ಡ್ಯಾಮ್‌ ಕಾಮಗಾರಿಯಿಂದ ಇಂದ್ರಾಣಿ ಬ್ಲಾಕ್‌ ಬಾವಿಗಳಿಗೆ ಕಲುಷಿತ ನೀರು

ನಗರಸಭೆಗೆ ದೂರು

Team Udayavani, Apr 7, 2022, 12:32 PM IST

well

ಉಡುಪಿ: ನಗರದಲ್ಲಿ ಕಲುಷಿತಗೊಂಡು ಹರಿಯುತ್ತಿರುವ ಇಂದ್ರಾಣಿ ನದಿ ಮತ್ತು ಮಳೆ ನೀರು ಸಂಪರ್ಕ ತೋಡುಗಳಿಂದ ಹಲವಾರು ಬಾವಿಗಳು ಉಪಯೋಗ ಶೂನ್ಯವಾಗಿದೆ. ಈಗ ಮತ್ತೂಂದು ಅವಾಂತರವಾಗಿದ್ದು, ಮಠದಬೆಟ್ಟು ಸಮೀಪ ನಡೆಯುತ್ತಿರುವ ಸಣ್ಣ ನೀರಾವರಿ ಇಲಾಖೆಯ ಕಿಂಡಿ ಅಣೆಕಟ್ಟಿನ ಕಾಮಗಾರಿ ವೇಳೆ ಬ್ಲಾಕ್‌ ಆಗಿ ಕೆಲವು ಮನೆಗಳ ಬಾವಿಗಳಿಗೆ ಕಲುಷಿತ ನೀರು ಸೇರಿಕೊಂಡಿದೆ.

ಇಂದ್ರಾಣಿ ನದಿ ಹಾಳಾದ ಬಳಿಕ ನಗರದಲ್ಲಿ ನೂರಾರು ಬಾವಿಗಳು ಪಾಳು ಬೀಳುತ್ತಿವೆ. ಇದೀಗ ಗುಂಡಿಬೈಲು ವಿಜಯತಾರಾ ಹೊಟೇಲ್‌ ಹಿಂಬದಿ ಪರಿಸರದ ಸರದಿಯಾಗಿದೆ. ಇಲ್ಲಿನ ಸಾರ್ವಜನಿಕರು ತಮ್ಮ ಬಾವಿ ಕಲುಷಿತವಾಗಿರುವುದನ್ನು ಕಂಡು ಒಮ್ಮೆಲೆ ಆತಂಕಗೊಂಡಿದ್ದಾರೆ. ಬಾವಿ ನೀರು ಕಲುಷಿತಗೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಜನರು ನಗರಸಭೆಗೆ ಮೊರೆ ಹೋಗಿದ್ದಾರೆ.

ನೀರು ನಿಂತು ದುರ್ವಾಸನೆ

ಮಠದಬೆಟ್ಟುವಿನಲ್ಲಿ ಡ್ಯಾಂ ಕಾಮಗಾರಿ ವೇಳೆ ಮಣ್ಣು ಹಾಕಿದ್ದರು. ಇಲ್ಲಿನ ಗುಂಡಿಬೈಲು ಮಳೆ ನೀರಿನ ತೋಡು ಇಂದ್ರಾಣಿ ನದಿಗೆ ಸಂಪರ್ಕವಿದ್ದು, ಕಾಮಗಾರಿ ಪರಿಣಾಮ ನೀರು ಸರಾಗವಾಗಿ ಸಾಗದೆ ಒಂದೆಡೆ ನಿಂತು, ಹಿಮ್ಮುಖವಾಗಿ ನೀರು ಪಸರಿಸಿತು. ಮಂಗಳವಾರ ರಾತ್ರಿಯಿಂದ ನೀರು ಹೆಚ್ಚುತ್ತಿದ್ದಂತೆ ಈ ಭಾಗದಲ್ಲಿ ಬಾವಿಗಳಿಗೆ ನೀರು ಅಂತರ್ಜಲದ ಮೂಲಕ ಪಸರಿಸಿದೆ. ಬಾವಿ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿ ದುರ್ವಾಸನೆಯಿಂದ ಕೂಡಿದೆ. ಈ ತೋಡಿಗೆ ಎರಡು ಬದಿಯಲ್ಲಿ ಕಾಂಕ್ರೀಟ್‌ ತಡೆಗೋಡೆಯನ್ನು ನಿರ್ಮಿಸದ ಪರಿಣಾಮದಿಂದ ಬಾವಿ ಕಲುಷಿತವಾಗಿದೆ. ಮಳೆಗಾಲದಲ್ಲಿ ನೆರೆ ಬಂದಾಗಲೂ ಈ ಪರಿಸರದ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈ ಬಗ್ಗೆ ನಗರಸಭೆ, ಸಂಬಂಧಪಟ್ಟ ಇಲಾಖೆಗಳು ಶಾಶ್ವತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಹರಿಯುವ ನೀರಿಗೆ ತಡೆಯಾಗದಂತೆ ಕಾಮಗಾರಿ

ಮಠದಬೆಟ್ಟು ಭಾಗದಲ್ಲಿ ಪ್ರಸ್ತುತ ಸಣ್ಣ ನೀರಾವರಿ ಇಲಾಖೆ ಕಡೆಯಿಂದ ಡ್ಯಾಂ ಕಾಮಗಾರಿ ನಿರ್ವಹಿಸುತ್ತಿದೆ. ಇಂದ್ರಾಣಿಯಲ್ಲಿ ಹರಿಯುವ ನೀರಿಗೆ ತಡೆ ಮಾಡದಂತೆ ತತ್‌ಕ್ಷಣ ಪರಿಶೀಲಿಸಿ ಸರಿಪಡಿಸುವಂತೆ ಇಲಾಖೆ ಎಂಜಿನಿಯರ್‌ಗಳಿಗೆ ನಗರಸಭೆಯಿಂದ ಸೂಚನೆ ನೀಡಿದ್ದೇವೆ. – ಯಶವಂತ್‌, ಎಇಇ, ಉಡುಪಿ

ನಗರಸಭೆ ಕಾಮಗಾರಿ ನಿರ್ವಹಿಸಲು ಸೂಚನೆ ಸ್ಥಳೀಯರಿಂದ ಈ ಬಗ್ಗೆ ದೂರು ಕೇಳಿ ಬಂದ ಕೂಡಲೆ ನೀರಿನ ಹರಿವಿಗೆ ತಡೆಯಾಗದಂತೆ ಪೈಪ್‌ ಅಳವಡಿಸಿಕೊಂಡು ಕಾಮಗಾರಿ ನಿರ್ವಹಿಸಲು ಸೂಚನೆ ನೀಡಿದ್ದೇವೆ. – ಶೇಷಕೃಷ್ಣ, ಎಇಇ, ಸಣ್ಣ ನೀರಾವರಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.