New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ


Team Udayavani, Sep 27, 2024, 1:16 AM IST

New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆ ಮೇಲೆ ಕೈಗೊಂಡು ಕೈಗಾರಿಕೆ ಪ್ರದೇಶವನ್ನು ವಿಸ್ತರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಕೈಗಾರಿಕಾ ಸ್ಪಂದನ ಸಮಿತಿ, ಕ್ಲಸ್ಟರ್‌ ಸಮಿತಿ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಹಾಗೂ ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರದಲ್ಲಿ 45.75 ಎಕ್ರೆ ಸಹಿತ 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲಕರಿಗೆ ಪರಿಹಾರ ಧನ ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರಕಾರಿ ಜಮೀನು ಮಂಜೂರಾತಿ ಪ್ರಕ್ರಿಯೆ ಬಾಕಿ ಇದೆ. ವಿಶೇಷ ಭೂ ಸ್ವಾಧೀನ ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸ್ವಾಧೀನ ಪ್ರಕ್ರಿಯೆಯನ್ನು ತತ್‌ಕ್ಷಣ ಪೂರ್ಣಗೊಳಿಸಬೇಕು ಎಂದರು.

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 44.84 ಎಕ್ರೆ ಖಾಸಗಿ ಜಮೀನು ಹಾಗೂ 5.58 ಎಕ್ರೆ ಸರಕಾರಿ ಜಮೀನು ಸೇರಿ 50.42 ಎಕ್ರೆ ಜಮೀನಿನ ಸ್ವಾಧೀನ ಪ್ರಕ್ರಿಯೆಯ ಪ್ರಗತಿ ಕುಂಠಿತವಾಗಿದೆ. ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದರು.

ಬೆಳಪು ಕೈಗಾರಿಕೆ ಪ್ರದೇಶದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಕೆಐಎಡಿಬಿ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಮೂಲಸೌಕರ್ಯ ಕಲ್ಪಿಸಬೇಕು. ಮಣಿಪಾಲದ ಶಿವಳ್ಳಿ ಕೈಗಾರಿಕೆ ಪ್ರದೇಶದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸಂಪರ್ಕ ಕಾಮಗಾರಿಯನ್ನು ಮಳೆಗಾಲ ಮುಗಿದ ಕೂಡಲೇ ಆದ್ಯತೆ ಮೇಲೆ ಕೈಗೊಳ್ಳಬೇಕು. ಈ ಭಾಗದಲ್ಲಿರುವ ರೆಡಿಮಿಕ್ಸ್ ಕೇಂದ್ರಗಳಲ್ಲಿ ವ್ಯವಸ್ಥಿತವಾದ ನಿರ್ವಹಣೆ ಇಲ್ಲದ ಕಾರಣ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಪರಿಶೀಲಿಸಬೇಕು ಎಂದು ನಿರ್ದೇಶಿಸಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆ ಯಡಿ ಆರ್ಥಿಕ ನೆರವು ಕೋರಿ ಅರ್ಜಿಗಳನ್ನು ಬ್ಯಾಂಕ್‌ಗಳು ನಿಯಮಾನುಸಾರ ಶೀಘ್ರ ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ರಫ್ತುದಾರರನ್ನು ಉತ್ತೇಜಿಸಲು ಎಲ್ಲ ರೀತಿಯಲ್ಲೂ ಸಹಕರಿಸಬೇಕು. ಅವರಿಗೆ ಅಗತ್ಯವಿರುವ ಪರವಾನಿಗೆ, ನಿರಾಪೇಕ್ಷಣ ಪತ್ರಗಳನ್ನು ವಿಳಂಬವಿಲ್ಲದೇ ನಿಯಮಾನುಸಾರ ಶೀಘ್ರ ನೀಡಬೇಕು ಎಂದರು.

ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್‌ ವಿ. ನಾಯಕ್‌, ಪೌರಾಯುಕ್ತ ರಾಯಪ್ಪ, ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಮೂರ್ತಿ, ಸಣ್ಣ ಕೈಗಾರಿಕೆ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್‌ ಕುಂದರ್‌, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

k

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

CM ರಾಜೀನಾಮೆ ನೀಡುವುದು ಸೂಕ್ತ: ಸಂಸದ ಕೋಟ ಶ್ರೀನಿವಾಸ ಪೂಜಾರಿ

CM ರಾಜೀನಾಮೆ ನೀಡುವುದು ಸೂಕ್ತ: ಸಂಸದ ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.