ಹವಾಮಾನ ವೈಪರೀತ್ಯ ಹಿನ್ನೆಲೆ: ಲಂಕಾ ಪ್ರಧಾನಿ ಕೊಲ್ಲೂರು ಭೇಟಿ ರದ್ದು


Team Udayavani, Aug 28, 2017, 7:40 AM IST

2708klrm1.jpg

ಕೊಲ್ಲೂರು: ಪ್ರತಿಕೂಲ ಹವಾಮಾನದ ಕಾರಣ ಶ್ರೀಲಂಕಾ ಪ್ರಧಾನಮಂತ್ರಿ ರಣಿಲ್‌ ವಿಕ್ರಮ ಸಿಂಘೆ ಅವರ ರವಿವಾರದ ಕೊಲ್ಲೂರು ಕ್ಷೇತ್ರ ದರ್ಶನ ಕಾರ್ಯಕ್ರಮ ರದ್ದಾಗಿದೆ.

ವಿಕ್ರಮ ಸಿಂಘೆ ಅವರ ಸ್ವಾಗತಕ್ಕಾಗಿ ಅರೆಶಿರೂರಿನ ಹೆಲಿಪ್ಯಾಡ್‌ನ‌ಲ್ಲಿ ಎಲ್ಲ ತಯಾರಿಗಳನ್ನೂ ನಡೆಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ ಪಾಟೀಲ್‌, ಬೈಂದೂರು ತಹಶೀಲ್ದಾರ್‌ ಕಿರಣ್‌ ಜಿ., ಶ್ರೀಲಂಕಾದ ಉನ್ನತ ಅಧಿಕಾರಿಗಳಾದ ಲಲಿತ್‌ ನಾನಾಯಕಾರ, ವಿಶ್ವನಾಥ ಅಫೋನ್ಸ್‌ ಮೊದಲಾದವರು ಸ್ವಾಗತಕ್ಕಾಗಿ ಬೆಳಗ್ಗಿನಿಂದ ಕಾಯುತ್ತಿದ್ದರು. ಆದರೆ ರವಿವಾರ ಬೆಳಗ್ಗಿನಿಂದ ಭಾರೀ ಮೋಡ ಕವಿದ ವಾತಾವರಣ ಹಾಗೂ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಕಾರಣದಿಂದ  ಅರೆಶಿರೂರಿಗೆ ಹೆಲಿಕಾಪ್ಟರನ್ನು ಕಳಿಸಲು ಅಸಾಧ್ಯವಾಗುತ್ತದೆ; ಪ್ರಧಾನಿಯವರ ಯಾನವನ್ನು ರದ್ದುಗೊಳಿಸಬೇಕು ಎಂದು ಎಂದು ಬೆಂಗಳೂರಿನ ವಿಮಾನ ಯಾನದ ಮುಖ್ಯ ಅಧಿಕಾರಿಗಳು ಸಂಬಂಧಪಟ್ಟವರಲ್ಲಿ ಮನವಿ ಮಾಡಿದರು.

ಈ ಕಾರಣಕ್ಕಾಗಿ ಶ್ರೀಲಂಕಾ ಪ್ರಧಾನಿಯ ಕೊಲ್ಲೂರು ಕ್ಷೇತ್ರ ದರ್ಶನ ತಾತ್ಕಾಲಿಕವಾಗಿ ರದ್ದುಗೊಳಿಸ ಲಾಗಿದೆ. ಮಳೆಗಾಲದ ಅನಂತರ ಅವರು ಇಲ್ಲಿಗೆ ಆಗಮಿಸು ವರು ಎಂದು ಜಿಲ್ಲಾಧಿಕಾರಿಗಳು ಘೋಷಿಸಿದರು.

ಭಕ್ತರಿಗೆ ಅವಕಾಶ: ಪ್ರಧಾನ ಮಂತ್ರಿಯ ಆಗಮನವು ಪ್ರತಿಕೂಲ ಹವಾಮಾನದಿಂದ ವಿಳಂಬಗೊಳ್ಳುತ್ತಿರುವುದನ್ನು ಮನಗಂಡ ಕೊಲ್ಲೂರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ‌Âರು ಭಕ್ತರಿಗೆ ದೇವಿಯ ದರ್ಶನಕ್ಕೆ ಅನುವು ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಮುಚ್ಚಿಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಯಿತು

ಚಂಡಿಕಾ ಹೋಮದ ಪೂರ್ಣಾಹುತಿ: ಶ್ರೀಲಂಕಾ ಪ್ರಧಾನಿ ರಣಿಲ್‌ ವಿಕ್ರಮ ಸಿಂಘೆ ಅವರ ಕ್ಷೇತ್ರ ದರ್ಶನವು ಹವಾಮಾನದ ವೈಪರೀತ್ಯದಿಂದ ರದ್ದುಗೊಂಡಿದ್ದರೂ ಶ್ರೀಲಂಕಾದ ಉನ್ನತ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಚಂಡಿಕಾ ಹೋಮದ ಪೂರ್ಣಾಹುತಿಯನ್ನು ನೆರ ವೇರಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.