ಉಡುಪಿ ಜಿಲ್ಲೆಯ 21 ಸರಕಾರಿ ಆಸ್ಪತ್ರೆಗೆ ಇಸಿಜಿ ಯಂತ್ರ


Team Udayavani, Nov 3, 2018, 10:34 AM IST

cord.jpg

ಕುಂದಾಪುರ: ಕೆಎಂಸಿಯ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್‌ ಅವರು ರೂಪಿಸಿದ “ಕಾರ್ಡಿಯಾಲಜಿ ಎಟ್‌ ಡೋರ್‌ ಸ್ಟೆಪ್‌’ (ಮನೆ ಬಾಗಿಲಿಗೆ ಹೃದ್ರೋಗ ಚಿಕಿತ್ಸೆ) ವಾಟ್ಸಾಪ್‌ ವೈದ್ಯಕೀಯ ಬಳಗದ ಮೂಲಕ ಸರಕಾರಿ ಆಸ್ಪತ್ರೆಗಳಿಗೆ ಇಸಿಜಿ ಯಂತ್ರ ನೀಡುವ ಕಾರ್ಯ ಮುಂದುವರಿದಿದ್ದು, ಈ ದೀಪಾವಳಿಗೆ ಉಡುಪಿ ಜಿಲ್ಲೆಯ 21 ಸರಕಾರಿ ಆಸ್ಪತ್ರೆಗಳಿಗೆ ವಿತರಣೆ ನಡೆಯಲಿದೆ. 

ಡಾ| ಕಾಮತರು ಈ ವಾಟ್ಸಾಪ್‌ ಬಳಗ ರಚಿಸಿದ್ದು, ಕೊಡಗು, ದ.ಕ., ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡದ 250 ವೈದ್ಯರು, ಈ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳು ಸದಸ್ಯರಾಗಿದ್ದರು. ಮಂದಾರ್ತಿ, ಶಂಕರನಾರಾಯಣ, ತ್ರಾಸಿ, ತೆಕ್ಕಟ್ಟೆ, ತಲ್ಲೂರು, ಬಾಕೂರು, ಉಪ್ಪುಂದ, ಸಿದ್ದಾಪುರದಂತಹ ಗ್ರಾಮಾಂತರ ಪ್ರದೇಶದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ಐದು ಜಿಲ್ಲೆಗಳ ಆ್ಯಂಬುಲೆನ್ಸ್‌ ಚಾಲಕರಿದ್ದಾರೆ. ಎಂಬಿಬಿಎಸ್‌, ಆಯುಷ್‌ನ ಆಯುರ್ವೇದ, ಯುನಾನಿ, ಅಲೋಪತಿಯವರಿಗೂ ಸದಸ್ಯತ್ವದ ಅವಕಾಶ ಇದೆ. ವೈದ್ಯಕೀಯ ಹಾಗೂ ಹೃದ್ರೋಗ ಸಂಬಂಧಿ ಮಾಹಿತಿ ವಿನಿಮಯಕ್ಕಷ್ಟೇ ಸೀಮಿತವಾಗಿ ಮನೆಬಾಗಿಲಿನಲ್ಲಿ ಹೃದ್ರೋಗ ಚಿಕಿತ್ಸೆ ನೀಡುತ್ತಿದೆ. ಈ ಬಳಗ ಅನಂತರದ ದಿನಗಳಲ್ಲಿ ಅಭೂತಪೂರ್ವ ಬೆಳವಣಿಗೆ ಕಂಡಿದೆ. 

ಬೆಳವಣಿಗೆ
ಬಳಗ ಆರಂಭವಾದ ಆರೇ ತಿಂಗಳಲ್ಲಿ 6 ಜಿಲ್ಲೆಗಳ ಸರಕಾರಿ ಆಸ್ಪತ್ರೆಗಳಿಗೆ ಇಸಿಜಿ ಯಂತ್ರಗಳನ್ನು ಕರ್ಣಾಟಕ ಬ್ಯಾಂಕ್‌ ಸಹಿತ ವಿವಿಧ ದಾನಿಗಳ ನೆರವಿನಿಂದ ನೀಡ ಲಾಗಿದೆ. ಈ ಯಾವುದೇ ಸಾಮಾನ್ಯ ಆಸ್ಪತ್ರೆಯಲ್ಲಿ, ಸರಕಾರಿ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿ ಕೊಳ್ಳ ಬಹುದು. ಇದನ್ನನುಸರಿಸಿ ಹೃದಯದ ಸ್ಥಿತಿಗತಿ ಗಮನಿಸಿ ಅಗತ್ಯ ಚಿಕಿತ್ಸೆ ಅಲ್ಲೇ ಲಭ್ಯವಿದ್ದರೆ ದೊಡ್ಡ ಆಸ್ಪತ್ರೆಗಳ ಸಹವಾಸ ತಪ್ಪುತ್ತದೆ. ಈ ವಾಟ್ಸಾಪ್‌ ಗ್ರೂಪ್‌ ಆರಂಭಿಸಿ ದಾಗ “ಉದಯವಾಣಿ’ ವರದಿ ಮಾಡಿತ್ತು.

