ಶರತ್ ಹತ್ಯೆ: ಎನ್ಐಎ ತನಿಖೆಗೆ ಬಿಜೆಪಿ ಆಗ್ರಹ
Team Udayavani, Jul 9, 2017, 1:20 AM IST
ಉಡುಪಿ: ಆರೆಸ್ಸೆಸ್ ಕಾರ್ಯಕರ್ತ ಶರತ್ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ರಾಜ್ಯ ಸರಕಾರವನ್ನು ಮತ್ತು ರಾಜ್ಯಪಾಲರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಒತ್ತಾಯಿಸಿದ್ದಾರೆ.
ಶರತ್ ಶವಯಾತ್ರೆ ಸಂದರ್ಭ ಕೈಕಂಬದಲ್ಲಿ ಶಾಂತಿಯುತ ಮೆರವಣಿಗೆ ಮೇಲೆ ಕಲ್ಲೆಸೆದು ಶವಯಾತ್ರೆಯಲ್ಲೂ ಕೋಮು ಗಲಭೆ ಸೃಷ್ಟಿಸಿ ಉದ್ದಿಗ್ನ ಸ್ಥಿತಿಯನ್ನು ನಿರ್ಮಾಣ ಮಾಡಿದ ದುಷ್ಕರ್ಮಿಗಳು ಕ್ಷಮಾರ್ಹರಲ್ಲ. ಇದರ ಹಿಂದೆ ಕಾಂಗ್ರೆಸ್ ನಾಯಕರು, ಉಸ್ತುವಾರಿ ಸಚಿವರು, ಶಾಸಕರು ಇದ್ದು ಎಲ್ಲಿಯ ತನಕ ಅವರು ದುಷ್ಕರ್ಮಿಗಳಿಗೆ ಬೆಂಬಲ ಕೊಡುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಷ್ಟ. ಸಚಿವ ರಮಾನಾಥ ರೈ ರಾಜೀನಾಮೆ ಕೊಡಬೇಕು. ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ಯಾವುದೇ ನೈತಿಕತೆ ಉಳಿದಿಲ್ಲ ಎಂದು ಹೆಗ್ಡೆ ಮತ್ತು ಬಿಜೆಪಿ ನಾಯಕ ಉದಯಕುಮಾರ ಶೆಟ್ಟಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.