ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ

ಶಿರ್ವ: ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಅವರಿಗೆ ಸಮ್ಮಾನ

Team Udayavani, Jun 22, 2024, 8:50 PM IST

ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವದ ಅಭಿವೃದ್ಧಿಗೆ ಕಟಿಬದ್ಧ: ಐವನ್‌ ಡಿ ಸೋಜಾ,

ಶಿರ್ವ:ಗ್ರಾಮೀಣ ಪರಿಸರದಲ್ಲಿ ಅಭಿವೃದ್ಧಿಯ ಕೆಲಸಕಾರ್ಯಗಳು ನಡೆಯಬೇಕಿದ್ದು, ಜನಸಂಖ್ಯೆಗೆ ಅನುಗುಣವಾಗಿ ಎಲ್ಲಾ ಮೂಲಭೂತ ಸೌಕರ್ಯಗಳಿರುವ ಶಿರ್ವ ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸುವ ಅವಶ್ಯಕತೆಯಿದೆ.

ಮುದರಂಗಡಿಯಲ್ಲಿ ಹುಟ್ಟಿ ಬೆಳೆದರೂ,ತನ್ನ ರಾಜಕೀಯ ಜೀವನಕ್ಕೆ ಬುನಾದಿ ಹಾಕಿದ ಶಿರ್ವ ಗ್ರಾಮದ ಅಭಿವೃದ್ಧಿಗೆ ಕಟಿಬದ್ಧನಾಗಿರುವೆ ಎಂದು ಕರ್ನಾಟಕ ವಿಧಾನಪರಿಷತ್‌ ಸದಸ್ಯ ಐವನ್‌ ಡಿಸೋಜಾ ಹೇಳಿದರು.

ಅವರು ಶನಿವಾರ ಸಂಜೆ ಶಿರ್ವ ಸಾರ್ವಜನಿಕ ಗಣೇಶೋತ್ಸವ ವೇದಿಕೆಯ ಬಳಿಯಿರುವ ಮಹಿಳಾ ಸೌಧದಲ್ಲಿ ಶಿರ್ವದ ಐವನ್‌ ಡಿಸೋಜಾ ಅಭಿಮಾನಿ ಬಳಗ ಆಯೋಜಿಸಿದ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.

ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಮಾತನಾಡಿ ಛಲದ ಬಲದಿಂದ ಸಾಧನೆ ಸಾಕ್ಷಾತ್ಕಾರವಾಗಬೇಕು.ಪಕ್ಷ ಸಿದ್ಧಾಂತ ಯಾವುದೇ ಇರಲಿ,ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಅಡ್ಡಿಯಾಗಬಾರದು.

ಎಳವೆಯಲ್ಲಿಯೇ ಹೋರಾಟದ ಬದುಕು ಕಟ್ಟಿಕೊಂಡು ಸಮಾಜಕ್ಕೆ ಅರ್ಪಿಸಿಕೊಂಡ ಐವನ್‌ ಡಿಸೋಜಾ ಅವರೊಂದಿಗೆ ಶಿರ್ವದ ಅಭಿವೃದ್ಧಿಯಲ್ಲಿ ಕೈಜೋಡಿಸುವೆ ಎಂದು ಹೇಳಿದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಮಾತನಾಡಿ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗುವುದು ಸುಲಭವಲ್ಲ. ತಾನು ನಂಬಿರುವ ವಿಚಾರಧಾರೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿದಾಗ ಉನ್ನತ ಅವಕಾಶಗಳು ಒದಗಿ ಬರುತ್ತದೆ ಎಂದು ಹೇಳಿದರು.

ಶಿರ್ವ ಚರ್ಚ್‌ ದ್ವಾರದ ಬಳಿ ಸಾರ್ವಜನಿಕವಾಗಿ ಸ್ವಾಗತಿಸಿ ಬಳಿಕ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಂಡು ಮಹಿಳಾ ಸೌಧಕ್ಕೆ ಕರೆತರಲಾಯಿತು. ಕಾರ್ಯಕ್ರಮದಲ್ಲಿ ಐವನ್‌ ಡಿಸೋಜಾ ಅವರನ್ನು ಸಮ್ಮಾನಿಸಿ ಗೌರವಿಸ ಲಾಯಿತು. ನಿವೃತ್ತ ಶಿಕ್ಷಕ ಗಿಲ್ಬರ್ಟ್‌ ಪಿಂಟೋ ಸಮ್ಮಾನಪತ್ರ ವಾಚಿಸಿದರು.

ಶಿರ್ವ ಆರೋಗ್ಯ ಮಾತಾ ಚರ್ಚ್‌ನ ಪ್ರಧಾನ ಧರ್ಮ ಗುರು ವಂ|ಡಾ| ಲೆಸ್ಲಿ ಡಿಸೋಜಾ, ಶಿರ್ವ ಸುನ್ನಿ ಜಾಮಿಯಾ ಮಸೀದಿಯ ಖತೀಬರಾದ ಜ|ಸಿರಾಜುದ್ದೀನ್‌ ಝೈನಿ ಶುಭ ಹಾರೈಸಿದರು. ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್‌ ಪೂಜಾರಿ ವೇದಿಕೆಯಲ್ಲಿದ್ದರು. ಉಪಾಧ್ಯಕ್ಷ ವಿಲ್ಸನ್‌ ರೊಡ್ರಿಗಸ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬೆಳ್ಳೆ ಶಿವಾಜಿ ಎಸ್‌. ಸುವರ್ಣ, ಮಾಜಿ ತಾ.ಪಂ. ಸದಸ್ಯ ಮೈಕಲ್‌ ರಮೇಶ್‌ ಡಿಸೋಜಾ, ಅಲೆವೂರು ಹರೀಶ್‌ ಕಿಣಿ,ಪ್ರಶಾಂತ್‌ ಜತ್ತನ್ನ,ಜಿತೇಂದ್ರ ಫುರ್ಟಾಡೋ,ಜೋಸೆಫ್‌ ಡಿಸೋಜಾ ಮತ್ತಿತರ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಐವನ್‌ ಡಿಸೋಜಾ ಅಭಿಮಾನಿ ಬಳಗದ ಅಧ್ಯಕ್ಷ ಮೆಲ್ವಿನ್‌ ಅರಾನ್ಹಾ ಸ್ವಾಗತಿಸಿದರು. ಸ್ಟೀವನ್‌ ಕುಲಾಸೋ ಕಾರ್ಯಕ್ರಮ ನಿರೂಪಿಸಿ,ಕೆ.ಆರ್‌.ಪಾಟ್ಕರ್‌ ವಂದಿಸಿದರು.

ಗ್ರಾ.ಪಂ.ಗೆ 10 ಲ. ರೂ. ಅನುದಾನ
ಗ್ರಾ.ಪಂ. ಮೇಲ್ದರ್ಜೆಗೇರಿದರೆ ಹೆಚ್ಚಿನ ಅನುದಾನ ಸಿಗಲಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಶಿರ್ವ ಗ್ರಾ.ಪಂ.ನ ಹಳೆ ಕಟ್ಟಡದ ದುರಸ್ತಿ ಕಾಮಗಾರಿ ಪೂರ್ತಿಗೊಳಿಸಲು ರಾಜ್ಯ ಸರಕಾರದ ನಿಧಿಯಿಂದ 10 ಲ. ರೂ.ಗಳ ಆನುದಾನ ನೀಡಲು ಶ್ರಮಿಸುವೆ.
-ಐವನ್‌ ಡಿಸೋಜಾ, ವಿಧಾನ ಪರಿಷತ್‌ ಸದಸ್ಯರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.