡಾರಿ, ಎಂ.ಎ. ಗಫ‌ೂರ್‌, ಅಶೋಕ್‌ ಕುಮಾರ್‌ ಕೊಡವೂರು, ಕೃಷ್ಣರಾಜ ಸರಳಾಯ, ಮುರಳಿ ಶೆಟ್ಟಿ, ಅಬ್ದುಲ್‌ ಅಜೀಜ್‌, ಎಸ್‌. ನಾರಾಯಣ, ಯತೀಶ್‌ ಕರ್ಕೆರಾ, ಸರಳಾ ಕಾಂಚನ್‌, ಎಂ.ಪಿ ಮೊದಿನಬ್ಬ, ಶ್ಯಾಮಲಾ ಭಂಡಾರಿ, ಜಯಶ್ರೀ ಕೃಷ್ಣರಾಜ್‌, ವೆರೋನಿಕಾ ಕರ್ನೇಲಿಯೊ, ಚಂದ್ರಿಕಾ ಕೇಳ್ಕರ್‌, ಎಲ್ಲೂರು ಶಶಿಧರ ಶೆಟ್ಟಿ, ಜನಾರ್ದನ ತೋನ್ಸೆ, ಸುಧೀರ್‌ ಹೆಗ್ಡೆ, ಸುಧಾಕರ್‌ ಕೋಟ್ಯಾನ್‌, ನಿತ್ಯಾನಂದ ಶೆಟ್ಟಿ, ಸತೀಶ್‌ ಅಮೀನ್‌ ಪಡುಕೆರೆ, ಮಲ್ಯಾಡಿ ಶಿವರಾಮ್‌ ಶೆಟ್ಟಿ, ವಿಕಾಸ್‌ ಹೆಗ್ಡೆ, ಪ್ರಶಾಂತ್‌ ಪೂಜಾರಿ, ವಿಶ್ವಾಸ್‌ ಅಮೀನ್‌, ಸುಬ್ರಹ್ಮಣ್ಯ, ದಿನೇಶ್‌ ಪುತ್ರನ್‌, ಮಂಜಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.