ವಾಹನ ತಪಾಸಣೆ ಕೇಂದ್ರ ಗುಂಡ್ಮಿ ಟೋಲ್‌ ಗೇಟ್‌ ಗೆ ಸ್ಥಳಾಂತರ


Team Udayavani, Apr 7, 2018, 9:20 AM IST

Tapasane-6-4.jpg

ತೆಕ್ಕಟ್ಟೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ತೆಕ್ಕಟ್ಟೆ ರಾ.ಹೆ. 66ರ ಪ್ರಮುಖ ಭಾಗದಲ್ಲಿ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ಕೇಂದ್ರ ತೆರೆಯಲಾಗಿತ್ತು. ಇದನ್ನು ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ತರಾತುರಿಯಲ್ಲಿ ಗುಂಡ್ಮಿ ಟೋಲ್‌ ಗೇಟ್‌ ಗೆ ಎ. 6ರಂದು ಸ್ಥಳಾಂತರಿಸಲಾಗಿದೆ. ವಾಹನ ತಪಾಸಣೆ ಕೇಂದ್ರವು ಮಾ. 27ರಂದು ಪ್ರಾರಂಭಗೊಂಡಿತ್ತು. ತಪಾಸಣೆಯ ಸಂದರ್ಭದಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್‌ ಜಾಮ್‌ ಹಾಗೂ ನಿರಂತರವಾಗಿ ಅಪಘಾತಗಳು ಸಂಭವಿಸಿವೆ. ಇಲ್ಲಿ ರಸ್ತೆ ವಿಸ್ತರಣೆಯೂ ಪ್ರಗತಿಯಲ್ಲಿದ್ದು, ಸಂಚಾರದ ಬಗ್ಗೆ ಗೊಂದಲ ಉಂಟಾಗುತ್ತಿದೆ. ತಪಾಸಣೆ ಕೇಂದ್ರದಿಂದ ಸಮಸ್ಯೆ ಉಂಟಾಗುತ್ತಿರುವುದರ ಬಗ್ಗೆ ಸಾರ್ವಜನಿಕರು ಹಲವು ದಿನಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮಾಧ್ಯಮಗಳಲ್ಲೂ ಇಲ್ಲಿ ಆಗುತ್ತಿರುವ ಸಮಸ್ಯೆ- ಅಪಘಾತಗಳ ಬಗ್ಗೆ ವರದಿಗಳು ಪ್ರಕಟಗೊಂಡಿದ್ದವು.

ವಾಹನ ತಪಾಸಣೆ ಕೇಂದ್ರದಿಂದ ಸಂಭವಿಸಿದ ಅಪಘಾತಗಳು:
– ರಾ.ಹೆ. 66ರಲ್ಲಿ ವಾಹನ ತಪಾಸಣೆಯ ಸಂದರ್ಭದಲ್ಲಿ ನಿಂತ ಕಾರಿಗೆ ಚಲಿಸುತ್ತಿದ್ದ ಲಾರಿಯು ಢಿಕ್ಕಿಯಾಗಿ ಜಖಂಗೊಂಡ ಘಟನೆ ಎ. 2ರಂದು ಸಂಭವಿಸಿತ್ತು.

– ತೆಕ್ಕಟ್ಟೆ ಜಂಕ್ಷನ್‌ನಲ್ಲಿ ವಾಹನ ತಪಾಸಣೆಯ ಸಂದರ್ಭದಲ್ಲಿ ಸರಣಿ ಆಪಘಾತ ಸಂಭವಿಸಿ ನಾಲ್ಕು ವಾಹನಗಳು ಜಖಂಗೊಂಡ ಘಟನೆ ಎ. 4ರಂದು ಸಂಭವಿಸಿತ್ತು.

– ಎ. 5ರಂದು ಚಲಿಸುತ್ತಿದ್ದ ಲಾರಿ ನಿಂತ ಹುಂಡೈ ಐ 20 ಕಾರಿಗೆ ಢಿಕ್ಕಿಯಾಗಿ ಜಖಂಗೊಂಡಿದೆ.

ಓರ್ವನ ಮೇಲೆ ಪ್ರಕರಣ ದಾಖಲು
ಎ. 5ರಂದು ತೆಕ್ಕಟ್ಟೆ ರಾ.ಹೆ. 66ರಲ್ಲಿ ಟ್ರಾಫಿಕ್‌ ಜಾಮ್‌ ಆಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಮನಗಂಡ ಸತೀಶ್‌ ಪ್ರಭು ಎನ್ನುವವರು ತನ್ನ ವಾಹನವನ್ನು ರಸ್ತೆಯಲ್ಲಿಯೇ ನಿಲ್ಲಿಸಿ ಕರ್ತವ್ಯ ನಿರತ ಶಸ್ತ್ರಸಜ್ಜಿತ ಸಿ.ಆರ್‌.ಪಿ.ಎಫ್‌. ನಾಲ್ವರು ಯೋಧರು ಹಾಗೂ ಪೊಲೀಸ್‌ ಸಿಬಂದಿಯಲ್ಲಿ ಮಾತುಕತೆಗೆ ಮುಂದಾದಾಗ ತತ್‌ಕ್ಷಣವೇ ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಿದ ಘಟನೆ ಕೂಡ ಸಂಭವಿಸಿದೆ.

ಸಿ.ಆರ್‌.ಪಿ.ಎಫ್‌.ನ ಶಸ್ತ್ರಸಜ್ಜಿತ ನಾಲ್ವರು ಯೋಧರ ಸಹಿತ ಪೊಲೀಸ್‌ ಸಿಬಂದಿಗೆ ವಾಹನ ತಪಾಸಣೆಗೈಯಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು ಆದೇಶಿಸಿದ ಹಿನ್ನೆಲೆಯಲ್ಲಿ ತಪಾಸಣೆ ಕೇಂದ್ರವನ್ನು ಗುಂಡ್ಮಿ ಟೋಲ್‌ ಗೇಟ್‌ ಗೆ ಸ್ಥಳಾಂತರಿಸಲಾಗಿದೆ.
– ಸಂತೋಷ್‌ ಕಾಯ್ಕಿಣಿ, ಠಾಣಾಧಿಕಾರಿಗಳು, ಕೋಟ ಪೊಲೀಸ್‌ ಠಾಣೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.