ಬಸ್‌ ಢಿಕ್ಕಿ: ರಿಕ್ಷಾ ಪಲ್ಟಿ ; ತಪ್ಪಿದ ಭಾರೀ ಅನಾಹುತ


Team Udayavani, Aug 31, 2017, 7:25 AM IST

300817uc3.jpg

ಉಡುಪಿ: ನಗರದ ಕಿದಿಯೂರು ಹೊಟೇಲಿನ ಮುಂಭಾಗದ ಏಕಮುಖ ಸಂಚಾರ ರಸ್ತೆಯಲ್ಲಿ ಬುಧವಾರ ಅಪರಾಹ್ನ ಖಾಸಗಿ ಬಸ್ಸೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಮಗುಚಿ ಬಿದ್ದ ಆಟೋರಿಕ್ಷಾದಲ್ಲಿದ್ದ ಚಾಲಕ, ಪ್ರಯಾಣಿಕ ಮಹಿಳೆ ಮತ್ತು ಅವರ ಮಗಳು ಅಪಾಯದಿಂದ ಪಾರಾಗಿದ್ದಾರೆ.

ರಿಕ್ಷಾ ಚಾಲಕ ಸಂದೀಪ್‌ ಓಂತಿಬೆಟ್ಟು ವಿನವರಾಗಿದ್ದಾರೆ. ಪ್ರಯಾಣಿಕ ಮಹಿಳೆ ಮತ್ತು ಬಾಲಕಿಯನ್ನು ಕರೆದುಕೊಂಡು ಅವರು ಉಡುಪಿಯಿಂದ ಓಂತಿಬೆಟ್ಟುವಿಗೆ ಹೋಗುತ್ತಿದ್ದಾಗ ಹಿಂದುಗಡೆಯಿಂದ ಉಡುಪಿಯಿಂದ ಕುಂದಾ ಪುರಕ್ಕೆ ತೆರಳುತ್ತಿದ್ದ ಬಸ್ಸು ಢಿಕ್ಕಿ ಹೊಡೆದಿದೆ. ಬಸ್ಸಿನ ಬ್ರೇಕ್‌ ವೈಫ‌ಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆಯಾದರೂ ಅತೀ ವೇಗದ ಕಾರಣವೆಂದು ಸ್ಥಳೀಯರು ಹೇಳುತ್ತಾರೆ. ಅಪಘಾತವನ್ನು ಕಂಡು ಗಾಬರಿಗೊಂಡಿದ್ದ ತಾಯಿ, ಮಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಿಕ್ಷಾ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿ ಅಪಘಾತವಾದ ಸ್ಥಳದಲ್ಲೇ ಇದ್ದರು.

ಎಸ್‌ಪಿ ಕಾರಿಗೇ ಗುದ್ದುತ್ತಿತ್ತು
ಘಟನಾ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು, ಪೊಲೀಸರು ಸೇರಿ ರಿಕ್ಷಾವನ್ನು ಮೇಲಕ್ಕೆತ್ತಿ ಬದಿಗೆ ಸರಿಸಿ ಇಟ್ಟರು. ಬಸ್ಸನ್ನು ಬದಿಗೆ ಸರಿಸುವುದಾಗಿ ಬಸ್ಸಿನ ಸೀಟಿನಲ್ಲಿ ಅನ್ಯ ಚಾಲಕರೊಬ್ಬರು ಕುಳಿತು ಬಸ್ಸನ್ನು ಮುಂದಕ್ಕೆ ಚಲಾಯಿಸಿದರು. ಈ ಸಂದರ್ಭ ಮೊದಲೇ ಬ್ರೇಕ್‌ ಸರಿಯಿಲ್ಲ ಎನ್ನುತ್ತಿದ್ದರೂ ಬಸ್‌ ಚಲಾಯಿಸಿದ ಕಾರಣ ಅದು ನಿಯಂತ್ರಣಕ್ಕೆ ಬಾರದೆ ಮುಂದೆ ನಿಂತಿದ್ದ ಇನ್ನೊಂದು ಆಟೋರಿಕ್ಷಾ ಟೆಂಪೋಗೆ ಸವರಿಕೊಂಡು ಮುಂದಕ್ಕೆ ಸಾಗಿತು. ಉಡುಪಿ-ಬನ್ನಂಜೆ ರಸ್ತೆಯ ಶಿರಿಬೀಡು ಜಂಕ್ಷನ್‌ನಲ್ಲಿ ಚಾಲಕ ಬಸ್ಸನ್ನು ಬನ್ನಂಜೆ ಕಡೆಗೆ ತಿರುಗಿಸಿದ. ಇದೇ ವೇಳೆಯಲ್ಲಿ ರಸ್ತೆಯಲ್ಲಿ ವಾಹನಗಳು ಹೋಗುತ್ತಿದ್ದರೆ ಬಸ್ಸು ಆ ವಾಹನಗಳಿಗೂ ಢಿಕ್ಕಿ ಹೊಡೆಯುತ್ತಿತ್ತು. ಈ ಸಂದರ್ಭ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್‌ ಅವರು ಕಾರಿನಲ್ಲಿ ಹೋಗುತ್ತಿದ್ದರು. ಶಿರಿಬೀಡು ಜಂಕ್ಷನ್‌ನಲ್ಲಿ ಸ್ವಲ್ಪದರಲ್ಲೇ ಅವರ ಕಾರು ಕೂಡ ಪಾರಾಗಿತ್ತು. ಅನತಿ ದೂರಕ್ಕೆ ಏಕಮುಖ ರಸ್ತೆಯಲ್ಲಿಯೇ ಕೊಂಡೊಯ್ದ ಚಾಲಕ ಬಸ್ಸನ್ನು ನಿಲ್ಲಿಸಿ ಬಿಟ್ಟಿದ್ದ. ಜನರು ಸೇರಿದ್ದ ಕಾರಣ ಎಸ್‌ಪಿಯವರು ಏನಾದರೂ ಗಲಾಟೆ ನಡೆಯಿತೆಂದು ಜನರನ್ನು ಚದುರಿಸಲು ಪೊಲೀಸರಿಗೆ ಹೇಳಿದರು. ಬಳಿಕ ವಿಷಯ ತಿಳಿದುಕೊಂಡು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿ ಹೋದರು.

ಬಸ್‌ ಚಾಲಕ ಪರಾರಿ
ಮೊದಲಿನ ಅಪಘಾತ ನಡೆಸಿದ್ದ ಬಸ್ಸಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದರು. ಅನಂತರ ಬ್ರೇಕ್‌ ಇಲ್ಲ ಎಂದು ಹೇಳಿದರೂ ಇನ್ನೋರ್ವ ಚಾಲಕ ಬಸ್ಸನ್ನು ಬದಿಗೆ ಸರಿಸುತ್ತೇನೆಂದು ಹೇಳಿ ಇನ್ನೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆಯುತ್ತಾ ಮುಂದಕ್ಕೆ ಸಾಗಿದ್ದ. ಬಸ್‌ ನಿಂತ ತತ್‌ಕ್ಷಣ ಆತನೂ ಬಸ್ಸು ಬಿಟ್ಟು ಪರಾರಿಯಾಗಿದ್ದ. ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.