ಕಸ, ಅಣೆಕಟ್ಟಿನಲ್ಲಿ ಮರದ ದಿಮ್ಮಿ ತೆರವುಗೊಳಿಸಿ

Clear lumber at the dam

Team Udayavani, Feb 27, 2020, 5:34 AM IST

2602KDPP12

ಕಿಂಡಿ ಅಣೆಕಟ್ಟಿನಲ್ಲಿ ಮರದ ದಿಮ್ಮಿ ತೆರವುಗೊಳಿಸಿ
ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 1.60 ಕೋ. ರೂ.ಗೂ ಮಿಕ್ಕಿದ ಅನುದಾನದಲ್ಲಿ ನಿರ್ಮಾಣಗೊಂಡ, ಬೇಸಿಗೆ ಸಮಯದಲ್ಲಿ ನೂರಾರು ಎಕರೆ ಕೃಷಿ ಭೂಮಿಗೆ ನೀರುಣಿಸುವ ಚೋನಮನೆ ಕಿಂಡಿ ಅಣೆಕಟ್ಟಿನಲ್ಲಿ ಉತ್ತಮ ಪ್ರಮಾಣದಲ್ಲಿ ನೀರು ಶೇಖರಣೆಗೊಂಡಿದೆ. ಆದರೆ ಆ ಡ್ಯಾಂನಲ್ಲಿ ಒಣಗಿದ ಬೃಹತ್‌ ಗಾತ್ರದ ಮರದ ದಿಮ್ಮಿಗಳು, ಇನ್ನಿತರ ಕಸ ಸಂಗ್ರಹಗೊಂಡಿದೆ.

ಈ ಕಿಂಡಿ ಅಣೆಕಟ್ಟಿನಿಂದ ಆಜ್ರಿ, ತಗ್ಗುಂಜೆ, ಬೆಳುವಾಣ, ಚೋನಮನೆ, ಹೊಸಬಾಳು ಭಾಗದ ಸುಮಾರು 300 ಎಕರೆ ಕೃಷಿ ಭೂಮಿಗೆ ನೀರು ಪೂರೈಕೆಯಾಗುತ್ತದೆ. ಇದಲ್ಲದೆ ಕಿಂಡಿ ಅಣೆಕಟ್ಟು, ವೆಂಟೆಂಡ್‌ ಡ್ಯಾಂಗಳಲ್ಲಿ ನೀರು ಸಂಗ್ರಹ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ ಅನುಕೂಲವಾಗುತ್ತಿದೆ.

ಆದರೆ ಇಷ್ಟೊಂದು ದೊಡ್ಡ ಮಟ್ಟದ ಕಿಂಡಿ ಅಣೆಕಟ್ಟಿನಲ್ಲಿ ಆಗಾಗ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದು ಇಲ್ಲಿ ಸಂಗ್ರಹವಾಗುತ್ತಿದ್ದು, ಇದರಿಂದ ಅಣೆಕಟ್ಟಿನ ಹಲಗೆಗಳಿಗೂ ಹಾನಿಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಮರದ ದಿಮ್ಮಿಗಳನ್ನು ಅಲ್ಲಿಂದ ತೆರವುಗೊಳಿಸಲಿ.
-ಚೋನಮನೆ ಭಾಗದ
ಗ್ರಾಮಸ್ಥರು

ಈ ರಸ್ತೆಗೆ ಮರು ಡಾಮರು ಎಂದು?
ಬಸ್ರೂರಿನಿಂದ ಬಳ್ಕೂರು, ಕಳುವಿನಬಾಗಿಲು, ಗುಲ್ವಾಡಿ ಕಡೆಗೆ ಸಂಚರಿಸುವ ಒಳ ರಸ್ತೆ ಇದಾಗಿದ್ದು, ಅನೇಕ ವರ್ಷಗಳಿಂದ ಹೀಗೆಯೇ ಹೊಂಡ – ಗುಂಡಿಗಳಿಂದ ತುಂಬಿಕೊಂಡಿದೆ. ರಸ್ತೆ ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ.

