Brahmavar ಸಕ್ಕರೆ ಕಾರ್ಖಾನೆ ಮಹಾಸಭೆ: ಕೃಷಿ ಉದ್ದಿಮೆ ಸ್ಥಾಪನೆಗೆ ರೈತರ ಆಗ್ರಹ
Team Udayavani, Sep 26, 2024, 12:03 AM IST
ಬ್ರಹ್ಮಾವರ: ಇಲ್ಲಿನ ಸಕ್ಕರೆ ಕಾರ್ಖಾನೆಯ 110 ಎಕ್ರೆಯಲ್ಲಿ ಕರಾವಳಿಯ 3 ಜಿಲ್ಲೆಗಳ ರೈತರಿಗೆ ಅನು ಕೂಲವಾಗಲು ಸಕ್ಕರೆ ಜತೆಗೆ ಕೃಷಿ ಉತ್ಪನ್ನ ಮೌಲ್ಯವರ್ಧನೆ ಉದ್ದಿಮೆಗಳನ್ನು ಸ್ಥಾಪಿಸಬೇಕು ಎಂಬ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು.
ಬುಧವಾರ ಖಾಸಗಿ ಹೊಟೇಲ್ನಲ್ಲಿ ಜರಗಿದ ಕಾರ್ಖಾ ನೆಯ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರಿಂದ ಮೇಲಿನ ಆಗ್ರಹ ಕೇಳಿಬಂದಿತು.
ಸಕ್ಕರೆ ಜತೆಗೆ ಎಥೆನಾಲ್, ಮೊಲಾಸಸ್, ಬೆಲ್ಲ ಸಹಿತ ವಿಭಿನ್ನ ಉತ್ಪನ್ನಗಳ ತಯಾರಿಕೆಗೆ ವಿಪುಲ ಅವಕಾಶವಿದ್ದು, ಮೌಲ್ಯವರ್ಧನೆ ಘಟಕಗಳಿಂದ ರೈತರ ಆದಾಯವೂ ಹೆಚ್ಚಿ ಉದ್ಯೋಗವೂ ಸೃಷ್ಟಿಯಾಗುತ್ತದೆ. ಕೃಷಿ ಹೊರತುಪಡಿಸಿದ ಉದ್ದೇಶಕ್ಕೆ ಅವಕಾಶ ನೀಡದೆ, ಕಾರ್ಖಾನೆ ಸ್ಥಳ ರೈತರ ಆಸ್ತಿಯಾ ಗಿಯೇ ಉಳಿಯಬೇಕು ಎಂದು ಮನವಿ ಮಾಡಿದರು.
ವಿಶೇಷಾಧಿಕಾರಿ, ಡಿಸಿ ಡಾ| ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿ, ಕಾರ್ಖಾನೆ ಸ್ಥಳ ಸದ್ಬಳಕೆ ಕುರಿತು ವಿಸ್ತೃತ ಮಾಹಿತಿ ಪಡೆಯಲಾಗುವುದು. ಅವ್ಯವಹಾರ ಕುರಿತು ಪೊಲೀಸ್ ತನಿಖೆ ನಡೆದು ವರದಿ ಸಲ್ಲಿಕೆಯಾಗಿದೆ, ತಾಂತ್ರಿಕ ಸಮಿತಿ ವರದಿ ನೀಡಿದೆ. ತಪ್ಪುಗಳ ಬಗ್ಗೆ ಪುನರ್ ಪರಿಶೀಲಿಸಿ ಸ್ಪಷ್ಟೀಕರಣ ಪಡೆಯಲಾಗುವುದು. ಮರು ಆಡಿಟ್ ಸಹಿತ ರೈತರ ಬೇಡಿಕೆ ಹಾಗೂ ಸಭೆಯ ಚರ್ಚೆಯನ್ನು ದಾಖಲಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಡಿಸಿ ಹೇಳಿದರು.
ಪ್ರಮುಖರಾದ ಪ್ರಕಾಶ್ಚಂದ್ರ ಶೆಟ್ಟಿ, ಸತೀಶ್ ಕಿಣಿ, ಕಿಶನ್ ಹೆಗ್ಡೆ, ಯಡ್ತಾಡಿ ಸತೀಶ್ ಕುಮಾರ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಜಯಶೀಲ ಶೆಟ್ಟಿ, ಜಯಕರ ಶೆಟ್ಟಿ, ಉದಯ ಕುಮಾರ್, ವಿಕಾಸ್ ಹೆಗ್ಡೆ, ಶಶಿಧರ ಶೆಟ್ಟಿ ಮೊದಲಾದವರು ಮಾತನಾಡಿದರು.
ಸಹಕಾರ ಸಂಘಗಳ ವ್ಯವಸ್ಥಾಪಕ ನಿರ್ದೇಶಕಿ ಲಾವಣ್ಯಾ ಸ್ವಾಗತಿಸಿ, ಕಾರ್ಖಾನೆಯ ಗೋಪಾಲಕೃಷ್ಣ ವರದಿ ವಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Hebri: ಕುಚ್ಚಾರು, ಮಾತ್ಕಲ್: ಆನೆ ಹಾವಳಿ; ಕೃಷಿಗೆ ಹಾನಿ
Udupi: ವಾರದ 4 ದಿನ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರ: ಅಜೀಂ ಪ್ರೇಮ್ಜಿ ಫೌಂಡೇಷನ್
Theft Case: 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.