CET: ಉಡುಪಿಯಲ್ಲಿ 8,037 ವಿದ್ಯಾರ್ಥಿಗಳಿಂದ ನೋಂದಣಿ
Team Udayavani, Apr 12, 2024, 1:10 AM IST
ಉಡುಪಿ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾ ಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನಿರ್ದೇಶಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಡೆದ ಸಿಇಟಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎ. 18, 19ರಂದು ನಡೆಯುವ ಸಿಇಟಿಗೆ ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4, ಬ್ರಹ್ಮಾವರದಲ್ಲಿ 3 ಸೇರಿದಂತೆ 17 ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ 8,037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆ ಯನ್ನು ಕಟ್ಟುನಿಟ್ಟಾಗಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಗೊಂದಲವಾಗ ದಂತೆ ನಡೆದುಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಿಗೆ ಸೂಚನೆ
ವಿದ್ಯಾರ್ಥಿಗಳು ಕೇಂದ್ರದೊಳಗೆ ವಾಚ್, ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ, ಆಭರಣ ಧರಿಸುವು ದನ್ನು ನಿಷೇಧಿಸಲಾಗಿದೆ. ಪ್ರವೇಶ ಪತ್ರದ ಜತೆಗೆ ಯಾವುದಾದರೂ ಒಂದು ಗುರುತಿನ ಚೀಟಿ ಕಡ್ಡಾಯ ವಾಗಿ ತರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Illegal Immigration: ರಬ್ಬರ್ ಎಸ್ಟೇಟ್ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?
Siddapura: ಅಂಪಾರು ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು
Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್ ನೋಂದಣಿ ಆರಂಭ
Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.