ಸರಕಾರಿ ಶಾಲೆಗೆ ಶಾಸಕರ ಅನುದಾನದಲ್ಲಿ ಬಸ್‌: ನಿರ್ವಹಣೆಯೇ ದೊಡ್ಡ ಸವಾಲು


Team Udayavani, Jul 10, 2022, 7:20 AM IST

ಸರಕಾರಿ ಶಾಲೆಗೆ ಶಾಸಕರ ಅನುದಾನದಲ್ಲಿ ಬಸ್‌: ನಿರ್ವಹಣೆಯೇ ದೊಡ್ಡ ಸವಾಲು

ಉಡುಪಿ: ಶಾಸಕರ ಪ್ರದೇಶಾ ಭಿವೃದ್ಧಿ ನಿಧಿಯಲ್ಲಿ ಸರಕಾರಿ ಶಾಲೆಗಳಿಗೆ ವಾಹನದ ವ್ಯವಸ್ಥೆ ಕಲ್ಪಿಸಲು ಸರಕಾರ ಅನುಮೋದನೆ ನೀಡಿದೆ. ಆದರೆ ಯಾವ ಮಾನದಂಡದಡಿ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಸ್ಪಷ್ಟಪಡಿಸಿಲ್ಲ. ಯಾವುದೇ ಸರಕಾರ ಶಾಲೆಗಳಿಗೆ ಈವರೆಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರದಿಂದ ಶಾಲಾ ಬಸ್‌ ನೀಡಿಲ್ಲ. ಕೆಲವು ಶಾಲೆಗಳು ವಿವಿಧ ಸಂಸ್ಥೆಗಳ ಸಿಎಸ್‌ಆರ್‌ ನಿಧಿ ಪಡೆದುಕೊಂಡು, ಹಲವು ಶಾಲೆಗಳು ಸ್ಥಳೀಯ ದಾನಿಗಳ ಮೂಲಕ ಹಾಗೂ ಇನ್ನು ಕೆಲವು ಶಾಲೆಗಳು ಹಳೇ ವಿದ್ಯಾರ್ಥಿ ಗಳ ಸಂಘದ ಮೂಲಕ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆಯನ್ನು ತಾತ್ಕಾಲಿಕ ಹಾಗೂ ಶಾಶ್ವತ ನೆಲೆಯಲ್ಲಿ ಮಾಡಿಕೊಂಡಿವೆ. ಆದರೆ ಈ ಬಸ್‌ಗಳ ನಿರ್ವಹಣೆಯೇ ಶಾಲೆಗೆ ಕಗ್ಗಂಟಾಗಿದೆ.

ಆಯ್ಕೆಯೇ ಸವಾಲು
ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶಾಲೆಗೆ ಹೊಸ ಕಟ್ಟಡ, ಶೌಚಾಲಯ ಸಹಿತ ಮೂಲಸೌಕರ್ಯಕ್ಕಾಗಿ ಈವರೆಗೂ ಶಾಲೆ
ಗಳಿಂದ ಶಾಸಕರಿಗೆ ಅರ್ಜಿ ಸಲ್ಲಿಸಲಾಗುತ್ತಿತ್ತು. ಈಗ ಶಾಲಾ ವಾಹನದ ವ್ಯವಸ್ಥೆ ಮಾಡುವಂತೆಯೂ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಒಂದು ಶಾಲೆಗೆ ಒಂದು ಬಸ್‌ ಖರೀದಿಗೆ ಕನಿಷ್ಠ 15 ಲ.ರೂ.ಗಳಿಂದ 20 ಲ.ರೂ. ವರೆಗೂ ಬೇಕಾಗುತ್ತದೆ. ವರ್ಷಕ್ಕೆ ಎಷ್ಟು ಶಾಲೆಗೆ ಶಾಲಾ ಬಸ್‌ಗಾಗಿ ಅನುದಾನ ನೀಡಬೇಕು ಮತ್ತು ಅದಕ್ಕಾಗಿ ಯಾವ ಮಾನದಂಡ ಅನುಸರಿಸಬೇಕು ಎಂಬುದಕ್ಕೆ ನಿಯಮವಿಲ್ಲ. ಶಾಸಕರು ತಮ್ಮ ವಿವೇಚನೆ ಆಧಾರದಲ್ಲಿ ನಿರ್ಧಾರ ತೆಗೆದು ಕೊಳ್ಳಬಹುದಾಗಿದೆ. ಆದರೆ ಸ್ಥಳೀಯ ನಾಯಕರ ಒತ್ತಡ ಹೆಚ್ಚಿರುವುದರಿಂದ ಆಯ್ಕೆಯೂ ಸವಾಲಾಗಿದೆ.

