ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ


Team Udayavani, Oct 18, 2021, 6:55 AM IST

ದೊಡ್ಡವರು ಪಡೆದಿದ್ದರಷ್ಟೇ ಮಕ್ಕಳಿಗೆ ಕೋವಿಡ್‌ ಲಸಿಕೆ

ಉಡುಪಿ: ನವೆಂಬರ್‌ನಲ್ಲಿ ಮಕ್ಕಳಿಗೆ ಬರಲಿರುವ ಲಸಿಕೆಯನ್ನು ಯಶಸ್ವಿ ಗೊಳಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ನಡೆಸುತ್ತಿದೆ.

ಮನೆಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಲಸಿಕೆ ಹಾಕಿಸಲಾಗುತ್ತಿದೆ. ಇಲ್ಲ ವಾದರೆ ಮಕ್ಕಳಿಗೆ ಲಸಿಕೆ ಹಾಕಿಯೂ ಪ್ರಯೋಜನವಿಲ್ಲ. ದೊಡ್ಡವರಿಂದ ಇತರರಿಗೂ ಸೋಂಕು ಹರಡಬಹುದು ಎಂಬುದು ಆರೋಗ್ಯ ಇಲಾಖೆ ಲೆಕ್ಕಾಚಾರ.

12ರಿಂದ 18 ವರ್ಷದ ಮಕ್ಕಳಿಗೆ ಜೈಕೋ ಡಿ ಲಸಿಕೆ ಬರುವ ಸಾಧ್ಯತೆಗಳಿದ್ದು ಕೊವ್ಯಾಕ್ಸಿನ್‌ ಸಾಧ್ಯತೆ ಕ್ಷೀಣವಾಗಿದೆ. ಕೊವ್ಯಾಕ್ಸಿನ್‌ಗೆ ಪ್ರಸ್ತಾವನೆ ಕಳುಹಿಸಿದ್ದು ಇನ್ನಷ್ಟೇ ಸರಕಾರ ಅನುಮತಿ ನೀಡಬೇಕಾಗಿದೆ. ಮಕ್ಕಳ ಲಸಿಕೆ ಚುಚ್ಚುಮದ್ದಿನ ರೂಪದಲ್ಲಿರದೆ ಪಂಚ್‌ ಮಾಡುವ ರೀತಿಯದ್ದಾಗಿದೆ. ಇದು ನೋವು ತಪ್ಪಿಸುವ ಕ್ರಮವಾಗಿದೆ. ದೊಡ್ಡವರಿಗೆ ಎರಡು ಡೋಸ್‌ ಕೊಡುತ್ತಿದ್ದರೆ, ಮಕ್ಕಳಿಗೆ ಮೂರು ಡೋಸನ್ನು ತಜ್ಞರು ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಲಸಿಕೆ ಸಾಧನೆ
ಜಿಲ್ಲೆಯಲ್ಲಿ ಹಿಂದೆ 9 ಲಕ್ಷ ಜನರ ಪರಿಷ್ಕೃತ ಗುರಿಯಲ್ಲಿ ಶೇ. 101 ಸಾಧನೆಯಾದ ಬಳಿಕ ಈಗ 9.99 ಲಕ್ಷಕ್ಕೆ ಪರಿಷ್ಕರಿಸಲಾಗಿದೆ. ಹಿಂದೆ ಇದ್ದ 10.2 ಲಕ್ಷ ಗುರಿಗೂ ಪರಿಷ್ಕೃತ ಗುರಿಗೂ ಬಹಳ ವ್ಯತ್ಯಾಸಗಳಿಲ್ಲ. ಹೀಗಾಗಿ ಇದುವರೆಗೆ ಮೊದಲ ಬಾರಿಯ ಲಸಿಕೆ ನೀಡಿದ ಸಾಧನೆ ಶೇ. 91.36 ಆಗಿದೆ. ಎರಡನೆಯ ಲಸಿಕೆ ಶೇ. 47 ಸಾಧನೆಯಾಗಿದೆ. ಮೊದಲ ಬಾರಿ ಪರಿಷ್ಕೃತಗೊಂಡಾಗ 2ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಮೊದಲಿನಂತೆ ಈಗಿನ ಪರಿಷ್ಕೃತ ಗುರಿಯಲ್ಲಿ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 326 ಹೊಸ ಪ್ರಕರಣ ಪತ್ತೆ | 380 ಸೋಂಕಿತರು ಗುಣಮುಖ

15 ದಿನಗಳಿಂದ ಮೊದಲ ಡೋಸ್‌ ತೆಗೆದುಕೊಂಡವರಿಗಿಂತ 2ನೇ ಡೋಸ್‌ ತೆಗೆದುಕೊಂಡವರ ಸಂಖ್ಯೆ ಹೆಚ್ಚಿದೆ. ನವರಾತ್ರಿಯ 3 ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಿದ ವಿಶೇಷ ಲಸಿಕಾ ಅಭಿಯಾನದಲ್ಲಿ ಗುರಿ ಮೀರಿ ಸಾಧನೆ ಯಾಗಿದೆ. ಸೋಮವಾರ, ಮಂಗಳವಾರ ತಲಾ 7,000 ಹಾಗೂ ಬುಧವಾರ 12,000 ಲಸಿಕೆ ವಿತರಣೆಯಾಗಿದೆ. ಗುರುವಾರ, ಶುಕ್ರವಾರ ರಜೆ ಇದ್ದರೂ ಕೆಲವು ಲಸಿಕೆ ಕೇಂದ್ರಗಳು ಕಾರ್ಯಾಚರಿಸಿವೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.