ಹೊಂಡ – ಗುಂಡಿಗಳು ಮಾತ್ರವಲ್ಲದೆ ಕಿರಿದಾದ ರಸ್ತೆಯಿಂದಾಗಿ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಕುಂದಾಪುರದಿಂದ ಗುಲ್ವಾಡಿ, ಮಾವಿನಕಟ್ಟೆ ಕಡೆಗೆ ತೆರಳಬೇಕಾದರೆ ಇದು ಹತ್ತಿರದ ಮಾರ್ಗವಾಗಿದೆ. ಈ ಮಾರ್ಗವಾಗಿ ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಕಿರಿದಾದ ರಸ್ತೆಯಿಂದಾಗಿ ಘನ ವಾಹನಗಳ ಸಂಚಾರಕ್ಕೆ ಈಗಾಗಲೇ ನಿರ್ಬಂಧ ವಿಧಿಸಲಾಗಿದೆ. ಹಲವು ವರ್ಷಗಳಿಂದ ಕನಿಷ್ಠ ತೇಪೆ ಕೂಡ ಹಾಕದೇ ಇರುವುದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸಿ, ಈ ರಸ್ತೆಗೆ ಮರು ಡಾಮರು ಮಾಡಬೇಕಾಗಿದೆ.
ಬಳ್ಕೂರು – ಬಸ್ರೂರು ಭಾಗದ ಸ್ಥಳೀಯರು

ರಸ್ತೆ ಬದಿ ಕಸ ಎಸೆತಕ್ಕೆ ಬೇಕಿದೆ ಕಡಿವಾಣ
ತಲ್ಲೂರಿನಿಂದ ನೇರಳಕಟ್ಟೆ, ಆಜ್ರಿ ಕಡೆಗೆ ಸಂಚರಿಸುವ ರಸ್ತೆಯ ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ಸಮೀಪ ರಸ್ತೆ ಬದಿಯೇ ಕಸ ಎಸೆಯುತ್ತಿರುವುದು ಕಂಡು ಬರುತ್ತಿದ್ದು, ಅನೇಕ ಸಮಯ ಗಳಿಂದ ಇಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಿದ್ದರೂ ಕೂಡ ಕಸ ಎಸೆಯುವುದಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ. ರಸ್ತೆ ಬದಿ ಹಲವು ಸಮಯದಿಂದ ಈ ರೀತಿಯಾಗಿ ಕಸ ಎಸೆಯಲಾಗುತ್ತಿದೆ. ಗ್ರಾಮಸ್ಥರು ಮಾತ್ರವಲ್ಲದೆ, ವಾಹನ ಗಳಲ್ಲಿ ಎಲ್ಲೆಲ್ಲಿಂದಲೋ ಬರುವ ಸಾರ್ವಜನಿಕರು ಇಲ್ಲಿ ಬಂದು ಕಸ ಎಸೆದು ಹೋಗುತ್ತಿದ್ದಾರೆ. ಅದರಲ್ಲೂ ಹೆಚ್ಚಿನ ಮಂದಿ ರಾತ್ರಿ ವೇಳೆ ಕಸ ಎಸೆದು ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳಬೇಕಿದೆ.

ಪ್ಲಾಸ್ಟಿಕ್‌ ಮಾತ್ರವಲ್ಲದೆ, ಹಸಿ ಕಸಗಳನ್ನು ಕೂಡ ಇಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ಸಾಂಕ್ರಾಮಿಕ ರೋಗಗಳು ಸೃಷ್ಟಿಯಾಗುವ ಸಾಧ್ಯತೆ ಯಿರುವುದರಿಂದ, ಇಲ್ಲಿ ವಾಹನಗಳಲ್ಲಿ ಬಂದು ಕಸ ಎಸೆಯದಂತೆ ಸಂಬಂಧಪಟ್ಟವರು ಮುನ್ನೆಚ್ಚರಿಕೆ ಕ್ರಮ ವಹಿಸಲಿ.
ಮಾವಿನಕಟ್ಟೆ ಪರಿಸರದ ನಿವಾಸಿಗಳು

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.