ನಿರ್ವಹಣೆ ಅಸಾಧ್ಯ
ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಯಿಂದ ಶಾಲಾ ವಾಹನ ಖರೀದಿ ಮಾಡಿ ಅದರ ನಿರ್ವಹಣೆಯನ್ನು ಸಂಪೂರ್ಣವಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ನೋಡಿಕೊಳ್ಳಬೇಕು ಎಂದು ಸರಕಾರ ಷರತ್ತು ವಿಧಿಸಿದೆ. ವಾಸ್ತವವಾಗಿ ಎಸ್‌ಡಿಎಂಸಿಗೆ ಇಲಾಖೆಯಿಂದ ಪ್ರತ್ಯೇಕ ಅನುದಾನ ಬರುವುದಿಲ್ಲ. ಹೀಗಾಗಿ ಸ್ಥಳೀಯ ದಾನಿಗಳು ಅಥವಾ ವಿದ್ಯಾರ್ಥಿಗಳಿಂದಲೇ ಹಣ ಸಂಗ್ರಹ ಮಾಡಬೇಕು. ಒಂದು ವಾಹನದ ನಿರ್ವಹಣೆ (ಪೆಟ್ರೋಲ್‌/ ಡೀಸೆಲ್‌) ಮತ್ತು ಚಾಲಕನ ವೇತನ ಸಹಿತ ತಿಂಗಳಿಗೆ ಕನಿಷ್ಠ 30 ಸಾವಿರದಿಂದ 40 ಸಾವಿರ ರೂ. ಬೇಕಾಗುತ್ತದೆ. ಗ್ರಾಮೀಣ ಭಾಗದ ಯಾವುದೇ ಸರಕಾರಿ ಶಾಲೆಯಲ್ಲಿ ತಿಂಗಳಿಗೆ ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸುವುದು ಸುಲಭವಿಲ್ಲ. ಈ ಪ್ರಕ್ರಿಯೆ ನಿರಂತರ ನಡೆಯಬೇಕಿರುವುದರಿಂದ ಸರಕಾರವೇ ಯಾವುದಾದರೂ ಮೂಲದಿಂದ ಇದಕ್ಕೆ ಅನುದಾನ ನೀಡಬೇಕು. ಇಲ್ಲವಾದರೆ ಶಾಲೆ ಯಿಂದ ನಿರ್ವಹಣೆ ಕಷ್ಟವಾಗಲಿದೆ ಎಂಬುದು ಎಸ್‌ಡಿಎಂಸಿ ಸದಸ್ಯರ ಅಭಿಪ್ರಾಯವಾಗಿದೆ.

ಸದ್ಯದ ವ್ಯವಸ್ಥೆ ಹೇಗಿದೆ?
ಉಡುಪಿಯಲ್ಲಿ 50ಕ್ಕೂ ಅಧಿಕ ಶಾಲೆ ಹಾಗೂ ದ.ಕ.ದಲ್ಲಿ 100ಕ್ಕೂ ಅಧಿಕ ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಕರೆತರಲು ಶಾಲಾ ವಾಹನದ ವ್ಯವಸ್ಥೆಯನ್ನು ಎಸ್‌ಡಿಎಂಸಿ, ಹಳೇ ವಿದ್ಯಾರ್ಥಿಗಳ ಸಂಘದ ಸಮನ್ವಯದಿಂದ ಮಾಡಿಕೊಂಡಿವೆ. ಈ ಶಾಲಾ ವಾಹನಗಳಲ್ಲಿ ಬಹುತೇಕ ಬಾಡಿಗೆಯದಾಗಿದ್ದು, ಅದರಲ್ಲಿ ರಿಕ್ಷಾ, ಟಿಟಿ, ಆಮ್ನಿ ಇತ್ಯಾದಿ ಹೆಚ್ಚಿವೆ. ಅಂದರೆ ನಿರ್ದಿಷ್ಟ ಶಾಲಾ ವಾಹನ (ಹಳದಿ ಬಣ್ಣದ) ಬಳಸುತ್ತಿಲ್ಲ. ಕಾರಣ, ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದ ಅನಂತರ ಬೇರೆ ಬಾಡಿಗೆಗೆ ಹೋಗುತ್ತಾರೆ. ಪುನಃ ಸಂಜೆ ಶಾಲೆ ಬಿಡುವಾಗ ಬರುತ್ತಾರೆ. ಇದರಿಂದ ಚಾಲಕರ ವೇತನ ಮತ್ತು ಬಾಡಿಗೆ ಕಡಿಮೆಯಾಗುತ್ತದೆ. ಶಾಶ್ವತ ವಾಹನ ವ್ಯವಸ್ಥೆ ಮಾಡಿಕೊಂಡಿರುವ ಶಾಲೆಗಳಲ್ಲಿ ಶಿಕ್ಷಕರು ಅಥವಾ ಎಸ್‌ಡಿಎಂಸಿ ಸದಸ್ಯರೇ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಯಾವುದೇ ಸರಕಾರಿ ಶಾಲೆಗೆ ಈವರೆಗೂ ಸರಕಾರದಿಂದ ಶಾಲಾ ವಾಹನ ನೀಡಿಲ್ಲ. ಈಗ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಶಾಲಾ ವಾಹನ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ನಿರ್ವಹಣೆ ಶಾಲೆಯಿಂದಲೇ ಮಾಡಬೇಕಿರುವುದರಿಂದ ಅದು ಕೂಡ ಹೊರೆಯಾಗಲಿದೆ. ದಾನಿಗಳು ಅಥವಾ ಬೇರೆ ಯಾವುದಾದರೂ ಆದಾಯದ ಮೂಲ ಬೇಕಾಗುತ್ತದೆ. ಇಲ್ಲವಾದರೆ ನಿರ್ವಹಣೆ ಕಷ್ಟ.
– ಗೋವಿಂದ ಮಡಿವಾಳ / ಸುಧಾಕರ,
ಡಿಡಿಪಿಐ, ಉಡುಪಿ /ದಕ್ಷಿಣ ಕನ್ನಡ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.