Udupi ಪ್ರಾಂಶುಪಾಲರ ಪ್ರಶಸ್ತಿಗೆ ತಡೆ: ಸಿಎಂ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ


Team Udayavani, Sep 6, 2024, 11:34 PM IST

Udupi ಪ್ರಾಂಶುಪಾಲರ ಪ್ರಶಸ್ತಿಗೆ ತಡೆ: ಸಿಎಂ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ

ಮಣಿಪಾಲ: ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಕುಂದಾಪುರ ಪ.ಪೂ. ಕಾಲೇಜಿನ ಪ್ರಾಂಶುಪಾಲರನ್ನು ಆಯ್ಕೆ ಮಾಡಿ, ಪ್ರಶಸ್ತಿ ಪ್ರದಾನಕ್ಕೆ ಕೆಲವು ಗಂಟೆಗಳ ಮೊದಲು ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಜಿಲ್ಲಾ ಹಾಗೂ ವಿವಿಧ ಮೋರ್ಚಾಗಳ ವತಿಯಿಂದ ಮಣಿಪಾಲದ ಸಿಂಡಿಕೇಟ್‌ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ, ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲಕಾಲ ಈ ಪರಿಸರದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಅನಂತರ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ಶಾಸಕ ಯಶ್‌ಪಾಲ್‌ ಸುವರ್ಣ ಮಾತನಾಡಿ, ವಿದ್ಯೆ ಕಲಿಸಿದ ಗುರುಗಳಿಗೆ ಅಪಮಾನ ಮಾಡುವ ಸರಕಾರದಿಂದ ರಾಜ್ಯದ ಜನತೆ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಸರಕಾರದಿಂದ ಆಗುವ ಅನ್ಯಾಯಗಳ ವಿರುದ್ಧ ಬಿಜೆಪಿ ಸಮರ್ಥ ಹೋರಾಟ ನೀಡಲಿದೆ. ಶಿಕ್ಷಕರಿಗೆ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಿಕ್ಷಕರಿಗೆ ಅವಮಾನ ಮಾಡಿ ಕಾಂಗ್ರೆಸ್‌ ದಾಖಲೆ ಸೃಷ್ಟಿಸಿದೆ. ಶಾಲಾ ಸಮವಸ್ತ್ರ ಹೊರತುಪಡಿಸಿ ಯಾವುದೇ ಧರ್ಮಕ್ಕೆ ಸಂಬಂಧಿಸಿ ವಸ್ತ್ರ, ಹಿಜಾಬ್‌ ಧರಿಸಬಾರದು ಎಂದು ಹೈಕೋರ್ಟ್‌ ಆದೇಶವನ್ನು ಅಂದಿನ ಸರಕಾರ ಪಾಲಿಸಿದೆ.

ಸರಕಾರದ ಆದೇಶವನ್ನು ಪ್ರಾಂಶುಪಾಲರು ಪಾಲಿಸಿದ್ದಾರೆ. ಈ ಘಟನೆಯನ್ನು ಇಟ್ಟುಕೊಂಡು ದ್ವೇಷ ಸಾಧಿಸುತ್ತಿರುವುದು ಅಕ್ಷಮ್ಯ ಎಂದರು.

ಶಾಸಕರಾದ ಕಿರಣ್‌ ಕೊಡ್ಗಿ, ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಸರಕಾರವೇ ಉತ್ತಮ ಶಿಕ್ಷಕ ಎಂಬ ಪ್ರಶಸ್ತಿ ಆಯ್ಕೆ ಮಾಡಿ, ಏಕಾಏಕಿ ಆದೇಶವನ್ನು ತಡೆ ಹಿಡಿದಿರುವುದು ಯಾಕೆ ಎಂದು ಉತ್ತರಿಸಬೇಕು. ಜಿಲ್ಲೆಯ ಐದು ಶಾಸಕರು ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು, ಖುದ್ದು ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಲಿದ್ದೇವೆ ಎಂದರು.

ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ, ಪ್ರಮುಖರಾದ ಕಿರಣ್‌ ಕುಮಾರ್‌ ಬೈಲೂರು, ಪ್ರಭಾಕರ್‌ ಪೂಜಾರಿ, ರಜನಿ ಹೆಬ್ಟಾರ್‌, ಸಂಧ್ಯಾ ರಮೇಶ್‌, ವೀಣಾ ಶೆಟ್ಟಿ, ವಿಜಯ್‌ ಕೊಡವೂರು, ವಿಖ್ಯಾತ್‌ ಶೆಟ್ಟಿ, ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ, ಜಿತೇಂದ್ರ ಶೆಟ್ಟಿ, ಸುರೇಶ್‌ ಶೆಟ್ಟಿ ಗೋಪಾಡಿ, ರಾಜೇಶ್‌ ಕಾವೇರಿ, ಅಭಿರಾಜ್‌ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಪ್ರಾಂಶುಪಾಲರಿಗೆ ಅವಮಾನ ಖಂಡನೀಯ
ಮಂಗಳೂರು: ಸಿದ್ದರಾಮಯ್ಯ ಅವರ ಸರಕಾರ ಒಬ್ಬ ಪ್ರಾಮಾಣಿಕ ಪ್ರಾಂಶುಪಾಲರಿಗೆ ಶಿಕ್ಷಕರ ದಿನಾಚರಣೆ ಯ ದಿನವೇ ಅವಮಾನ ಮಾಡುವ ಕೆಲಸ ಮಾಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ನಿಲುವನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸುತ್ತದೆ.

ಗುರುಗಳಿಗೆ ಮಾಡಿದ ಅವಮಾನಕ್ಕೆ ಮುಂದಿನ ದಿನಗಳಲ್ಲಿ ಅನುಭವಿಸಬೇಕಾಗುತ್ತದೆ. ಆದಷ್ಟು ಬೇಗ ತಮ್ಮ ತಪ್ಪನ್ನು ತಿದ್ದಿಕೊಂಡು ಕುಂದಾಪುರ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಜಿ.ಬಿ.ಅವರಿಗೆ ಸಲ್ಲಬೇಕಾದ ಪ್ರಶಸ್ತಿ ಮತ್ತು ಗೌರವ ನೀಡಬೇಕು ಎಂದು ಬಿಜೆಪಿ ಯುವ ಮೋರ್ಚಾ ದ.ಕ. ಜಿಲ್ಲಾಧ್ಯಕ್ಷ ಉಳ್ಳಾಲ್‌ ನಂದನ್‌ ಮಲ್ಯ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Shiv sena:ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ

Amroha: Husband beats wife for not giving dowry!

Amroha: ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊ*ದ ಪತಿ!

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Udupi: ಬೆಡ್‌ ಶೀಟ್‌ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Karkala ರಸ್ತೆ ಹೊಂಡಮಯ; ಮಳೆಗಾಲಕ್ಕೆ ಮೊದಲು ನಡೆದಿದ್ದ‌ ದುರಸ್ತಿ, ಈಗ ಸಂಪೂರ್ಣ ಧ್ವಂಸ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Cooking Beef: ಸರ್ಕಾರಿ ಕಾಲೇಜು ಹಾಸ್ಟೆಲ್ ನಲ್ಲೇ ಗೋಮಾಂಸ ಬೇಯಿಸಿದ ವಿದ್ಯಾರ್ಥಿಗಳು…

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Kolkata: ಟ್ರೈನಿ ವೈದ್ಯೆ ಅತ್ಯಾಚಾರ – ಹತ್ಯೆ ಪ್ರಕರಣ: ಮಹತ್ವದ ಮಾಹಿತಿ ನೀಡಿದ ಸಿಬಿಐ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.