![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 12, 2022, 1:47 AM IST
ಕಾಪು: ಮಲ್ಲಾರು ಗ್ರಾಮದ ಫಕೀರನಕಟ್ಟೆಯಿಂದ ಮೂಳೂರು ಕಡೆಗೆ ಹೊಂಡಾ ಆಕ್ಟಿವಾ ಸ್ಕೂಟರ್ನಲ್ಲಿ ಮಾರಾಟಕ್ಕಾಗಿ ಅಕ್ರಮವಾಗಿ ದನದ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಸ್ಕೂಟರ್ ಸವಾರ ಹುಸೇನಬ್ಬ ಮತ್ತು ಸಹ ಸವಾರ ಶಂಶುದ್ಧೀನ್ ಬಂಧಿತ ಆರೋಪಿಗಳು.
ಕಾಪು ಎಸೈ ಶ್ರೀಶೈಲ ಮುರಗೋಡ ನೇತೃತ್ವದ ಪೊಲೀಸರ ತಂಡವು ಮಲ್ಲಾರು ಕೋಟೆ ರಸ್ತೆಯ ರೈಲ್ವೇ ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿರುವಾಗ ಫಕೀರನಕಟ್ಟೆ ಕಡೆಯಿಂದ ಬಂದ ಸ್ಕೂಟರ್ನ ಮುಂಭಾಗದಲ್ಲಿ ಹಳದಿ ಮತ್ತು ಹಸುರು ಬಣ್ಣದ ಪಾಲಿಥಿನ್ ಚೀಲದಲ್ಲಿ 15 ಕೆ.ಜಿ.ಯಷ್ಟು ದನದ ಮಾಂಸವನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿರುವುದನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಆರೋಪಿಗಳು ಯಾವುದೇ ಪರವಾನಿಗೆಯಿಲ್ಲದೇ ಬೀದಿ ಬದಿಯಲ್ಲಿದ್ದ ದನವನ್ನು ಕಳವು ಮಾಡಿ, ಹಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ಬಾಯ್ಬಿಟ್ಟಿದ್ದರು.
ಆರೋಪಿಗಳು ನೀಡಿರುವ ಮಾಹಿತಿಯಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.