ಎಲ್ಲೆಲ್ಲಿ ?
ದೀಪಾವಳಿಗೆ ಕಾರ್ಕಳ ತಾ|ನ ಹಿರ್ಗಾನ, ಮಾಳ, ಇರ್ವತ್ತೂರು, ಬೈಲೂರು, ಈದು, ಕುಕ್ಕುಂದೂರು, ಕುಂದಾಪುರ ತಾ|ನ ಬೈಂದೂರು, ಶಿರೂರು, ಕಿರಿಮಂಜೇಶ್ವರ, ಗಂಗೊಳ್ಳಿ, ಕುಂಭಾಶಿ, ಬಸ್ರುರೂ, ಕಂಡೂರು, ಸಿದ್ದಾಪುರ, ಹಳ್ಳಿಹೊಳೆ, ಹಾಲಾಡಿ, ಬೆಳ್ವೆ, ಬಿದ್ಕಲ್‌ಕಟ್ಟೆ, ನಾಡ, ಕೊರ್ಗಿ, ಉಡುಪಿ ತಾ|ನ ಕೆಮ್ಮಣ್ಣು ಆಸ್ಪತ್ರೆಗಳಿಗೆ ನ.6, 7, 8ರಂದು ವಿತರಿಸಲಾಗುವುದು.

ಶತಕದೆಡೆಗೆ
ಡಿಸೆಂಬರ್‌ ಅಂತ್ಯದೊಳಗೆ 100 ಇಸಿಜಿ ಯಂತ್ರಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಕಾಸರಗೋಡು, ದ.ಕ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದ 34 ಕಡೆ ಇಸಿಜಿ ಯಂತ್ರ ನೀಡಲಾಗಿದೆ. ಕಾಸರಗೋಡಿನಲ್ಲಿ 15, ಕುಂದಾಪುರ 15, ಕಾರ್ಕಳ 8, ಉತ್ತರಕನ್ನಡ 8, ಚಿಕ್ಕಮಗಳೂರು 7, ಶಿವಮೊಗ್ಗ 5, ತೀರ್ಥಹಳ್ಳಿ 7, ಮಂಗಳೂರಿನ ಬೀಡಿ ಕಾರ್ಮಿಕರ ಆಸ್ಪತ್ರೆಗೆ 2 ಇಸಿಜಿ ಯಂತ್ರಗಳನ್ನು ನೀಡಲಾಗುತ್ತಿದೆ. 

ದೇಶಾದ್ಯಂತ ಆಗಲಿ
ಜನೌಷಧಿ ಕೇಂದ್ರಗಳಿಗೂ ಇಸಿಜಿ ಯಂತ್ರ ವಿತರಿಸಲಾಗಿದೆ. ಅನೇಕ ದಾನಿಗಳು ಇಸಿಜಿ ಯಂತ್ರ ನೀಡುತ್ತಿದ್ದು, ಯಾರಿಗೂ ಹೊರೆಯಾಗುವುದಿಲ್ಲ. ಈ ಅಭಿಯಾನ ದೇಶಾದ್ಯಂತ ನಡೆಯಬೇಕು. ಸೌಲಭ್ಯ ಇಲ್ಲದೆಡೆ ಹೃದ್ರೋಗಿಗಳು ಜೀವ ಕಳೆದುಕೊಳ್ಳುವಂತಾಗಬಾರದು. ಅಂತಹವರಿಗೆ ನೆರವಾಗಬೇಕು.
ಡಾ| ಪದ್ಮನಾಭ ಕಾಮತ್‌, ಹೃದ್ರೋಗ ವಿಭಾಗ ಮುಖ್ಯಸ್ಥರು, ಕೆಎಂಸಿ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.