![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 19, 2024, 9:32 PM IST
ಮಣಿಪಾಲ: ಕೋಲ್ಕತಾದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಸೋಮವಾರ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮೊಂಬತ್ತಿ ಹಿಡಿದು, ಮೌನ ಮೆರವಣಿಗೆ ನಡೆಸಿದರು.
ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಅಧ್ಯಾಪಕರು, ವೈದ್ಯಕೀಯ ಸಿಬಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ವೈದ್ಯೆ ಮೇಲೆ ನಡೆದ ಕ್ರೂರ ಅಪರಾಧವು ಭಾರತದಲ್ಲಿ ಮಹಿಳೆಯರು ಮತ್ತು ವೈದ್ಯರ ಸುರಕ್ಷೆ ಬಗೆಗಿನ ಕಳವಳವನ್ನು ಹೆಚ್ಚಿಸಿದೆ.
ಯಾವುದೇ ರೂಪದ ಹಿಂಸೆಯನ್ನು ಸಹಿಸುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕೆಂಬ ಬೇಡಿಕೆಯಲ್ಲಿ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ ಎಂಬ ಸಂದೇಶ ಸಾರಿದರು.
ಮೆರವಣಿಗೆಯಲ್ಲಿ ಕೆಎಂಸಿ ಆಸ್ಪತ್ರೆ ಡೀನ್ ಡಾ| ಪದ್ಮರಾಜ್ ಹೆಗ್ಡೆ, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ಮತ್ತು ಅಸೋಸಿಯೇಟ್ ಡೀನ್ಗಳು ಸಹಿತ ಪ್ರಮುಖರು ಭಾಗವಹಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.