ಪಿಕ್ ಅಪ್-ಬೈಕ್ ಢಿಕ್ಕಿ; ಇಬ್ಬರಿಗೆ ತೀವ್ರ ಗಾಯ
Team Udayavani, Jun 7, 2022, 1:17 AM IST
ಪಡುಬಿದ್ರಿ: ಹೆದ್ದಾರಿ ಯೂ ಟರ್ನ್ ವೇಳೆ ಬೊಲೆರೋ ಪಿಕ್ ಅಪ್ ವಾಹನದ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಪಡುಬಿದ್ರಿ ಬೀಡು ಬಳಿಯ ಸುಜ್ಲಾನ್ ಗೇಟ್ ಎದುರು ಜೂ. 5ರ ಸಂಜೆ ಉಡುಪಿ-ಮಂಗಳೂರು ಏಕಮುಖ ಸಂಚಾರ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ಗೆ ಢಿಕ್ಕಿಯಾಗಿ ಮೂಲತಃ ಬಾಗಲಕೋಟೆ ಜಿಲ್ಲೆಯ, ಹೊಸಬೆಟ್ಟು ನಿವಾಸಿ ಬೈಕ್ ಸವಾರ ನಾಗರಾಜ್ (25) ಹಾಗೂ ಸಹ ಸವಾರ ಗಂಗಾಧರ್ (18) ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ರಭಸಕ್ಕೆ ಬೈಕ್ನ ಹ್ಯಾಂಡಲ್ ತುಂಡಾಗಿದೆ. ಮುಂಡ್ಕೂರಿಗೆ ಪಲಿಮಾರು ಮೂಲಕ ಹೋಗುವ ಧಾವಂತದಲ್ಲಿ ಸುಜ್ಲಾನ್ ಗೇಟ್ ರಸ್ತೆಗೆ ಪಿಕ್ ಅಪ್ ಚಾಲಕ ತಿರುಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸವಾರ ನಾಗರಾಜ್ ಅವರ ಬಲಕೈ, ಬಲಗಾಲು ಹಾಗೂ ಮುಖಕ್ಕೆ ತೀವ್ರ ಗಾಯಗಳಾಗಿವೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಹಿಂಬದಿ ಸವಾರ ಗಂಗಾಧರ್ ಅವರ ಕೈ ಕಾಲು ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಇಬ್ಬರನ್ನೂ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.