ಬೈಂದೂರು: ರಂಗ ಲಾವಣ್ಯ ಕಲಾ ಮಹೋತ್ಸವ ಸಂಪನ್ನ
Team Udayavani, Feb 25, 2017, 12:22 PM IST
ಬೈಂದೂರು: ನಾಟಕಗಳು ಸಮಾಜದ ಅಂಕುಡೊಂಕುಗಳ ಮೇಲೆ ಬೆಳಕು ಚೆಲ್ಲಿ ಅವುಗಳನ್ನು ತಿದ್ದಲು ಪ್ರಯತ್ನಿಸುತ್ತವೆೆ. ಸಮಸ್ಯೆಗಳಿಗೆ ಪರಿಹಾರ ಸೂಚಿಸುತ್ತದೆ. ನಾಟಕದ ಮೂಲಕ ಪಾಠಗಳು ಎಂಬ ಶಿಕ್ಷಣ ವನ್ನೂ ನೀಡುತ್ತದೆ. ಆದುದರಿಂದ ಸಮಾಜ ಅದನ್ನು ಪ್ರೋತ್ಸಾಹಿಸಬೇಕು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಹಾಗೂ ಉಡುಪಿ ರಂಗಭೂಮಿಯ ಗೌರವಾಧ್ಯಕ್ಷ ಡಾ| ಎಚ್. ಶಾಂತಾರಾಮ್ ಹೇಳಿದರು.
ಅವರು ಲಾವಣ್ಯ ಬೈಂದೂರು ಇದರ 40ರ ಸಂಭ್ರಮದ ಪ್ರಯುಕ್ತ ನಡೆಯುತ್ತಿರುವ ರಂಗ ಲಾವಣ್ಯ -2017 ಕಲಾಮಹೋತ್ಸವದ ಸಮಾ ರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದರು.
ಅನಂತರ ಕಿರುತೆರೆ ಹಾಗೂ ಚಲನಚಿತ್ರ ನಟ-ನಿರ್ದೇಶಕ ನಿಖೀಲ್ ಮಂಜು ಮಾತನಾಡಿ ಮನೋರಂಜನೆಯ ಪ್ರಾಕಾರಗಳಲ್ಲಿ ರಂಗ ಭೂಮಿ ಎಲ್ಲಕ್ಕಿಂತ ಶ್ರೇಷ್ಠ. ಹಿಂದಿ ನಿಂದಲೂ ಇದು ಸದುದ್ದೇಶ ಇಟ್ಟುಕೊಂಡು ಬೆಳೆದು ಬಂದಿದೆ. ಇದಕ್ಕೆ ಹಿಂದೆ ರಾಜಾಶ್ರಯ, ಜನಾಶ್ರಯ, ಸರಕಾರದ ಆಶ್ರಯವೂ ಸಿಕ್ಕಿದೆ. ನಾಟಕಗಳ ಮೂಲಕ ಕಲೆ- ಸಾಹಿತ್ಯ- ದೇಶ- ಭಾಷೆಗಳ ಕೊಂಡಿಯಾಗಿ ಪ್ರತಿಫಲಾಪೇಕ್ಷೆಗಳಿಲ್ಲದೇ ಧನಾತ್ಮಕ ಆಶಯಗಳ ಮೂಲಕ ಮನೋ ರಂಜನೆ ನೀಡುತ್ತಾ ಬಂದಿದೆ. ಇಂತಹ ರಂಗಭೂಮಿಯಲ್ಲಿ ಗುರುತಿಸಿಕೊಳ್ಳು ವುದೇ ಓರ್ವ ಕಲಾವಿದನ ಶ್ರೇಷ್ಠತೆ ಎಂದರು.
ಲಾವಣ್ಯ ಅಧ್ಯಕ್ಷ ಗಿರೀಶ್ ಬೈಂದೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ಲಾವಣ್ಯ ಕಲಾವಿದ ರಾದ ಮಲ್ಲಿಕಾ ಶೆಟ್ಟಿ, ಅರ್ಚನಾ, ಮಂಜೋತ್, ಸೂರಜ್ ನಾಯಕ್, ಸುಮಂತ್ ಆಚಾರ್, ಶಶಿಧರ್ ಕಾರಂತ್ ಅವರನ್ನು ಗೌರವಿಸಲಾಯಿತು.ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮ ದರ್ಶಿ ಬಿ. ಎಂ. ಸುಕುಮಾರ್ ಶೆಟ್ಟಿ, ಉದ್ಯಮಿಗಳಾದ ಜಗದೀಶ್ ಮಯ್ಯ ಬೆಂಗಳೂರು, ಎನ್.ಡಿ. ಶೆಟ್ಟಿ ಹುಬ್ಬಳ್ಳಿ, ಲಕ್ಷ್ಮೀಕಾಂತ್ ಬೆಸ್ಕೂರ್ ಉಡುಪಿ, ಲಾವಣ್ಯ ಗೌರವಾಧ್ಯಕ್ಷ ಯು.ಶ್ರೀನಿವಾಸ ಪ್ರಭು, ಕಾರ್ಯದರ್ಶಿ ಗಳಾದ ಬಿ. ಮೋಹನ ಕಾರಂತ್, ನಾರಾಯಣ ಕೆ. ಉಪಸ್ಥಿತರಿದ್ದರು.
ಉದಯ್ ಆಚಾರ್ಯ ಸ್ವಾಗತಿಸಿ ದರು. ಸುಬ್ರಹ್ಮಣ್ಯ ಗಾಣಿಗ ಕಾರ್ಯ ಕ್ರಮ ನಿರ್ವಹಿಸಿದರು. ಸದಾಶಿವ ಡಿ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.