Fraud Case: ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

ವಾಹನ ಸಾಲದ ಕಂತು ಬಾಕಿಯಿದೆ; ತತ್‌ಕ್ಷಣ ಗೂಗಲ್‌ ಪೇ ಮಾಡಿ ಇಲ್ಲವೇ ಕೋರ್ಟ್‌ ಕೇಸ್‌ ಆಗಲಿದೆ ಎಂದು ಬೆದರಿಕೆ

Team Udayavani, Aug 31, 2024, 7:05 AM IST

Fraud Case: ಕನ್ನಡದಲ್ಲಿ ಕರೆ ಮಾಡಿ ವಂಚಿಸುವ ಜಾಲ ಸಕ್ರಿಯ!

ಕಟಪಾಡಿ: ಆನ್‌ಲೈನ್‌ ವಂಚಕರೆಲ್ಲ ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ; ಹಾಗಾಗಿ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂಬ ನಂಬಿಕೆ ಈಗ ಹುಸಿಯಾಗುತ್ತಿದೆ. ಕಟ
ಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ ಘಟನೆ ನಡೆದಿದೆ.

ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ವಕೀಲನೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, “ನಿಮ್ಮ ಸಾಲದ ಕಂತು ಬಾಕಿ ಇದ್ದು, ಕೇಸ್‌ ಆಗಿದೆ. ಕೋರ್ಟ್‌ಗೆ ಹಾಜರಾಗಬೇಕು’ ಎಂದು ದರ್ಪದಿಂದ ಮಾತನಾಡಿ ಸಾಲದ ಕಂತನ್ನು ಗೂಗಲ್‌ ಪೇ ಮೂಲಕ ಭರಿಸುವಂತೆ ಒತ್ತಡ ಹಾಕಿದ್ದಾನೆ. ಕರೆ ಬಂದಿರುವ ನಂಬರ್‌ 8792701216 ಆಗಿದ್ದು ಟ್ರೂ ಕಾಲರ್‌ನಲ್ಲಿ ನಾಗ ಆರ್‌. ಎಂದು ಹೆಸರು ಬರುತ್ತದೆ.

“ಏ ಚಂದ್ರ ಕೂಡಲೇ ಕೋರ್ಟ್‌ಗೆ ಬಾ. ಎಷ್ಟು ಹೊತ್ತಿನಲ್ಲಿ ಬರುತ್ತೀ..’ ಎಂದು ದಬ್ಟಾಳಿಕೆಯಿಂದ ಮಾತಿಗಿಳಿದ ವ್ಯಕ್ತಿಯು ಸಾಲ ಕೊಟ್ಟ ಮ್ಯಾನೇಜರ್‌ ಅವರೊಂದಿಗೂ ಮಾತನಾಡುವಂತೆ ಹೇಳಿ ಇನ್ನೊಬ್ಬನಿಗೆ ಫೋನನ್ನು ಹಸ್ತಾಂತರಿದ್ದಾನೆ. ಮ್ಯಾನೇಜರ್‌ ಎನ್ನುವ ವ್ಯಕ್ತಿ ಮಾತನಾಡಿ, “ತಾಂತ್ರಿಕ ಸಮಸ್ಯೆ ಇರುವುದರಿಂದ ಸಾಲದ ಕಂತು ಅಟೋ ಮ್ಯಾಟಿಕ್‌ ಆಗಿ ನಿಮ್ಮ ಖಾತೆಯಿಂದ ಪಾವತಿ ಆಗುತ್ತಿಲ್ಲ. ಕೂಡಲೇ ಗೂಗಲ್‌ ಪೇ ಮೂಲಕ ಪಾವತಿ ಮಾಡಿ’ ಎಂದು ಆತನೂ ಒತ್ತಡ ಹೇರಿದ. ಇದು ವಂಚಕರ ಕರೆಯೆಂದು ಅರಿತ ಚಂದ್ರ ಪೂಜಾರಿ ಅವರು, “ನನ್ನ ಸಾಲದ ಕಂತು ಬಾಕಿ ಇಲ್ಲ. ಹಾಗೂ ಬಾಕಿ ಇದ್ದಲ್ಲಿ ಕಚೇರಿಗೇ ಬಂದು ಪಾವತಿಸುತ್ತೇನೆ. ನಿಮ್ಮ ಕಚೇರಿ ಉಡುಪಿಯಲ್ಲಿ ಎಲ್ಲಿದೆ?’ ಎಂದು ಕೇಳಿದಾಗ ತಡವರಿಸಿದ ವ್ಯಕ್ತಿಯು “ಲೊಕೇಷನ್‌ ಕಳಿಸುತ್ತೇನೆ’ ಎಂದು ಹೇಳಿ ಕರೆ ಕಡಿತ ಮಾಡಿದ್ದ.

ಬಳಿಕ ವಾಹನ ಸಾಲ ನೀಡಿದ್ದ ಆರ್ಥಿಕ ಸಂಸ್ಥೆಗೆ ಕರೆ ಮಾಡಿ ವಿಚಾರಿಸಿದಾಗ, !ಅಂತಹ ಯಾವುದೇ ಕರೆ ನಮ್ಮ ಕಚೇರಿಯಿಂದ ಮಾಡಿಲ್ಲ. ನಿಮ್ಮ ಸಾಲದ ಯಾವುದೇ ಕಂತು ಬಾಕಿ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಚಂದ್ರ ಅವರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ನಾನು ಅವರ ಒತ್ತಡಕ್ಕೆ ಮಣಿದು ಗೂಗಲ್‌ ಮೂಲಕ ಪಾವತಿಸಿದ್ದಲ್ಲಿ ವಂಚನೆಗೊಳಗಾಗುತ್ತಿದ್ದೆ. ಆದರೆ ಎಲ್ಲೆಡೆ ಇಂತಹ ವಂಚನೆ ಜಾಲಗಳು ಬೇರೆ ಬೇರೆ ಮಾದರಿಯಲ್ಲಿ ವಂಚಿಸಿ ಹಣ ದೋಚುತ್ತಿರುವ ಬಗ್ಗೆ ಉದಯವಾಣಿ ಪತ್ರಿಕೆಯೂ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರಿಂದ ನಾನೂ ಕೂಡ ಜಾಗೃತನಾಗಿಯೇ ಇದ್ದೆ. ಆದ ಕಾರಣ ಹಣ ಕಳೆದುಕೊಳ್ಳಲಿಲ್ಲ ಎಂದು ಚಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

11

Padubidri: ಸ್ಕೂಟಿಗೆ ವ್ಯಾಗನಾರ್‌ ಕಾರು ಢಿಕ್ಕಿ: ಸವಾರನಿಗೆ ಗಾಯ

10

Udupi: ಟಿಕೆಟ್‌ ರಹಿತ ಪ್ರಯಾಣ; ಇಬ್ಬರು ಅಪ್ರಾಪ್ತರು ವಶಕ್ಕೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

20-shirva

Shirva ಹಿಂದೂ ಜೂನಿಯರ್‌ ಕಾಲೇಜು; ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ವಿತರಣೆ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.