ಉತ್ತಮ ಮಳೆ, ಕೃತಕ ನೆರೆ, ಕಾಂಕ್ರೀಟ್‌ ಸ್ಲ್ಯಾಬ್‌ ಬಿರುಕು


Team Udayavani, May 21, 2022, 11:03 AM IST

concrete-slab

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿಯಿತು. ಗುರುವಾರ ಸಂಜೆ ಬಳಿಕ ತುಸು ಬಿಡುವು ನೀಡಿದ್ದ ಮಳೆ ತಡರಾತ್ರಿ ಮತ್ತೆ ಆರಂಭವಾಗಿ ಪೂರ್ತಿ ಮಳೆಯಾಯಿತು.

ಉಡುಪಿ, ಬ್ರಹ್ಮಾವರ, ಕಾಪು ಭಾಗ ಗಳಲ್ಲಿಯೂ ಇದೇ ರೀತಿ ಮಳೆ ಮುಂದು ವರಿಯಿತು. ಉಡುಪಿ ನಗರದ ಕರಾವಳಿ ಜಂಕ್ಷನ್‌ ಬಳಿ ಕೃತಕ ನೆರೆಹಾವಳಿ ಸೃಷ್ಟಿ ಯಾಯಿತು. ನಗರದ ಅಂಬಾಗಿಲು, ಕಲ್ಸಂಕ, ಆದಿಉಡುಪಿ, ತೆಂಕಪೇಟೆ, ಬಡಗು ಪೇಟೆ ಭಾಗಗಳಲ್ಲಿಯೂ ಮಳೆನೀರು ರಸ್ತೆ ಯಲ್ಲಿಯೇ ಹರಿಯುತ್ತಿತ್ತು.

ಶಿರಿಬೀಡು ಬಳಿ ಕೃತಕ ಹೊಂಡ

ಕೃತಕ ಹೊಂಡದಲ್ಲಿ ನೀರು ಶೇಖರಣೆ ಯಾಗಿ ತ್ಯಾಜ್ಯ ತುಂಬಿಕೊಂಡ ಘಟನೆ ಶಿರಿಬೀಡು ಬಳಿ ನಡೆಯಿತು.ಕಾಮಗಾರಿ ಗೆಂದು ಅಗೆದು ಹಾಕಲಾಗಿದ್ದ ಈ ಗುಂಡಿ ಹಲವು ದಿನಗಳಿಂದಲೂ ಖಾಲಿ ಬಿದ್ದಿತ್ತು. ಈಗ ಇಲ್ಲಿ ನೀರು ಶೇಖರಣೆಯಾಗಿದ್ದು, ರೋಗ ರಜಿನಗಳು ಆವರಿಸುವ ಭೀತಿಯೂ ಕಾಡುತ್ತಿದೆ. ಇದನ್ನು ತೆರವುಗೊಳಿಸದಿದ್ದರೆ ಪಾದಚಾರಿಗಳೂ ಇದಕ್ಕೆ ಬೀಳುವ ಸಾಧ್ಯತೆಗಳಿವೆ ಎನ್ನುತ್ತಾರೆ ಸ್ಥಳೀಯರು.

ಬನ್ನಂಜೆಯಲ್ಲಿ ನೆರೆ ಹಾವಳಿ

ಬನ್ನಂಜೆ ಗರೋಡಿಯ ಒಳಭಾಗದ ತಗ್ಗು ಪ್ರದೇಶಗಳಲ್ಲಿ ರಸ್ತೆಯಲ್ಲಿಯೇ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಿಂದಲೇ ಚಾಲನೆ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಶುಭಸಮಾರಂಭಗಳಿಗೆ ಮಳೆಕಾಟ

ನಗರದ ಬಹುತೇಕ ಕಡೆಗಳಲ್ಲಿ ಶುಭ ಸಮಾರಂಭಗಳಿಗೆ ಮುಹೂರ್ತ ನಿಗದಿ ಆಗಿದ್ದು, ಮಳೆಯಿಂದಾಗಿ ಎಲ್ಲವೂ ಅಸ್ತವ್ಯಸ್ತ ವಾಗಿದೆ. ಜೂನ್‌ ತಿಂಗಳಿನ ಮಳೆಗಾಲಕ್ಕೂ ಮೊದಲು ಶುಭಕಾರ್ಯ ಮುಗಿಸಲು ಹೊರಟವರಿಗೆ ಆಸಾನಿ ಚಂಡಮಾರುತ ತಲೆನೋವು ಉಂಟು ಮಾಡಿದೆ.

ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು

ನಗರದ ಕಲ್ಸಂಕ ಭಾಗದಲ್ಲಿ ವರ್ಷಗಳ ಹಿಂದಷ್ಟೆ ಸುಸಜ್ಜಿತವಾಗಿ ನಿರ್ಮಿಸಿದ್ದ ಕಾಂಕ್ರಿಟ್‌ ಸ್ಲ್ಯಾಬ್‌ನಲ್ಲಿ ಬಿರುಕು ಬಿಟ್ಟ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸ್ಮಾರ್ಟ್‌ಸಿಟಿ ಕಾಮಗಾರಿಯು ನಡೆಯುತ್ತಿದ್ದು, ನಿರಂತರ ಸುರಿದ ಮಳೆಗೆ ಕಾಂಕ್ರಿಟ್‌ ರಸ್ತೆಯ ಸ್ಲ್ಯಾಬ್‌ಗಳು ಬಿರುಕು ಬಿಟ್ಟಿದೆ. ಕಳಪೆ ಕಾಮಗಾರಿಯಿಂದಲೂ ಹೀಗಾಗಿರುವ ಸಾಧ್ಯತೆಯಿದೆ. ವಾಹನ ಸವಾರರಿಗೆ ಯಾವುದೇ ಸಮಸ್ಯೆಯಾಗದಂತೆ ಸಂಬಂಧಪಟ್ಟ ಇಲಾಖೆ, ಜನ ಪ್ರತಿನಿಧಿಗಳು ತುರ್ತಾಗಿ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.